LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ರಮೇಶ ಕಲ್ಯಾಣಶೆಟ್ಟಿ ನಿಧನ

ಗೋಕಾಕ, ಜೂನ್ 18: ದಿ ಗೋಕಾಕ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ಮಾರ್ಕೆಟ್ ಯಾರ್ಡ್ ಶಾಖೆಯ ಶಾಖಾ ವ್ಯವಸ್ಥಾಪಕರಾಗಿದ್ದ ರಮೇಶ ಮುರಿಗೆಪ್ಪ ಕಲ್ಯಾಣಶೆಟ್ಟಿ ಅವರು ಗುರುವಾರ ಮುಂಜಾನೆ ತೀವ್ರ ಹೃದಯಾಘಾತದಿಂದ ನಿಧನರಾದರು. ಅವರಿಗೆ 55 ವರ್ಷ ವಯಸ್ಸಾಗಿತ್ತು.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಮ್ಮ ಸೇವೆ ಮತ್ತು ಸೌಜನ್ಯಯುತ ನಡೆ-ನುಡಿಗಳ ಮೂಲಕ ಗುರುತಿಸಿಕೊಂಡಿದ್ದ ಅವರು ಅಕಾಲಿಕವಾಗಿ ನಿಧನರಾಗಿರುವುದು ಕುಟುಂಬಸ್ಥರು, ಬಂಧು-ಬಳಗ ಹಾಗೂ ಸ್ನೇಹಿತ ವಲಯದಲ್ಲಿ ದುಃಖದ ವಾತಾವರಣ ಮೂಡಿಸಿದೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಅವರ ಅಂತ್ಯಯಾತ್ರೆಯು ಗುರುವಾರ ಸಂಜೆ 6 ಗಂಟೆಗೆ ಸೋಮವಾರಪೇಟೆಯಲ್ಲಿರುವ ಅವರ ನಿವಾಸದಿಂದ ಹೊರಡಲಿದ್ದು, ಜ್ಞಾನ ಮಂದಿರದ ಎದುರಿನ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ರಮೇಶ ಕಲ್ಯಾಣಶೆಟ್ಟಿ ಅವರ ನಿಧನಕ್ಕೆ ಬ್ಯಾಂಕ್ ಸಿಬ್ಬಂದಿ, ಗ್ರಾಹಕರು ಸಂತಾಪ ವ್ಯಕ್ತಪಡಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ