LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಅಧಿಕೃತ ಪತ್ರ ಬಿಡುಗಡೆ ಮಾಡಿ ಕಾಂಗ್ರೆಸ್‌ಗೆ ಮತ ನೀಡುವಂತೆ ಕರ್ನಾಟಕ ವೀರಶೈವ ಲಿಂಗಾಯತ ವಿಚಾರ ವೇದಿಕೆಯ ಮನವಿ

ಬೆಂಗಳೂರು, ಮೇ 7- ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ತನ್ನ ಬೆಂಬಲ ನೀಡುವುದಾಗಿ ಅಧಿಕೃತ ಪತ್ರವನ್ನು ಕರ್ನಾಟಕ ವೀರಶೈವ ಲಿಂಗಾಯತ ವೇದಿಕೆ ಬಿಡುಗಡೆ ಮಾಡಿದ್ದು ಲಿಂಗಾಯತ ಸಮುದಾಯದ ಜನರು ಕಾಂಗ್ರೆಸ್ಗೆ ಮತ ನೀಡುವಂತೆ ವೇದಿಕೆ ಮನವಿ ಮಾಡಿದೆ.



ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಶನಿವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಸಂಘಟನೆಯ ಮುಖಂಡ ಕೆ. ವಿನಾಗರಾಜಮೂರ್ತಿ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷವು ಲಿಂಗಾಯತರನ್ನು ಕಡೆಗಣಿಸಿದೆ. ನಾವು ಹಿಂದುತ್ವದಲ್ಲಿ ನಂಬಿಕೆ ಇರುವವರು. ಹಿಂದುತ್ವದಲ್ಲೇ ಮುಂದುವರಿಯುತ್ತೇವೆ. ನಮಗೆ ಲಿಂಗಾಯತರ ಅವಶ್ಯಕತೆ ಇಲ್ಲ. ಇನ್ನೆಷ್ಟುದಿನ ಲಿಂಗಾಯತರನ್ನು ಓಲೈಸಿಕೊಂಡಿರಬೇಕು ಎಂದು ಬಿ.ಎಲ್. ಶಂಕರ ಅವರು ಹೇಳುವ ಮೂಲಕ ಅಹಂಕಾರದ ಮಾತುಗಳನ್ನಾಡಿದ್ದಾರೆ ಎಂದು ಆರೋಪಿಸಿದ್ದಾರೆ.



ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಾಗಿನಿಂದ ಒಂದಲ್ಲ ಒಂದು ರೀತಿಯಲ್ಲಿ ಲಿಂಗಾಯತರನ್ನು ಕಡೆಗಣಿಸುತ್ತಲೇ ಇದೆ. ಪಠ್ಯಪುಸ್ತಕದಲ್ಲಿ ವಚನಕಾರರನ್ನು ಕಡೆಗಣಿಸಿದರು. ವಚನ ಸಾಹಿತ್ಯವನ್ನು ಕೈಬಿಟ್ಟರು. ಬಸವಣ್ಣನ ವಿಚಾರಧಾರೆಗಳನ್ನು ತಿರುಚಿರುವುದು ಸ್ಪಷ್ಟವಾಗಿ ಗೋಚರವಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.



ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಚನ ಸಂಗೀತೋತ್ಸವ ಕೈಬಿಡಲಾಗಿದೆ. ಸಂಗೀತೋತ್ಸವಕ್ಕೆ ಮೀಸಲಿರಿಸಲಾಗಿದ್ದ 90 ಲಕ್ಷರೂಪಾಯಿಗಳನ್ನು ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಚಿವ ಸುನೀಲಕುಮಾರಅವರು ಕಾರ್ಕಳ ಉತ್ಸವಕ್ಕೆ ಬಳಸಿಕೊಂಡರು ಎಂದು ಆರೋಪಿಸಿದರು.



ರಾಜ್ಯದಲ್ಲಿ ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ, ಲಿಂಗಾಯತ ನಾಯಕ ಬಿ.ಎಸ್.ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿಸಿ ಕೆಳಗಿಳಿಸಲಾಯಿತು. ಮಾಜಿ ಸಿಎಂ ಜಗದೀಶಶೆಟ್ಟರ್ಅವರಿಗೆ ಟಿಕೆಟ್ಕೈ ತಪ್ಪುವಂತೆ ಮಾಡಲಾಯಿತು. ಮಾಜಿ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೂ ಟಿಕೆಟ್ಕೈತಪ್ಪುವಂತೆ ಮಾಡಿ, ಅವರು ಬಿಜೆಪಿಯನ್ನು ತೊರೆಯುವಂತೆ ಮಾಡಲಾಯಿತು. ಆಯನೂರು ಮಂಜುನಾಥ, ಸೊಗಡು ಶಿವಣ್ಣ ಹಾಗೂ ಸಂಜಯಪಾಟೀಲಅವರನ್ನು ಮೂಲೆಗುಂಪು ಮಾಡಲಾಗಿದೆ ಎಂದು ವಾಗ್ದಾಳಿ ನಡೆಸಿದರು.



ವೀರಶೈವ ಹಾಗೂ ಲಿಂಗಾಯತ ಸಮುದಾಯಕ್ಕೆ ಬಿಜೆಪಿ ಅನ್ಯಾಯ ಮಾಡಿದೆ. ಹಿನ್ನೆಲೆಯಲ್ಲಿ ನಾವು ಬಿಜೆಪಿ ವಿರುದ್ಧ ಮತ ಚಲಾಯಿಸುವಂತೆ ಕೇಳಿಕೊಳ್ಳುತ್ತೇವೆ. ಬಿಜೆಪಿಯನ್ನು ಚುನಾವಣೆಯಲ್ಲಿ ಸೋಲಿಸಬೇಕಿದೆ. ಮೂಲಕ ಲಿಂಗಾಯತರು ಬಿಜೆಪಿಗೆ ತಕ್ಕ ಪಾಠ ಕಲಿಸಬೇಕಿದೆ ಎಂದು ಹೇಳಿದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು