LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬಾಗಲಕೋಟದಲ್ಲಿ ನೂತನ ವಿಶ್ವವಿದ್ಯಾಲಯ ಸ್ಥಾಪನೆಗೆ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ನೂತನ ಬಾಗಲಕೋಟ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯದಲ್ಲಿ ಮತ್ತೊಂದು ವಿಶ್ವ ವಿದ್ಯಾಲಯ ಸ್ಥಾಪನೆ ಆದಂತೆ ಆಗಿದೆ.



ಈ ಕುರಿತು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಪತ್ರವನ್ನು ಹೊರಡಿಸಿದ್ದಾರೆ. ಕಾಲೇಜುಗಳ ಮೇಲ್ವಿಚಾರಣೆಯನ್ನು ಸುಧಾರಿಸಲು ರಾಜ್ಯದ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶಗಳಲ್ಲಿ ವಿನೂತನ ಮಾದರಿಯ 7 ವಿಶ್ವ ವಿದ್ಯಾಲಯಗಳನ್ನು ಚಾಮರಾಜನಗರ, ಬೀದರ, ಹಾವೇರಿ, ಕೊಡಗು, ಹಾಸನ, ಕೊಪ್ಪಳ ಮತ್ತು ಬಾಗಲಕೋಟ ಜಿಲ್ಲೆಯಲ್ಲಿ ಸ್ಥಾಪಿಸಲಾಗುವದು ಎಂಬುದಾಗಿ 2022-23ನೇ ಸಾಲಿನ ಅಯವ್ಯಯ ಘೋಷಣೆಯಲ್ಲಿ ಘೋಷಿಸಲಾಗಿತ್ತು ಎಂದಿದ್ದಾರೆ.



ಅದರಂತೆ ಸಾಂಪ್ರದಾಯಿಕ ವಿಶ್ವವಿದ್ಯಾಲಯಗಳಿಗಿಂತ ಭಿನ್ನವಾಗಿ ತಂತ್ರಜ್ಞಾನದ ಗರಿಷ್ಠ ಬಳಕೆಯೊಂದಿಗೆ ಹೆಚ್ಚುವರಿ ಮಾನವ ಸಂಪನ್ಮೂಲ ಉಪಯೋಗಿಸದೇ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಿಂದ ಬೇರ್ಪಟ್ಟ ನೂತನ ಬಾಗಲಕೋಟ ವಿಶ್ವವಿದ್ಯಾಲಯವನ್ನು ಕೇಂದ್ರ ಸ್ಥಾನವನ್ನು ಜಮಖಂಡಿ, ಬಾಗಲಕೋಟ ಜಿಲ್ಲೆಯಲ್ಲಿ ಸ್ಥಾಪಿಸಲು ಆದೇಶಿಸಿದ್ದಾರೆ.



ಜೊತೆಗೆ ನೂತನ ಬಾಗಲಕೋಟ ವಿಶ್ವವಿದ್ಯಾಲಯಕ್ಕೆ ಮಾತೃ ವಿವಿಯಾದಂತ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದಿಂದ ವರ್ಗಾವಣೆ ಆಗಬೇಕಾಗಿರುವ ಜಮೀನಿನ ದಾಖಲೆಗಳನ್ನು ಒಂದು ತಿಂಗಳೊಳಗಾಗಿ ವರ್ಗಾಯಿಸುವಂತೆ, ಸಂಬಂಧಿಸಿದ ಜಿಲ್ಲೆಯ ಜಿಲ್ಲಾಧಿಕಾರಿಗಳು ಜಮೀನಿನ ವರ್ಗಾವಣೆಗೆ ಅಗತ್ಯ ಸಹಕಾರ ನೀಡುವಂತೆಯೂ ಸೂಚಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು