LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಭೋರ್ಗರೆಯುತ್ತಿರುವ ಕೃಷ್ಣಾ ನದಿ: ನೆರೆ ಭೀತಿಯಲ್ಲಿ ರಬಕವಿ-ಬನಹಟ್ಟಿ

ಬಾಗಲಕೋಟ : ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಸಮೀಪದ ಹಿಪ್ಪರಗಿ ಜಲಾಶಯಕ್ಕೆ ಗುರುವಾರ ಬೆಳಿಗ್ಗೆ 7 ಗಂಟೆ ಹೊತ್ತಿಗೆ 168565 ಕ್ಯೂಸೆಕ್ಸ ಒಳ ಹರಿವು ಇದ್ದು, 167815 ಹೊರ ಹರಿವು ದಾಖಲಾಗಿದೆ.



ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಬನಹಟ್ಟಿ ಸಮೀಪದಲ್ಲಿ ಕೃಷ್ಣಾ ನದಿ ಭೋರ್ಗರೆಯುತ್ತಿದೆ. ಈ ಕಾರಣ ತಾಲೂಕಿನ ತಮದಡ್ಡಿ, ಹಳಿಂಗಳಿ, ಮದನಮಟ್ಟಿ, ಅಸ್ಕಿ,ಸೇರಿದಂತೆ ಕೃಷ್ಣಾ ತೀರದ ಅನೇಕ ಗ್ರಾಮಗಳ ಗ್ರಾಮಸ್ಥರಲ್ಲಿ ಪ್ರವಾಹ ಭೀತಿ ಎದುರಾಗಿದೆ.



ಜಲಾಶಯದ ಹೊರ ಹರಿವು ಮುಕ್ತವಾಗಿದ್ದರೂ ಕೃಷ್ಣಾ ನದಿಯ ಒಳ ಹರಿವು ಏರಿಳಿತವಾಗುತ್ತಿದೆ. ಜಲಾಶಯದಲ್ಲಿ ನೀರು ಸಂಗ್ರಹಿಸದೇ ಬಂದಷ್ಟೇ ನೀರನ್ನು ಹೊರಹಾಕುತ್ತಿದ್ದು, ನದಿ ತೀರದ ಜನತೆ ಜಾಗೃತೆಯಲ್ಲಿರಬೇಕು. ಕೆಲ ಗ್ರಾಮಗಳ ನದಿ ತೀರ ಪ್ರದೇಶದ ನಿವಾಸಿಗಳು ತಮ್ಮ ಸರಂಜಾಮು, ಜನ-ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಲು ಸನ್ನದ್ಧರಾಗಿರಬೇಕು ಎಂದು ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಕರ ತಿಳಿಸಿದ್ದಾರೆ.



ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಾದ ಕೊಯ್ನಾದಲ್ಲಿ 163 ಮಿ.ಮೀ, ನವುಜಾದಲ್ಲಿ 237 ಮಿ.ಮೀ ಮತ್ತು ಮಹಾಬಳೇಶ್ವರ ಪ್ರದೇಶದಲ್ಲಿ 307 ಮಿ.ಮೀ, ಮಳೆಯಾಗಿದೆ ಎಂದು ವರದಿಯಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ