LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಎಸ್ ಎಸ್ ಎಲ್ ಸಿಯಲ್ಲಿ ಪಾಸಾಗಿ ಸಂಭ್ರಮದಲ್ಲಿದ್ದ ವಿದ್ಯಾರ್ಥಿನಿಯ ರುಂಡ ಚೆಂಡಾಡಿದ ಕಿರಾತಕ!

ಕೊಡಗು : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಖುಷಿಯಾಗಿದ್ದ ವಿದ್ಯಾರ್ಥಿನಿಯೊಬ್ಬಳ ತಲೆ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಸೋರ್ಲಬ್ಬಿ ಗ್ರಾಮದಲ್ಲಿ ನಡೆದಿದೆ.



ನಿನ್ನೆಯಷ್ಟೇ ಎಸ್.ಎಸ್.ಎಲ್.ಸಿ ಫಲಿತಾಂಶ ಬಂದಿತ್ತು. ಉತ್ತಮ ಅಂಕಗಳಿಸಿದ ಸಂಭ್ರಮದಲ್ಲಿದ್ದ ಮೀನಾ ಎಂಬ ವಿದ್ಯಾರ್ಥಿನಿಯ ತಲೆಯನ್ನು ಓಂಕಾರಪ್ಪ ಎಂಬಾತ ಕತ್ತರಿಸಿ ವ್ಯಕ್ತಿ ಕ್ರೌರ್ಯ ಮೆರೆದಿದ್ದಾನೆ. ನಿರ್ಜನ ಪ್ರದೇಶಕ್ಕೆ ವಿದ್ಯಾರ್ಥಿನಿಯನ್ನು ಕರೆದೊಯ್ದು ರುಂಡ-ಮುಂಡ ಬೇರ್ಪಡಿಸಿ ಅಟ್ಟಹಾಸ ಮೆರೆದಿದ್ದಾನೆ.



ಕೃತ್ಯಕ್ಕೆ ಕಾರಣ:



ನಿನ್ನೆಯೇ ಓಂಕಾರಪ್ಪ ಜೊತೆ ವಿದ್ಯಾರ್ಥಿನಿ ಮೀನಾಳ ವಿವಾಹ ನಿಶ್ಚಿತಾರ್ಥವಾಗುವುದಿತ್ತು. ಹುಡುಗಿ ಅಪ್ರಾಪ್ತ ಇರುವ ಕಾರಣ ಇದನ್ನು ತಿಳಿದ ಗ್ರಾಮಸ್ಥರು ಬಾಲ್ಯ ವಿವಾಹದ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಸ್ಥಳಕ್ಕಾಗಮಿಸಿದ ಪೊಲೀಸರು ನಿಶ್ಚಿತಾರ್ಥ ನಿಲ್ಲಿಸಿದ್ದರು. ಬಳಿಕ ಎರಡೂ ಕುಟಿಂಬದವರು ತಮ್ಮ ತಮ್ಮ ಮನೆಗೆ ವಾಪಾಸ್ ಆಗಿದ್ದರು. ನಿಶ್ಚಿತಾರ್ಥ ನಿಂತಿದ್ದಕ್ಕೇ ಸಿಟ್ಟಿಗೆದ್ದು ಆರೋಪಿ ಮೀನಾಳನ್ನು ಇಷ್ಟು ಬರ್ಬರವಾಗಿ ಕೊಲೆ ಮಾಡಿರಬಹುದು ಎನ್ನಲಾಗಿದೆ.



ಘಟನಾ ಸ್ಥಳಕ್ಕೆ ಎಸ್ ಎಸ್ ಎಲ್ ತಂಡ, ಶ್ವಾನ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಘಟನೆ ನಡೆದ ಸ್ವಲ್ಪ ದೂರದಲ್ಲಿ ಮಚ್ಚು ಪತ್ತೆಯಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ