LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಪರೀಕ್ಷೆ ಇಲ್ಲದೇ ಬಡ್ತಿ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರಿಗೆ ಯಾವುದೇ ಪರೀಕ್ಷೆ ಇಲ್ಲದೆ ಬಡ್ತಿ ನೀಡಲು ನಿರ್ಧರಿಸಿದೆ. ಬಡ್ತಿ ಪ್ರಮಾಣವನ್ನು ಶೇಕಡ 40ಕ್ಕೆ ಹೆಚ್ಚಳ ಮಾಡಲಾಗಿದೆ.



ಮುಂದಿನ ಬಾರಿ ಆರರಿಂದ ಎಂಟನೇ ತರಗತಿ ಶಿಕ್ಷಕರ ನೇಮಕಾತಿ ವೇಳೆ ಶೇಕಡ 60 ರಷ್ಟು ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲಿದ್ದು, ಶೇಕಡ 40ರಷ್ಟು ಹುದ್ದೆಗಳಿಗೆ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಪದವೀಧರ ಶಿಕ್ಷಕರಿಗೆ ಯಾವುದೇ ಪರೀಕ್ಷೆ ಇಲ್ಲದೆ ಬಡ್ತಿ ನೀಡಲಾಗುವುದು. ಶಿಕ್ಷಣ ಇಲಾಖೆಯ ಈ ಪ್ರಸ್ತಾವನೆಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ನೀಡಲಾಗಿದೆ.



ಈ ಮೂಲಕ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ. ರಾಜ್ಯದಲ್ಲಿ 1.53 ಲಕ್ಷ ಪ್ರಾಥಮಿಕ ಶಾಲಾ ಶಿಕ್ಷಕರಿದ್ದು, ಇವರಲ್ಲಿ 85,000 ಶಿಕ್ಷಕರು ಪದವೀಧರ ಶಿಕ್ಷಕರಾಗಿದ್ದಾರೆ. ನೇಮಕಾತಿ ಸಂದರ್ಭದಲ್ಲಿ ಬಡ್ತಿ ನೀಡಬೇಕೆಂಬ ಒತ್ತಾಯ ಕೇಳಿ ಬಂದಿದ್ದು, ಶಿಕ್ಷಣ ಇಲಾಖೆ ಪರೀಕ್ಷೆ ಇಲ್ಲದೆ ಬಡ್ತಿಗೆ ಅವಕಾಶ ನೀಡಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ