LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಜನವರಿ 07 ರಂದು CM ಸಿದ್ದರಾಮಯ್ಯ ಹಾವೇರಿ ಜಿಲ್ಲೆಗೆ.

 



ಹಾವೇರಿ: ಜನವರಿ 07 ರಂದು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಆಗಮಿಸಿ ಜಿಲ್ಲೆಯಲ್ಲಿ ನಿರ್ಮಾಣವಾದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶೀಲಾನ್ಯಾಸ ನೆರೆವೇರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ ಹೇಳಿದರು.



ನಗರದ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಬುದವಾರ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನವರಿ 07 ರಂದು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಆಗಮಿಸಿ ನಗರದಲ್ಲಿ ನಿರ್ಮಾಣವಾದ ನೂತನ ವೈದ್ಯಕೀಯ ಕಾಲೇಜು ಉದ್ಘಾಟನೆ ಮಾಡಲಿದ್ದಾರೆ ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಅಚ್ಚುಕಟ್ಟಾಗಿ ತಯಾರಿಮಾಡಿಕೊಳ್ಳುವಂತೆ ಸೂಚಿಸದರು.



ಹಾವೇರಿ ವೈದ್ಯಕೀಯ ಕಾಲೇಜಿನ ಉದ್ಘಾಟನೆ ವೇದಿಕೆಯಲ್ಲೇ ಜಿಲ್ಲೆಯ ಉಳಿದ ಇಲಾಖೆಗಳಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲೆಯ ಅಗಡಿ ಗ್ರಾಮದಲ್ಲಿ ಅಂಗನವಾಡಿ ನಂ 71 ನೇ ನೂತನ ಕಟ್ಟಡ ಕಾಮಗಾರಿ ಉದ್ಘಾಟನೆ, ಜಿಲ್ಲಾ ಪಂಚಾಯತ್ ಇವರಿಂದ ಕರ್ಜಗಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನೂತನ ಶಾಲಾ ಕಟ್ಟಡ ಉದ್ಘಾಟನೆ, ಶಾಲಾ ಶಿಕ್ಷಣ ಇಲಾಖೆ ಇವರಿಂದ ಹಾವೇರಿಯ ಕನವಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕೊಠಡಿ ನಿರ್ಮಾಣ ಕಾಮಗಾರಿ ಉದ್ಘಾಟನೆ,

ಲೋಕೋಪಯೋಗಿ ಇಲಾಖೆಯಿಂದ ಹಾವೇರಿಯಲ್ಲಿ ನಿರ್ಮಾಣವಾದ ಹೊಸ ಪ್ರವಾಸ ಮಂದಿರ, ಹಾಗೂ ನೆಲೋಗಲ್ನಲ್ಲಿ ನಿರ್ಮಾಣವಾದ ಹೊಸ ಪ್ರವಾಸ ಮಂದಿರ ಉದ್ಘಾಟನೆ, ಜಿಲ್ಲಾ ನಿರ್ಮಿತಿ ಕೇಂದ್ರ ಹಾವೇರಿ ಇವರಿಂದ ನಗರದಲ್ಲಿ ಶ್ರೀಮತಿ ಗೌಡಶಾನಿ ನೀಲಗೌಡ ಬಾಲಕೀಯರ ಪ್ರಥಮ ದರ್ಜೆ ಮಹಾವಿದ್ಯಾಲಯ ಇಲ್ಲಿಯ ಅಭಿವೃದ್ಧಿ ಕಾಮಗಾರಿಗೆ ಶಂಕು ಸ್ಥಾಪನೆ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಾವೇರಿಯಲ್ಲಿ ಮೇಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಕಟ್ಟಡ ಶೀಲಾನ್ಯಾಸ, ನೆರೆವೇರಿಸಲಿದ್ದಾರೆ ಎಂದರು.



ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧ ವಂಟಗೋಡಿ,ಅಪರ ಜಿಲ್ಲಾಧಿಕಾರಿ ಡಾ ಎಲ್ ನಾಗರಾಜ್, ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು