LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಳಗಾವಿ ಅಧಿವೇಶನದಲ್ಲೇ ಸದಾಶಿವ ವರದಿ ಮಂಡಿಸಲು ಮನವಿ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿಯೇ ಎಜೆ ಸದಾಶಿವ ಆಯೋಗದ ವರದಿ ಮಂಡಿಸಿ ಒಳ ಮೀಸಲಾತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ತಿಳಿಸಿದ್ದಾರೆ.



ಒಳ ಮೀಸಲಾತಿ ಸಂಬಂಧ ಸದಾಶಿವ ಆಯೋಗದ ವರದಿ ಜಾರಿ ಕುರಿತಂತೆ ಪರಿಶಿಷ್ಟ ಜಾತಿಗೆ ಸೇರಿದ ಸಚಿವರು ಮತ್ತು ಶಾಸಕರ ಸಭೆಯ ಬಳಿಕ ಅವರು ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಒಳ ಮೀಸಲಾತಿ ಕುರಿತು ಚಿತ್ರದುರ್ಗ ನಗರದಲ್ಲಿ ಎಸ್ಸಿ-ಎಸ್ಟಿ ಸಮಾವೇಶ ನಡೆಸಲಾಗಿತ್ತು. ಆಗ ಹತ್ತು ಹಲವು ಘೋಷಣೆಗಳನ್ನು ಮಾಡಿದ್ದೆವು. ಅದರಲ್ಲಿ ಸದಾಶಿವ ಆಯೋಗದ ವರದಿಯನ್ನು ಮೊದಲ ಅಧಿವೇಶನದಲ್ಲಿಯೇ ಸದನದ ಮುಂದಿಡಲಾಗುವುದು ಎಂದು ಭರವಸೆ ನೀಡಲಾಯಿತು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗಿಲ್ಲ ಎಂದರು.



ಸಚಿವರಾದ ಪ್ರಿಯಾಂಕ ಖರ್ಗೆ. ಡಾ. ಎಚ್ಸಿ ಮಹದೇವಪ್ಪ, ಕೆಎಚ್ ಮುನಿಯಪ್ಪ ಮತ್ತು ನಮ್ಮಲ್ಲಿ ಕೆಲವರು ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಬಗ್ಗೆ ಸಮಾಜದ ಮುಖಂಡರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.



ನ್ಯಾ. ಸದಾಶಿವ ಆಯೋಗದ ವರದಿಯಂತೆ ಒಳ ಮೀಸಲಾತಿ ವಿಚಾರವಾಗಿ ತೀವ್ರ ಸ್ವರೂಪದ ಹೋರಾಟ ನಡೆಸಿ, ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮಾದಿಗ ಸಮುದಾಯದ ಮುಖಂಡರಿಗೆ ಆಹಾರ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಸೋಮವಾರ ಕರೆ ನೀಡಿದ್ದರುಸದಾಶಿವ ಆಯೋಗದ ಶಿಫಾರಸು ಜಾರಿಗಾಗಿ ತೀವ್ರ ಆಂದೋಲನದ ಅಗತ್ಯವಿದೆ. ನಿಮ್ಮ ಸ್ಥಳೀಯ ಶಾಸಕರ ಮನೆಗೆ ಮುತ್ತಿಗೆ ಹಾಕಿ. ಅವರಿಗೆ ಕಾರ್ಯಕ್ರಮಗಳನ್ನು ನಡೆಸಲು ಬಿಡಬೇಡಿ. ಸಚಿವನಾಗಿದ್ದುಕೊಂಡೇ ನಾನು ನಿಮಗೆ ರೀತಿ ಹೇಳುತ್ತಿದ್ದೇನೆ ಎಂದು ಕರ್ನಾಟಕ ಆದಿಜಾಂಬವ ಸಾಂಸ್ಕೃತಿಕ ಸಮಿತಿಯ ಮುಖಂಡರ ಸಭೆಯಲ್ಲಿ ಮುನಿಯಪ್ಪ ಅವರು ತಮ್ಮ ಭಾಷಣದಲ್ಲಿ ಹೇಳಿದ್ದರು.



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ