LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಬಾಗಲಕೋಟದಲ್ಲಿ ನೂತನ ವಿಶ್ವವಿದ್ಯಾಲಯ ಸ್ಥಾಪನೆಗೆ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ನೂತನ ಬಾಗಲಕೋಟ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯದಲ್ಲಿ ಮತ್ತೊಂದು ವಿಶ್ವ ವಿದ್ಯಾಲಯ ಸ್ಥಾಪನೆ ಆದಂತೆ ಆಗಿದೆ.



ಈ ಕುರಿತು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಪತ್ರವನ್ನು ಹೊರಡಿಸಿದ್ದಾರೆ. ಕಾಲೇಜುಗಳ ಮೇಲ್ವಿಚಾರಣೆಯನ್ನು ಸುಧಾರಿಸಲು ರಾಜ್ಯದ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶಗಳಲ್ಲಿ ವಿನೂತನ ಮಾದರಿಯ 7 ವಿಶ್ವ ವಿದ್ಯಾಲಯಗಳನ್ನು ಚಾಮರಾಜನಗರ, ಬೀದರ, ಹಾವೇರಿ, ಕೊಡಗು, ಹಾಸನ, ಕೊಪ್ಪಳ ಮತ್ತು ಬಾಗಲಕೋಟ ಜಿಲ್ಲೆಯಲ್ಲಿ ಸ್ಥಾಪಿಸಲಾಗುವದು ಎಂಬುದಾಗಿ 2022-23ನೇ ಸಾಲಿನ ಅಯವ್ಯಯ ಘೋಷಣೆಯಲ್ಲಿ ಘೋಷಿಸಲಾಗಿತ್ತು ಎಂದಿದ್ದಾರೆ.



ಅದರಂತೆ ಸಾಂಪ್ರದಾಯಿಕ ವಿಶ್ವವಿದ್ಯಾಲಯಗಳಿಗಿಂತ ಭಿನ್ನವಾಗಿ ತಂತ್ರಜ್ಞಾನದ ಗರಿಷ್ಠ ಬಳಕೆಯೊಂದಿಗೆ ಹೆಚ್ಚುವರಿ ಮಾನವ ಸಂಪನ್ಮೂಲ ಉಪಯೋಗಿಸದೇ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಿಂದ ಬೇರ್ಪಟ್ಟ ನೂತನ ಬಾಗಲಕೋಟ ವಿಶ್ವವಿದ್ಯಾಲಯವನ್ನು ಕೇಂದ್ರ ಸ್ಥಾನವನ್ನು ಜಮಖಂಡಿ, ಬಾಗಲಕೋಟ ಜಿಲ್ಲೆಯಲ್ಲಿ ಸ್ಥಾಪಿಸಲು ಆದೇಶಿಸಿದ್ದಾರೆ.



ಜೊತೆಗೆ ನೂತನ ಬಾಗಲಕೋಟ ವಿಶ್ವವಿದ್ಯಾಲಯಕ್ಕೆ ಮಾತೃ ವಿವಿಯಾದಂತ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದಿಂದ ವರ್ಗಾವಣೆ ಆಗಬೇಕಾಗಿರುವ ಜಮೀನಿನ ದಾಖಲೆಗಳನ್ನು ಒಂದು ತಿಂಗಳೊಳಗಾಗಿ ವರ್ಗಾಯಿಸುವಂತೆ, ಸಂಬಂಧಿಸಿದ ಜಿಲ್ಲೆಯ ಜಿಲ್ಲಾಧಿಕಾರಿಗಳು ಜಮೀನಿನ ವರ್ಗಾವಣೆಗೆ ಅಗತ್ಯ ಸಹಕಾರ ನೀಡುವಂತೆಯೂ ಸೂಚಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ