LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕನ್ನಡ ಮಾತೆಯ ಅಧಿಕೃತ ಚಿತ್ರ ಬಿಡುಗಡೆ 

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ನಾಡದೇವಿಯ ವಿವಿಧ ಭಾವಚಿತ್ರಗಳನ್ನು ಬಳಕೆ ಮಾಡಲಾಗುತ್ತಿತ್ತು. ಆದರೆ ಇದೀಗ ರಾಜ್ಯ ಸರ್ಕಾರದಿಂದ ಅಧಿಕೃತ ಕರ್ನಾಟಕ ಮಾತೆಯ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ.



ಈ ಚಿತ್ರವನ್ನು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿಯೂ ಬಳಕೆ ಮಾಡುವಂತೆ ಸೂಚಿಸಲಾಗಿದೆ.



ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆದೇಶವನ್ನು ಹೊರಡಿಸಲಾಗಿದೆ. ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಕರ್ನಾಟಕ ಕಲೆ, ಸಂಸ್ಕೃತಿಯನ್ನು ಬಿಂಬಿಸುವಂತ, ಐವರು ಕಲಾವಿಧರ ಸಮಿತಿಯು ಶಿಫಾರಸ್ಸು ಮಾಡಿ, ಸರ್ಕಾರ ಒಪ್ಪಿರುವ ಕರ್ನಾಟಕ ಮಾತೆಯ ಚಿತ್ರವನ್ನು ಬಳಕೆ ಮಾಡುವಂತೆ ತಿಳಿಸಿದೆ.



ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿರುವ ಕರ್ನಾಟಕ ಮಾತೆಯ ಅಧಿಕೃತ ಚಿತ್ರದಲ್ಲಿ ನಾಡಿನ ಹಿನ್ನಲೆಯಲ್ಲಿ ಕರ್ನಾಟಕ ನಕ್ಷೆಯನ್ನು ಒಳಗೊಂಡಿದೆ. ಅಲ್ಲದೇ ಮುಖದಲ್ಲಿ ಸ್ವಭಾವಿಕ ಸೌಂದರ್ಯ, ದೈವಿಕ ಭಾವವನ್ನು ಸೂಚಿಸುವಂತೆ ಇದೆ.



ಎರಡು ಕೈಗಳು ವಾಸ್ತವಿಕತೆಗೆ ಹತ್ತಿರವಾಗುವಂತೆ ಕಾಣುತ್ತಿವೆ. ನಾಡದೇವಿಯ ಬಲಗೈಯಲ್ಲಿ ಅಭಯ ಮುದ್ರೆಯಿದೆ. ಎಡಗೈಯಲ್ಲಿ ತಾಳೆಗರಿಯು ಕನ್ನಡ ಭಾಷಾ ಸಂಪತ್ತು, ಜ್ಞಾನ ಸಮೃದ್ಧಿಯನ್ನು ಸೂಚಿಸುವಂತಿದೆ. ಇದಲ್ಲದೇ ಇನ್ನೂ ಹಲವು ವೈಶಿಷ್ಯಗಳನ್ನು ಒಳಗೊಂಡಂತೆ ಈ ಚಿತ್ರವನ್ನು ಕೆ.ಸೋಮಶೇಖರ ರಚಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು