LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

12 ವರ್ಷಗಳ ಸಾಧನೆ ಬಣ್ಣಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ, ಜೂ. 8 : ಕಳೆದ 12 ವರ್ಷಗಳಲ್ಲಿ ಭಾರತವು ಅಭೂತಪೂರ್ವ ಪರಿವರ್ತನೆಗೆ ಸಾಕ್ಷಿಯಾಗಿದ್ದು, ಈ ಬದಲಾವಣೆಗಳ ಕೇಂದ್ರಬಿಂದುವಾಗಿ ಬಡವರ ಕಲ್ಯಾಣ ಕಾರ್ಯನಿರ್ವಹಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಿಧ ಜನಕಲ್ಯಾಣ ಯೋಜನೆಗಳ ಪರಿಣಾಮ ದೇಶದ ಕೋಟ್ಯಂತರ ಜನರ ಬದುಕಿನಲ್ಲಿ ಮಹತ್ವದ ಬದಲಾವಣೆ ಕಂಡುಬಂದಿದೆ ಎಂದು ತಿಳಿಸಿದ್ದಾರೆ.

ನೇರ ನಗದು ವರ್ಗಾವಣೆ, ಸ್ವಚ್ಛ ಭಾರತ ಅಭಿಯಾನ, ಪ್ರಧಾನ ಮಂತ್ರಿ ಆವಾಸ ಯೋಜನೆ ಹಾಗೂ ಆಯುಷ್ಮಾನ ಭಾರತ ಸೇರಿದಂತೆ ಹಲವು ಯೋಜನೆಗಳು ಸಾಮಾನ್ಯ ಜನರಿಗೆ ಗೌರವಯುತ ಜೀವನ ಹಾಗೂ ಸಮಾನ ಅವಕಾಶಗಳನ್ನು ಒದಗಿಸುವ ಉದ್ದೇಶದಿಂದ ಜಾರಿಗೊಂಡಿವೆ ಎಂದು ಅವರು ಹೇಳಿದ್ದಾರೆ.

ಕಳೆದ 12 ವರ್ಷಗಳ ಅಭಿವೃದ್ಧಿಯ ಪಯಣಕ್ಕೆ ಬಡವರು, ರೈತರು, ಮಹಿಳೆಯರು ಮತ್ತು ಹಿಂದುಳಿದ ವರ್ಗಗಳ ಕಲ್ಯಾಣವೇ ಮೂಲ ಪ್ರೇರಣೆಯಾಗಿದೆ. ಅಂತ್ಯೋದಯ ತತ್ವದ ಆಧಾರದ ಮೇಲೆ ಅಭಿವೃದ್ಧಿಯ ಫಲಗಳು ಸಮಾಜದ ಕೊನೆಯ ವ್ಯಕ್ತಿಗೂ ತಲುಪುವಂತೆ ಮಾಡುವ ನಿಟ್ಟಿನಲ್ಲಿ ಸರ್ಕಾರ ನಿರಂತರವಾಗಿ ಕಾರ್ಯನಿರ್ವಹಿಸಿದೆ ಎಂದು ಮೋದಿ ತಿಳಿಸಿದ್ದಾರೆ.

‘ಬಡವರ ಕಲ್ಯಾಣದ 12 ವರ್ಷಗಳು’ ಎಂಬ ಅಭಿಯಾನದ ಅಂಗವಾಗಿ ಮಾಡಿದ ಸಂದೇಶದಲ್ಲಿ, ಬಡವರ ಜೀವನಮಟ್ಟ ಸುಧಾರಿಸುವಲ್ಲಿ ತಂತ್ರಜ್ಞಾನದ ಪಾತ್ರವನ್ನು ಅವರು ವಿಶೇಷವಾಗಿ ಉಲ್ಲೇಖಿಸಿದ್ದಾರೆ. ನೇರ ನಗದು ವರ್ಗಾವಣೆ ಹಾಗೂ ಅಂಕೀಯ ವ್ಯವಸ್ಥೆಗಳ ಮೂಲಕ ಸರ್ಕಾರದ ನೆರವು ಯಾವುದೇ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಇದರಿಂದ ಸೋರಿಕೆ ತಡೆಯಲ್ಪಟ್ಟಿದ್ದು, ಆಡಳಿತದ ಪಾರದರ್ಶಕತೆ ಮತ್ತು ದಕ್ಷತೆ ಹೆಚ್ಚಾಗಿದೆ. ಅಲ್ಲದೆ, ಸರ್ಕಾರದ ಮೇಲಿನ ಸಾರ್ವಜನಿಕರ ವಿಶ್ವಾಸವೂ ಬಲಗೊಂಡಿದೆ ಎಂದು ಅವರು ಹೇಳಿದ್ದಾರೆ.

ಬಡವರ ಕಲ್ಯಾಣದ ಈ ಪಯಣವು ಈಗ ಮಾನವ ಸಬಲೀಕರಣ ಮತ್ತು ವಿಕಸಿತ ಭಾರತದ ನಿರ್ಮಾಣದತ್ತ ಸಾಗುತ್ತಿರುವ ಸಾಮೂಹಿಕ ಚಳವಳಿಯಾಗಿ ರೂಪುಗೊಂಡಿದೆ ಎಂದು ಮೋದಿ ತಿಳಿಸಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST