LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನಿಷೇಧ ಆದೇಶ ಧಿಕ್ಕರಿಸಿ ಪ್ರತಿಭಟನೆ: ಎಂಇಎಸ್ ಕಾರ್ಯಕರ್ತರು ವಶಕ್ಕೆ

ಬೆಳಗಾವಿ: ಅಧಿವೇಶನದ ವಿರೋಧವಾಗಿ ಮಹಾಮೇಳ ನಡೆಸಲು ಮುಂದಾಗಿದ್ದ ನಾಡದ್ರೋಹಿ ಎಂಇಎಸ್ ಪುಂಡರನ್ನು ಬೆಳಗಾವಿ ಪೊಲೀಸ ವಶಕ್ಕೆ ಪಡೆದಿದ್ದಾರೆ.



ಪ್ರತಿವರ್ಷ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ನಾಡದ್ರೋಹಿ ಎಂಇಎಸ್ ಅಧಿವೇಶನಕ್ಕೆ ವಿರುದ್ಧವಾಗಿ ಮಹಾಮೇಳ ಆಯೋಜನೆ ಮಾಡುತ್ತಿದ್ದು ಈ ಬಾರಿಯು ಎಂಇಎಸ್ ಮಹಾಮೇಳ ಆಯೋಜನೆ ಮಾಡಿದೆ. ಹಾಗಾಗಿ ಜಿಲ್ಲಾಡಳಿತ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿಷೇಧ ಹೇರಿತ್ತು. ಆದರೆ ಜಿಲ್ಲಾಡಳಿತ ನಿಷೇಧ ಧಿಕ್ಕರಿಸಿ ಎಂಇಎಸ್ ಪುಂಡರು ನಾಡದ್ರೋಹಿ ಘೋಷಣೆ ಕೂಗಿ ಮಹಾಮೇಳ ಆಚರಣೆಗೆ ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದರು.‌



ಎಂಇಎಸ್ ನಾಯಕರಾದ ಮನೋಹರ ಕಿಣೇಕರ, ಆರ್ ಎಂ. ಪಾಟೀಲ, ಪ್ರಕಾಶ ಶಿರೋಳಕರ, ಪ್ರಕಾಶ ಮರ್ಕಾಳೆ ಸೇರಿ  ನಗರದ ಸಂಭಾಜಿ ವೃತ್ತದ ಬಳಿ 20ಕ್ಕೂ ಅಧಿಕ ಜನರನ್ನು ವಶಕ್ಕೆ ಪಡೆಯಲಾಗಿದೆ.‌ ಎಂಇಎಸ್ ಮಹಾಮೇಳದ ಹಿನ್ನೆಲೆ ಬೆಳಗಾವಿ‌ ನಗರದಲ್ಲಿ ಬಿಗಿ ಖಾಕಿ ಸರ್ಪಗಾವಲು ಹಾಕಲಾಗಿತ್ತು. ನಗರದ ಮೂರು ಮೈದಾನ, ಒಂದು ವೃತ್ತದಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಡಿಸಿಪಿ ರೋಹನ್ ಜಗದೀಶ ನೇತೃತ್ವದಲ್ಲಿ ಬೀಗಿ ಭದ್ರತೆ ಒದಗಿಸಲಾಗಿತ್ತು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ