LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ಮೈಸೂರು, ಆಗಸ್ಟ್ 1: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದಲ್ಲಿ ನಿರ್ಮಿಸಲಾದ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ಹಾಗೂ ವಿವೇಕ ಸ್ಮಾರಕವನ್ನು ಲೋಕಾರ್ಪಣೆ ಮಾಡಿದರು. ಸ್ವಾಮಿ ವಿವೇಕಾನಂದರ ಜೀವನ, ಸಂದೇಶ ಮತ್ತು ಆದರ್ಶಗಳನ್ನು ಯುವಜನರಿಗೆ ಪರಿಚಯಿಸುವ ಉದ್ದೇಶದಿಂದ ಈ ಕೇಂದ್ರವನ್ನು ನಿರ್ಮಿಸಲಾಗಿದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಪ್ರಧಾನಿಯೊಂದಿಗೆ ಉಪಸ್ಥಿತರಿದ್ದರು. ಕೇಂದ್ರವನ್ನು ಉದ್ಘಾಟಿಸುವ ಮೊದಲು ಪ್ರಧಾನಿ ಮೋದಿ ಅವರು ವಿವೇಕ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಆಶ್ರಮದ ಆವರಣದಲ್ಲಿ ಗಿಡ ನೆಟ್ಟು, ಸ್ವಾಮಿ ವಿವೇಕಾನಂದರ ಜೀವನ, ಬೋಧನೆಗಳು ಮತ್ತು ಪರಂಪರೆಯನ್ನು ಪರಿಚಯಿಸುವ ಕಿರುಚಿತ್ರವನ್ನು ವೀಕ್ಷಿಸಿದರು.

1892ರ ನವೆಂಬರ್‌ನಲ್ಲಿ ಭಾರತ ಪ್ರವಾಸದ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರು ಮೈಸೂರಿಗೆ ಭೇಟಿ ನೀಡಿದ್ದ ಸ್ಮರಣಾರ್ಥ ಈ ವಿವೇಕ ಸ್ಮಾರಕವನ್ನು ನಿರ್ಮಿಸಲಾಗಿದೆ. ಇದೇ ಸ್ಥಳದಲ್ಲಿ ಅವರು ತಂಗಿದ್ದರು ಎಂಬ ಐತಿಹಾಸಿಕ ಮಹತ್ವವೂ ಇದೆ. ಅಲ್ಲದೆ, 1893ರಲ್ಲಿ ಅಮೆರಿಕದ ಚಿಕಾಗೊದಲ್ಲಿ ನಡೆದ ವಿಶ್ವ ಧರ್ಮ ಸಮ್ಮೇಳನದಲ್ಲಿ ಭಾಗವಹಿಸುವ ನಿರ್ಧಾರವನ್ನು ಸ್ವಾಮಿ ವಿವೇಕಾನಂದರು ಇದೇ ಸ್ಥಳದಲ್ಲಿ ಕೈಗೊಂಡಿದ್ದರು ಎಂದು ಆಶ್ರಮ ತಿಳಿಸಿದೆ.

ಶ್ರೀ ರಾಮಕೃಷ್ಣ ಆಶ್ರಮ, ಮೈಸೂರು ವತಿಯಿಂದ ನಿರ್ಮಿಸಿ ನಿರ್ವಹಿಸಲಾಗುತ್ತಿರುವ ಈ ಸಾಂಸ್ಕೃತಿಕ ಯುವ ಕೇಂದ್ರವು ಯುವಜನರ ವ್ಯಕ್ತಿತ್ವ ವಿಕಸನ, ಜೀವನ ಕೌಶಲ, ಉನ್ನತ ಮೌಲ್ಯಗಳು ಹಾಗೂ ಆಧ್ಯಾತ್ಮಿಕ ಮತ್ತು ಭೌತಿಕ ಬದುಕಿನಲ್ಲಿ ಸಮತೋಲನ ಸಾಧಿಸಲು ಅಗತ್ಯವಾದ ಜ್ಞಾನವನ್ನು ನೀಡುವ ಉದ್ದೇಶ ಹೊಂದಿದೆ. ಯುವಕರು ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ಅರಿತು ಸಮಾಜಮುಖಿ ಬದುಕು ರೂಪಿಸಿಕೊಳ್ಳಲು ಇದು ನೆರವಾಗಲಿದೆ.

1925ರಲ್ಲಿ ಸ್ಥಾಪನೆಯಾದ ಶ್ರೀ ರಾಮಕೃಷ್ಣ ಆಶ್ರಮವು ಆಧ್ಯಾತ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಗ್ರಾಮೀಣ ಕಲ್ಯಾಣ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ಭಾರತ ಸರ್ಕಾರ, ಕರ್ನಾಟಕ ಸರ್ಕಾರ, ವಿವಿಧ ಖಾಸಗಿ ಸಂಸ್ಥೆಗಳು, ಭಕ್ತರು ಹಾಗೂ ದಾನಿಗಳ ಸಹಕಾರದೊಂದಿಗೆ ಸ್ವಾಮಿ ವಿವೇಕಾನಂದರ ವ್ಯಕ್ತಿತ್ವ ನಿರ್ಮಾಣ ಮತ್ತು ರಾಷ್ಟ್ರ ನಿರ್ಮಾಣದ ಆದರ್ಶಗಳನ್ನು ಯುವಜನರಿಗೆ ತಲುಪಿಸುವ ಉದ್ದೇಶದಿಂದ ಈ ಕೇಂದ್ರವನ್ನು ಅಭಿವೃದ್ಧಿಪಡಿಸಲಾಗಿದೆ.

ಈ ಕೇಂದ್ರದಲ್ಲಿ 650 ಆಸನಗಳ ಮುಕ್ತ ರಂಗಮಂದಿರ, ಸ್ವಾಮಿ ವಿವೇಕಾನಂದರ ಜೀವನ ಮತ್ತು ಸಂದೇಶಗಳನ್ನು ಪರಿಚಯಿಸುವ ಆಧುನಿಕ ಸಂಗ್ರಹಾಲಯ, ಅಲ್ಪಾವಧಿ ತರಬೇತಿ ತರಗತಿಗಳ ಕೊಠಡಿಗಳು, ಯೋಗ ಮತ್ತು ಧ್ಯಾನ ಮಂದಿರ, ಗ್ರಂಥಾಲಯ, ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರ, ಸಭಾಂಗಣಗಳು, ಪ್ರದರ್ಶನ ಕೇಂದ್ರ ಹಾಗೂ ಆಡಳಿತ ಕಚೇರಿಗಳು ಸೇರಿದಂತೆ ಹಲವು ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ