LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಫೆ.೮ರಂದು ಬೃಹತ್ ಹಿಂದೂ ಸಮಾಜೋತ್ಸವ: ಸದಾಶಿವ ಶ್ರೀ.

ಹಾವೇರಿ: ಜಗತ್ತಿನಲ್ಲಿ ಹಿಂದೂ ಸಂಸ್ಕೃತಿ ಶ್ರೇಷ್ಠ ಸಂಸ್ಕೃತಿಯಾಗಿದ್ದು, ಇದರ ಪರಂಪರೆ, ಸಂಸ್ಕೃತಿ ಬಗ್ಗೆ ಸಮಾಜದ ಜನರಲ್ಲಿ ಜಾಗೃತಿ ಮೂಡಿಸಿ ಒಗ್ಗೂಡಿಸುವ ಉದ್ದೇಶದಿಂದ ಫೆ.೮ರಂದು ನಗರದಲ್ಲಿ ಹಿಂದೂ ಸಮ್ಮೇಳನ ಸಮಿತಿಯಿಂದ ’ಬೃಹತ್ ಹಿಂದೂ ಸಮಾಜೋತ್ಸವ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು  ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.

ನಗರದ ಹುಕ್ಕೇರಿಮಠದಲ್ಲಿ ರವಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ ಸಮಾಜ ಕವಲು ದಾರಿಯಲ್ಲಿ ಸಾಗುತ್ತಿದ್ದು, ಅದನ್ನು ಸರಿಪಡಿಸಿ ಸಮಾಜದ ಜನರನ್ನು ಜಾಗೃತಗೊಳಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಿದ್ದಾರೆ. ಜಾತಿ, ಮತ, ಪಂಥ ಎಣಿಸದೇ ಎಲ್ಲರನ್ನೂ ಒಗ್ಗೂಡಿಸುವುದು ಈ ಕಾರ್ಯಕ್ರಮ ಉದ್ದೇಶವಾಗಿದೆ. ಇದು ಯಾವುದೇ ಧರ್ಮ, ಜಾತಿಯ ವಿರುದ್ಧವಲ್ಲ, ಎಲ್ಲರನ್ನೂ ಸಂಘಟಿಸಲು, ಹಿಂದೂ ನಾವೆಲ್ಲ ಒಂದು ಎಂದು ಸಾರುವುದೇ ಈ ಕಾರ್ಯಕ್ರಮದ ಧ್ಯೇಯವಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಾಂಧವರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.

ಹಿಂದೂ ಸಮ್ಮೇಳನ ಸಮಿತಿ ಅಧ್ಯಕ್ಷ ವಿಜಯಕುಮಾರ ಗೊಡಚಿ ಕಾರ್ಯಕ್ರಮ ರೂಪರೇಷಗಳ ಬಗ್ಗೆ ಮಾತನಾಡಿ, ಹಿಂದೂಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಫೆ.೮ ರಂದು ಹಾವೇರಿಯಲ್ಲಿ ಬೃಹತ್ ಹಿಂದೂ ಸಮಾಜೋತ್ಸವ ಆಯೋಜಿಸಿದ್ದು, ಅಂದು ಮಧ್ಯಾಹ್ನ ೨.೩೦ಕ್ಕೆ ಹುಕ್ಕೇರಿಮಠದಿಂದ ಆರಂಭಗೊಳ್ಳುವ ಬೃಹತ್ ಶೋಭಾಯಾತ್ರೆ ಎಂ.ಜಿ.ರೋಡ್, ಜೆ.ಪಿ.ಸರ್ಕಲ್, ಹೈಸ್ಕೂಲ್ ರೋಡ್ ಮೂಲಕ ಮುನ್ಸಿಪಲ್ ಮೈದಾನ ತಲುಪಲಿದೆ. ಈ ಶೋಭಾಯಾತ್ರೆ ಮೆರವಣಿಗೆಯಲ್ಲಿ ವಿಶೇಷವಾಗಿ ಭಾರತಮಾತೆ, ದೇವಾನು ದೇವತೆಗಳ, ಮಹಾಪುರುಷರ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳು, ವಿವಿಧ ಕಲಾ ತಂಡಗಳು, ಮಾತೆಯರಿಂದ ಪೂರ್ಣಕುಂಭದ ಮೆರವಣಿಗೆ, ಮಕ್ಕಳಿಂದ ವಿವಿಧ ವೇಷಭೂಷಣ ಪ್ರದರ್ಶನ ನಡೆಯಲಿದೆ. ಸಹಸ್ರಾರು ಸಂಖ್ಯೆಯಲ್ಲಿ ಹಿಂದೂ ಬಾಂಧವರು ಭಾಗವಹಿಸಲಿದ್ದಾರೆ. ಶೋಭಾಯಾತ್ರೆ ಸಾಗುವ ಮಾರ್ಗದ ರಸ್ತೆಯಲ್ಲಿ ರಂಗೋಲಿ, ತಳಿರು ತೋರಣ ಕಟ್ಟಿ ಸಿಂಗರಿಸಬೇಕು ಎಂದರು.

ಸಂಜೆ ೫ ಗಂಟೆಗೆ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಹಿಂದೂ ಸಮಾಜೋತ್ಸವ ವೇದಿಕೆ ಕಾರ್ಯಕ್ರಮ ಜರುಗಲಿದ್ದು, ಕಾರ್ಯಕ್ರಮದಲ್ಲಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ, ಗುರುಪಾದ ದೇವರಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ, ಹರಸೂರ ಬಣ್ಣದಮಠದ ಅಭಿನವರುದ್ರ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಾಮಾಜಿಕ ಕಾರ್ಯಕರ್ತರಾದ ಹನುಮಂತ ಮಳಲಿ ವಕ್ತಾರರಾಗಿ ಪಾಲ್ಗೊಂಡು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಹಿಂದೂ ಸಮ್ಮೇಳನ ಸಮಿತಿ ಗೌರವಾಧ್ಯಕ್ಷ ಆರ್.ಎಸ್.ಮಾಗನೂರ ಹಾಗೂ ಸಮಿತಿ ಅಧ್ಯಕ್ಷ ವಿಜಯಕುಮಾರ ಗೊಡಚಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಹಿಂದು ಸಮಾಜೋತ್ಸವ ಕಾರ್ಯಕ್ರಮ ಯಾವುದೇ ಧರ್ಮದ ವಿರುದ್ಧ ಶಕ್ತಿ ಪ್ರದರ್ಶನವಲ್ಲ. ಸಮಾಜದ ಜನರನ್ನು ಒಗ್ಗೂಡಿಸಿ ಸಾಮರಸ್ಯದಿಂದ ಬದುಕಬೇಕು ಎಂಬ ಸಂದೇಶ ಸಾರಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮ ಅಂಗವಾಗಿ ಫೆ.೬ರಂದು ಮಧ್ಯಾಹ್ನ ೩ ಗಂಟೆಗೆ ನಗರದಲ್ಲಿ ದ್ವಿಚಕ್ರ, ತ್ರಿಚಕ್ರ ಹಾಗೂ ಕಾರುಗಳೊಂದಿಗೆ ಪಥಸಂಚಲನ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಾಂಧವರು ಪಾಲ್ಗೊಳ್ಳಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಆರ್.ಎಸ್.ಮಾಗನೂರ, ಪಿ.ಡಿ.ಶಿರೂರ, ಕೆ.ಸಿ.ಪಾವಲಿ, ಸುಭಾಸ ಬೆಂಗಳೂರ, ರಮೇಶ ಆನವಟ್ಟಿ, ಎಂ.ಆರ್.ಎಂ ರಾವ್, ಎಚ್.ಸಿ. ಸಿದ್ದನಗೌಡ್ರ, ನಾಗೇಂದ್ರ ಕಟಕೋಳ ಇತರರು ಇದ್ದರು.

ಕೋಟ್..

ವಿಶ್ವವೇ ಒಂದು ಕುಟುಂಬ ಎಂದು ಸಂದೇಶ ಸಾರಿದ ಹಿಂದೂ ಧರ್ಮದ ಬಗ್ಗೆ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಹಿಂದೂ ಧರ್ಮದ ಆಚಾರ-ವಿಚಾರ, ಪರಂಪರೆ, ಸಂಸ್ಕೃತಿಯನ್ನು ಸಮಾಜದ ಬಾಂಧವರಿಗೆ ತಿಳಿಸಿ ಸಾಮರಸ್ಯ ಬದುಕುವ ಮೂಲಕ ಹಿಂದೂ ಸಮಾಜವನ್ನು ಉಳಿಸಿ, ಬೆಳೆಸಿಕೊಂಡು ಹೋಗಬೇಕಿದ್ದು ಸಹಸ್ರ ಸಂಖ್ಯೆಯಲ್ಲಿ ಸಮಾಜದ ಬಾಂಧವರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು.

- ಶಿವಯೋಗಿ ಶಿವಾಚಾರ್ಯರು, ಗೌರಿಮಠ ಕರ್ಜಗಿ
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು