LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪೋಕ್ಸೊ ಪ್ರಕರಣ : ಆರೋಪಿಗೆ ಕಠಿಣ ಶಿಕ್ಷೆ

ಬೆಳಗಾವಿ : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕವಾಗಿ ಅತ್ಯಾಚಾರ ಎಸಗಿದ ಆರೋಪಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಬೆಳಗಾವಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯ-01 ಮಹತ್ವದ ತೀರ್ಪು ನೀಡಿದೆ.



ಬೆಳಗಾವಿಯ ಸಮರ್ಥನಗರ ನಾಲ್ಕನೇ ಕ್ರಾಸಿನ

ನಿಂಗಪ್ಪ /ವಿಶಾಲ ಭೈರಪ್ಪ ಹೊಸಮನಿ (23)ಶಿಕ್ಷೆಗೊಳಗಾದ ಆರೋಪಿ. ನೊಂದ ಬಾಲಕಿ ಅಪ್ರಾಪ್ತ ವಯಸ್ಸಿನವಳು ಎಂದು ಗೊತ್ತಿದರೂ

ಆರೋಪಿ ಬಾಲಕಿಗೆ ದಿನಾಂಕ 22-04-2022 ರಂದು ಮಧ್ಯಾಹ್ನ 12:30 ಗಂಟೆಗೆ ತನ್ನ ಮನೆಗೆ ಕರೆದುಕೊಂಡು ಹೋಗಿ ಅವಳಿಗೆ ಮನೆಯಲ್ಲಿ ಅಕ್ರಮವಾಗಿ ಕೂಡಿಟ್ಟು ಲೈಂಗಿಕ ಅತ್ಯಾಚಾರ ಮಾಡಿದಲ್ಲದೆ ದಿನಾಂಕ 21-04-2024 ರಂದು ಮಹಾರಾಷ್ಟ್ರದ ಒಂದು ಲಾಡ್ಜ್ ದಲ್ಲಿ ದಿನಾಂಕ 13-05-2024 ರವರೆಗೆ ಕೂಡಿಟ್ಟು ನಿರಂತರ ಅತ್ಯಾಚಾರ ಮಾಡಿದ್ದ. ಈ ಅಪರಾಧಕ್ಕಾಗಿ ದಾಖಲಾಧಿಕಾರಿ ಮಾರ್ಕೆಟ್ ಪಿಎಸ್ ಐ ಮಹಾಂತೇಶ ಮಠಪತಿ ಪ್ರಕರಣ ದಾಖಲಿಸಿಕೊಂಡಿದ್ದರು. ಮುಂದಿನ ಕ್ರಮವನ್ನು ತನಿಖಾಧಿಕಾರಿ ಸಿಪಿಐ ಮಹಾಂತೇಶ ಕೆ. ಧಾಮಣ್ಣನವರ ಕೈಗೊಂಡಿದ್ದರು. ಪ್ರಕರಣದ ಮುಂದಿನ ತನಿಖೆ ಮಾಡಿ ಪ್ರಕರಣವನ್ನು ಮಾನ್ಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯ-01 ಬೆಳಗಾವಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದು, ನ್ಯಾಯಾಧೀಶೆ ಸಿ.ಎಂ. ಪುಷ್ಪಲತಾ ಇವರು ಪ್ರಕರಣವನ್ನು ವಿಚಾರಣೆ ಮಾಡಿ, ಒಟ್ಟು 09 ಸಾಕ್ಷಿಗಳ ವಿಚಾರಣೆ ಮೇಲಿಂದ ಹಾಗೂ, 51 ದಾಖಲೆಗಳು, 2 ಮುದ್ದೆಮಾಲು ಆಧಾರದಲ್ಲಿ ಆರೋಪಿ ಮೇಲಿನ ಆರೋಪಣೆಗಳು ಸಾಬೀತಾಗಿವೆ ಎಂದು ತೀರ್ಪು ನೀಡಿದ್ದಾರೆ. ಆರೋಪಿತನಿಗೆ ಪೋಕ್ಸೊ ಕಲಂ 6 ರ ಪ್ರಕಾರ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, ದಂಡ ಒಂದು ಲಕ್ಷ ರೂಪಾಯಿ, ದಂಡದ ಹಣ ತುಂಬದೇ ಇದ್ದ ಕಾಲಕ್ಕೆ 2 ವರ್ಷಗಳ ಶಿಕ್ಷೆ ವಿಧಿಸಿ ಪ್ರಕರಣದ ತೀರ್ಪು ನೀಡಿದ್ದಾರೆ.



ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ರೂ. 4 ಲಕ್ಷಗಳನ್ನು ಪರಿಹಾರ ಧನವನ್ನು ಪಡೆಯಲು ನ್ಯಾಯಾಲಯ ಆದೇಶಿಸಿರುತ್ತದೆ. ಪ್ರಕರಣದಲ್ಲಿ ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಎಲ್. ವಿ.ಪಾಟೀಲ ಪ್ರಕರಣ ನಡೆಸಿ ಹಾಗೂ ವಾದ ಮಂಡಿಸಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ