LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ದಿ. ೧೨ ಹಾಗು ೧೯ ರಂದು ರಾಜ್ಯಕ್ಕೆ ಪ್ರಧಾನಿ ಭೇಟಿ

ಬೆಂಗಳೂರು: ಈ ತಿಂಗಳ ೧೨ ಹಾಗು ೧೯ ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ೧೨ ರಂದು ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.



ಬೆಂಗಳೂರಿನಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಬೊಮ್ಮಾಯಿ ಮಾತನಾಡಿ, ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗಲಿದ್ದಾರೆ. ಏಳು ದಿನ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ ೨೮ ರಾಜ್ಯಗಳು ಹಾಗೂ ೮ ಕೇಂದ್ರೀಯ ಪ್ರಾಂತ್ಯದಿಂದ ಜನ ಪಾಲ್ಗೊಳ್ಳುತ್ತಿದ್ದಾರೆ ಎಂದು ತಿಳಿಸಿದರು.



ನಂತರ ಜನವರಿ ೧೯ಕ್ಕೆ ನಾರಾಯಣಪುರಕ್ಕೆ ಮೋದಿ ಆಗಮಿಸಿ, ಕೇಂದ್ರ ಹಾಗೂ ರಾಜ್ಯ ಅನುದಾನಿತ ನಾರಾಯಣಪುರ ಎಡದಂಡೆ ಕಾಲುವೆ ಆಧುನೀಕರಣದ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಎಂದು ಅವರು ತಿಳಿಸಿದರು.



ಇದೇ ಸಂದರ್ಭದಲ್ಲಿ ಗುಲ್ಬರ್ಗಾದ ಬಂಜಾರ ಸಮಾವೇಶ ನಡೆಸುವ ಯೋಜನೆಯಿದ್ದು, ಪ್ರಧಾನಿ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಇನ್ನೂ ನಿಶ್ಚಯವಾಗಿಲ್ಲ ಎಂದು ಬೊಮ್ಮಾಯಿ ತಿಳಿಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ