LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕರ್ನಾಟಕಕ್ಕೆ ನೀರು ಬಿಡುವ ಕುರಿತು ಮರು ಪರಿಶೀಲನೆ –ಮಹಾರಾಷ್ಟ್ರ ಸಚಿವರ ಬೆದರಿಕೆ

ನಾಗಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಜವಾಬ್ದಾರಿಯುತ ಹೇಳಿಕೆ ನೀಡುತ್ತಿದ್ದು ಮಹಾರಾಷ್ಟ್ರದ ಣೆಕಟ್ಟುಗಳಿಂದ ಕರ್ನಾಟಕಕ್ಕೆ ನೀರು  ಹರಿಸುವ ಬಗ್ಗೆ ಮರು ಪರಿಶೀಲಿಸಬೇಕಾಗುತ್ತದೆ ಎಂದು ಮಹಾರಾಷ್ಟ್ರ ಸಚಿವ ಶಂಭುರಾಜ ದೇಸಾಯಿ ಎಚ್ಚರಿಕೆ ನೀಡಿದ್ದಾರೆ.  



ಕರ್ನಾಟಕದೊಂದಿಗಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ತಂಡದೊಂದಿಗೆ ಸಮನ್ವಯತೆಗಾಗಿ ಕ್ಯಾಬಿನೆಟ್ ಸಚಿವರಾದ ಚಂದ್ರಕಾಂತ ಪಾಟೀಲ ಮತ್ತು ಶಂಭುರಾಜ ದೇಸಾಯಿ ಅವರನ್ನು ನೋಡಲ್ ಸಚಿವರನ್ನಾಗಿ ಕಳೆದ ತಿಂಗಳು ಮಹಾರಾಷ್ಟ್ರ ಸರ್ಕಾರ ನೇಮಕ ಮಾಡಿತ್ತು



ಗಡಿ ವಿವಾದ ಮುಗಿದ ಕತೆಯಾಗಿದ್ದು, ಮಹಾರಾಷ್ಟ್ರಕ್ಕೆ ಒಂದು ಇಂಚು ಕೂಡಾ ಭೂಮಿ ನೀಡುವುದಿಲ್ಲ ಎಂಬ ನಿಲುವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಸದನದಲ್ಲಿ ಪುನರುಚ್ಚರಿಸಿದ್ದರು. ಮಹಾರಾಷ್ಟ್ರದ ಗಡಿ ಖ್ಯಾತೆ ಬಗ್ಗೆ ಉಭಯ ಸದನಗಳಲ್ಲಿ ಖಂಡನಾ ನಿರ್ಣಯ ಮಂಡಿಸಲು ಸಹ ತೀರ್ಮಾನಿಸಲಾಗಿತ್ತು. 



ವಿಧಾನಭವನದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ದೇಸಾಯಿ, ಇಂತಹ ಹೇಳಿಕೆಗಳು ಸಾಂವಿಧಾನಿಕ ಹುದ್ದೆಯಲ್ಲಿರುವ ಬಸವರಾಜ ಬೊಮ್ಮಾಯಿ ಅವರಿಗೆ ಶೋಭೆ ತರುವುದಿಲ್ಲ. ಗಡಿ ವಿವಾದ ಕೋರ್ಟನಲ್ಲಿರುವಾಗ ಬೊಮ್ಮಾಯಿ ಅವರ ಇಂತಹ ಬೆದರಿಕೆ ಭಾಷೆ ಒಳ್ಳೆಯದಲ್ಲ.ಅದನ್ನು ಅವರು ನಿಲ್ಲಿಸಬೇಕು ಎಂದು ದೇಸಾಯಿ ಹೇಳಿದರು. ಮಹಾರಾಷ್ಟ್ರ ಕೂಡಾ ಇದೇ ಭಾಷೆಯಲ್ಲಿ ಪ್ರತಿಕ್ರಿಯಿಸಬಹುದು ಆದರೆ, ನಾವು ಪ್ರಚೋದಿಸುವುದಿಲ್ಲ ಎಂದರು.



ಬೇಸಿಗೆ ಅವಧಿಯಲ್ಲಿ ಕರ್ನಾಟಕ ಕೊಂಕಣ ಮತ್ತು ಕೃಷ್ಣ ಅಣೆಕಟ್ಟುಗಳ ನೀರಿನ ಹೆಚ್ಚಿನ ರೀತಿಯಲ್ಲಿ ಅವಲಂಬಿತರಾಗಿರುವುದನ್ನು ಬೊಮ್ಮಾಯಿ ಗಮನದಲ್ಲಿಟ್ಟುಕೊಳ್ಳಬೇಕು, ಇಂತಹ ಹೇಳಿಕೆ ನೀಡುವುದನ್ನು ಅವರುನಿಲ್ಲಿಸದಿದ್ದರೆ ಕರ್ನಾಟಕಕ್ಕೆ ನೀರು ಪೂರೈಕೆ ಬಗ್ಗೆ ಮಹಾರಾಷ್ಟ್ರ ಮರು ಚಿಂತಿಸಲಾಗುವುದು ಎಂದು ದೇಸಾಯಿ ಹೇಳಿದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ