LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮಂಗಳವಾರ ಮಠದ ಆವರಣದಲ್ಲೇ ಸ್ವಾಮೀಜಿ ಅಂತ್ಯಕ್ರಿಯೆ; ಮಹಿಳೆಯರ ಬಂಧನಕ್ಕೆ ಆಗ್ರಹಿಸಿ ಪಟ್ಟು ಹಿಡಿದಿದ್ದ ಭಕ್ತರು

ಬೆಳಗಾವಿ : ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದ ನೇಗಿನಹಾಳ ಮಠದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿ ಮಠದಲ್ಲೇ ಆತ್ಮಹತ್ಯೆಗೆ ಶರಣಾಗಿದ್ದು ಈ ಹಿನ್ನೆಲೆಯಲ್ಲಿ ಸ್ವಾಮೀಜಿಗಳ ಆತ್ಮಹತ್ಯೆಗೆ ಕಾರಣರಾದ ಮಹಿಳೆಯರನ್ನು ತಕ್ಷಣ ಬಂಧಿಸಿ ಕ್ರಮ ಜರುಗಿಸಬೇಕು ಅಲ್ಲಿಯವರೆಗೆ ತಾವು ಮಠದ ಆವರಣದಿಂದ ತೆರಳುವದಿಲ್ಲ ಅಲ್ಲದೇ ಸ್ವಾಮಿಗಳ ಮೃತ ದೇಹವನ್ನು ಮಠದಿಂದ ತೆಗೆದುಕೊಂಡು ಹೋಗುವುದಕ್ಕೆ ಅವಕಾಶ ನೀಡುವದಿಲ್ಲವೆಂದು ಪ್ರತಿಭಟನೆ ಮಾಡಿದ್ದರು.



ಭಕ್ತರ ಮನವೊಲಿಸಿ ಪೊಲೀಸರು ಶವವನ್ನು ಪೋಸ್ಟ್ ಮಾರ್ಟಮ್ ಮಾಡುವದಕ್ಕೆ ಬೈಲಹೊಂಗಲದ ಸರಕಾರಿ ಆಸ್ಪತ್ರೆಗೆ ಸಾಗಿಸಿದರು. ನಂತರ ಶವವನ್ನು ಪುನಃ ಮಠಕ್ಕೆ ತೆಗೆದುಕೊಂಡು ಬರಲಾಯಿತು.



ಮಠಾಧೀಶರ ಆತ್ಮಹತ್ಯೆ ನಂತರ ಮಠದೊಳಗೆ ನಡೆಸುವ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದ ನಂತರ ಮಠದ ಕೋಣೆಯಲ್ಲಿ ಮೃತ ದೇಹವನ್ನು ಇರಿಸಲಾಗಿದ್ದು, ಮಂಗಳವಾರ ಮುಂಜಾನೆ ಮೃತದೇಹವನ್ನು ಸಾರ್ವಜನಿಕರ ವೀಕ್ಷಣೆಗೆ ಮಠದ ಆವರಣದಲ್ಲಿ ಇರಿಸಲಾಗುವುದು.



ಮಂಗಳವಾರ ಸಂಜೆ ಮಠದ ಆವರಣದಲ್ಲೇ ಸ್ವಾಮಿಗಳ ಅಂತ್ಯ ಸಂಸ್ಕಾರ ಜರುಗಲಿದ್ದು ರಾಜ್ಯದ ವಿವಿಧ ಮಠಾಧೀಶರು, ಸ್ವಾಮಿಗಳ ಕುಟುಂಬಸ್ಥರು ಭಾಗವಹಿಸಲಿದ್ದಾರೆ.



ಈ ಮಧ್ಯೆ ಸ್ವಾಮಿಗಳ ಕುರಿತು ತಮ್ಮ ದೂರವಾಣಿ ಸಂಭಾಷಣೆಯಲ್ಲಿ ಚರ್ಚಿಸಿದ ಬೆಳಗಾವಿಯ ಸತ್ಯಮ್ಮ ಮತ್ತು ಗಂಗಾವತಿಯ ರುದ್ರಮ್ಮ ಅವರ ವಿಚಾರಣೆ ಮಾಡಲಾಗುವದು ಎಂದು ಪ್ರಕರಣದ ತನಿಖಾಧಿಕಾರಿ ಬೈಲಹೊಂಗಲ ಪೊಲೀಸ್ ಇನ್ಸಪೆಕ್ಟರ್ ಸಾತ್ತೇನಹಳ್ಳಿ ತಿಳಿಸಿದರು.



ಸಮದರ್ಶಿ ವರದಿಗಾರರೊಂದಿಗೆ ಮಾತನಾಡಿದ ಮಠದ ಕೆಲ ಭಕ್ತರು, ಸ್ವಾಮಿಯ ಕುರಿತು ಮಾತನಾಡಿರುವ ಮಹಿಳೆಯರು ಈ ಹಿಂದೆ ಅನೇಕ ಬಾರಿ ಮಠದಲ್ಲಿ ಕಂಡು ಬಂದಿದ್ದರು. ಮಧ್ಯ ವಯಸ್ಸಿನ ಅವರು ನೇಗಿನಹಾಳಿನ ಮಠ ಮಾತ್ರವಲ್ಲ ಉತ್ತರ ಕರ್ನಾಟಕದ ಅನೇಕ ಲಿಂಗಾಯತ ಮಠಗಳೊಂದಿಗೆ ಸಂಪರ್ಕ ಹೊಂದಿದ್ದಾರೆ. ಮಠಗಳಲ್ಲಿ ಬಸವ ತತ್ವ ಅಭ್ಯಸಿಸಿರುವ ಅವರು ಪ್ರವಚನ ಕೂಡ ನೀಡಿದ್ದಾರೆ ಎಂದು ತಿಳಿಸಿದರು.



ಮಠದ ಹಲವು ಮಹಿಳಾ ಭಕ್ತರು ಸ್ವಾಮಿಗಳ ಕುರಿತು ಒಳ್ಳೆಯ ಅಭಿಪ್ರಾಯ ವ್ಯಕ್ತ ಪಡಿಸಿದರು. ಸ್ವಾಮಿಗಳು ಮಹಿಳೆಯರ ಕುರಿತು ಗೌರವ ಹೊಂದಿದ್ದರು. ತೀರಾ ಸಂಕೋಚ ಸ್ವಭಾವದ ಅವರು ತಮ್ಮ ಬಳಿಗೆ ಆಶೀರ್ವಾದ ಪಡೆಯಲು ಹೋಗುವ ಯಾವುದೇ ಮಹಿಳೆಯ ಮುಖವನ್ನೂ ನೋಡುತ್ತಿರಲಿಲ್ಲವೆಂದಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ