LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸೋನಂ ವಾಂಗ್ಚುಕ್ ಭೇಟಿಯಾದ ಪವನ್ ಖೇರಾ; ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ

ಹೊಸದಿಲ್ಲಿ, ಜುಲೈ 17: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಶಿಕ್ಷಣ ತಜ್ಞ ಹಾಗೂ ಹವಾಮಾನ ಹೋರಾಟಗಾರ ಸೋನಂ ವಾಂಗ್ಚುಕ್ ಮತ್ತು ಸಿಜೆಪಿ ಸದಸ್ಯರನ್ನು ಕಾಂಗ್ರೆಸ್ ನಾಯಕ ಪವನ್ ಖೇರಾ ಶುಕ್ರವಾರ ಭೇಟಿ ಮಾಡಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಸಿಜೆಪಿ ಕಳೆದ 25 ದಿನಗಳಿಂದ ದಿಲ್ಲಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ. ಜೂನ್ 28ರಂದು ಈ ಪ್ರತಿಭಟನೆಗೆ ಸೇರ್ಪಡೆಯಾದ ಸೋನಂ ವಾಂಗ್ಚುಕ್ ಅಂದಿನಿಂದಲೂ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಪ್ರತಿಭಟನಾಕಾರರನ್ನು ಭೇಟಿ ಮಾಡಿದ ಬಳಿಕ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಪವನ್ ಖೇರಾ, ಪ್ರಜಾಪ್ರಭುತ್ವದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದು ನಾಗರಿಕರ ಸಂವಿಧಾನಬದ್ಧ ಹಕ್ಕಾಗಿದೆ. ಜನರು ತಮ್ಮ ಧ್ವನಿ ಸರ್ಕಾರಕ್ಕೆ ತಲುಪಿಸಲು ಉಪವಾಸ ಸತ್ಯಾಗ್ರಹ ನಡೆಸುವಾಗ ಅವರ ಮಾತು ಆಲಿಸುವುದು ಸರ್ಕಾರದ ರಾಜಧರ್ಮವಾಗಿದ್ದು, ನಿರ್ಲಕ್ಷಿಸುವುದಲ್ಲ ಎಂದು ಹೇಳಿದ್ದಾರೆ.

ಸೋನಂ ವಾಂಗ್ಚುಕ್ ಅವರ ಆರೋಗ್ಯದ ಕುರಿತು ಕಾಂಗ್ರೆಸ್ ಈ ಹಿಂದೆ ಕಳವಳ ವ್ಯಕ್ತಪಡಿಸಿ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವಂತೆ ಮನವಿ ಮಾಡಿತ್ತು. ಆದರೆ, ಬೇಡಿಕೆಗಳಿಗೆ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಅವರು ಹೋರಾಟವನ್ನು ಮುಂದುವರಿಸಿದ್ದಾರೆ.

ಇದಕ್ಕೂ ಮುನ್ನ ದಿಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸಮಾಜವಾದಿ ಪಕ್ಷದ ನಾಯಕಿ ಡಿಂಪಲ್ ಯಾದವ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ಜಂತರ್ ಮಂತರ್‌ಗೆ ಭೇಟಿ ನೀಡಿ ಸೋನಂ ವಾಂಗ್ಚುಕ್ ಹಾಗೂ ಇತರ ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿದ್ದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆರೋಗ್ಯ ಗಂಭೀರವಾದರೂ ಉಪವಾಸ ಮುಂದುವರಿಸಿದ ಸೋನಮ್ ವಾಂಗ್ಚುಕದೇಶೀ ಪಿಸ್ತೂಲ್ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನುತಿಲಾರಿ–ರಕ್ಕಸಕೊಪ್ಪ ಜಲಾಶಯ ಸಂಪರ್ಕಕ್ಕೆ ಆಗ್ರಹಬೆಳಗಾವಿ ಚಿನ್ನಾಭರಣ ಅಂಗಡಿಯಲ್ಲಿ ಕಳ್ಳತನಕ್ಕೆ ವಿಫಲ ಯತ್ನಸಂಬಂಧಿಕರಿಂದ ಇಬ್ಬರು ಸಹೋದರರ ಬರ್ಬರ ಹತ್ಯೆಜನಬೆಂಬಲ ಸಿಕ್ಕರೆ 2028ರಲ್ಲಿ ನನ್ನ ತಂದೆ ಮುಖ್ಯಮಂತ್ರಿ : ಪ್ರಿಯಾಂಕಾ ಜಾರಕಿಹೊಳಿಭಾರತ ನಾಯಕತ್ವದ ಬೇಜವಾಬ್ದಾರಿಯಿಂದ ಬುಲೆಟ್ ರೈಲು ಯೋಜನೆ ವಿಳಂಬ: ಜಪಾನ್ ಮಾಜಿ ಸಚಿವ ಆರೋಪಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಭಾರಿ ಮಳೆ: ಆರೆಂಜ್ ಅಲರ್ಟವಾಂಗ್ಚೂಕ್ ತಂದೆಯ ಉಪವಾಸ ಅಂತ್ಯಗೊಳಿಸಿದ್ದ ಇಂದಿರಾ: ಸೋನಿಯಾ ನೆನಪುಆಂಧ್ರದಲ್ಲಿ ಮತ್ತೆ ಕೊರೊನಾ : 20 ದಿನಗಳಲ್ಲಿ ನಾಲ್ವರ ಸಾವು, ಗಡಿ ಜಿಲ್ಲೆಗಳಲ್ಲಿ ಹೈ ಅಲರ್ಟ