LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಶಾಲೆಗಳಲ್ಲಿ ಮಕ್ಕಳ ಸುರಕ್ಷತಾ ಸಮಿತಿ ರಚಿಸಲು ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಮಾರ್ಗಸೂಚಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದ್ದು, ಎಲ್ಲಾ ಶಾಲೆಗಳು ಅನುಸರಿಸಬೇಕೆಂದು ಸೂಚನೆ ನೀಡಲಾಗಿದೆ.



ಮಾರ್ಗಸೂಚಿಯ ಪ್ರಕಾರ ಪ್ರತಿ ಶಾಲೆಯಲ್ಲಿ ಮಕ್ಕಳ ಸುರಕ್ಷತಾ ಸಮಿತಿ ರಚಿಸಬೇಕು. ಇತ್ತೀಚೆಗೆ ಮಕ್ಕಳ ಮೇಲಿನ ದೌರ್ಜನ್ಯ, ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯ ಸಮರ್ಪಕ ಅನುಷ್ಠಾನಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ.



ಶಾಲೆಗಳಲ್ಲಿ ಮಕ್ಕಳ ಸುರಕ್ಷತಾ ಸಮಿತಿ ರಚಿಸಬೇಕಿದ್ದು, ಶಾಲಾ ಮುಖ್ಯಸ್ಥರು ಸಮಿತಿ ಅಧ್ಯಕ್ಷರಾಗಿರುತ್ತಾರೆ. ಕನಿಷ್ಠ ಇಬ್ಬರು ಶಿಕ್ಷಕರು, ಮೂವರು ಪೋಷಕರು, ಎಸ್.ಡಿ.ಎಂ.ಸಿ. ಅಧ್ಯಕ್ಷರು, ಇಬ್ಬರು ಮಕ್ಕಳು, ಒಬ್ಬರು ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಇರಬೇಕಿದೆ. ಪ್ರತಿ ಶಾಲೆಗಳಲ್ಲಿಯೂ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಮತ್ತು 14499 ಟೋಲ್ ಫ್ರೀ ಸಂಖ್ಯೆಯನ್ನು ಗೋಡೆ ಬರಹದಲ್ಲಿ ಬರೆಸಬೇಕು.



ಎಲ್ಲ ಶಾಲೆಗಳಲ್ಲಿ ದೂರು ಮತ್ತು ಸಲಹೆ ಪೆಟ್ಟಿಗೆಗಳನ್ನು ಮಕ್ಕಳಿಗೆ ನಿಲುಕುವಂತಹ ಎತ್ತರದಲ್ಲಿ ಸ್ಥಾಪಿಸಬೇಕು. ಶಾಲೆಯ ಅವಧಿ, ತರಗತಿವಾರು ವೇಳಾಪಟ್ಟಿ, ಅನುಮೋದಿತ ವಿಶೇಷ ತರಗತಿಗಳ ವೇಳಾಪಟ್ಟಿಯನ್ನು ಪೋಷಕರಿಗೆ ನೀಡಬೇಕು ಎಂದು ಹೇಳಲಾಗಿದೆ.



ಶಾಲೆಗಳಲ್ಲಿ ಎಲ್ಲಾ ಸಿಬ್ಬಂದಿಗೆ ಗುರುತಿನ ಚೀಟಿ ಕಡ್ಡಾಯವಾಗಿದೆ. ಶಾಲೆ ಆರಂಭಕ್ಕೆ ಅರ್ಧ ಗಂಟೆ ಮೊದಲು ಸಿಬ್ಬಂದಿ ಹಾಜರಾಗಬೇಕು. ಬೆಳಗ್ಗೆ ಮತ್ತು ಮಧ್ಯಾಹ್ನ ಕಡ್ಡಾಯವಾಗಿ ಮಕ್ಕಳ ಹಾಜರಾತಿ ದಾಖಲಿಸಬೇಕು. ಕಾರ್ಯನಿಮಿತ್ತ ಮಕ್ಕಳನ್ನು ಹೊರಗೆ ಕಳುಹಿಸುವಂತಿಲ್ಲ. ಮಕ್ಕಳು ಸುರಕ್ಷಿತವಾಗಿ ಮನೆ ತಲುಪಲು ಕ್ರಿಯಾಯೋಜನೆ ರೂಪಿಸಬೇಕು. ಶಾಲೆಗಳಲ್ಲಿ ಚೈಲ್ಡ್ ರೈಡ್ ಕ್ಲಬ್, ಮೀನಾ ತಂಡಗಳನ್ನು ರಚಿಸಬೇಕು. ಕಲಿಕೆಗೆ ಭಯಮುಕ್ತ, ಮಕ್ಕಳ ಸ್ನೇಹಿ ವಾತಾವರಣ ಸೃಷ್ಟಿಸಬೇಕೆಂದು ಹೇಳಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ