LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸುಳ್ಳಿನ ವಿಶ್ವವಿದ್ಯಾಲಯದ ಕುಲಪತಿ ಸೂಲಿಬೆಲೆಯೊಂದಿಗೆ ಚರ್ಚೆಯ ಅವಶ್ಯಕತೆ ಇಲ್ಲ : ಸತೀಶ ಜಾರಕಿಹೊಳಿ

ಬೆಳಗಾವಿ: ಹಿಂದು ಪದದ ಕುರಿತು ಮಾತನಾಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಚಕ್ರವರ್ತಿ ಸೂಲಿಬೆಲೆ ಬೆಳಗಾವಿಯ ಯಮಕನಮರಡಿಯಲ್ಲಿ ಬಹಿರಂಗ ಸವಾಲು ಹಾಕಿದ್ದರು. ಈಗ ಇದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಓಪನ್ ಚರ್ಚೆಗೆ ನಾವು ಸಿದ್ಧರಿದ್ದೇವೆ. ಆದರೆ ನಾವು ಸೂಲಿಬೆಲೆಯ 10 ವರ್ಷಗಳ ಹೇಳಿಕೆಗಳ ಪರಶೀಲನೆ ಮಾಡುತ್ತಿದ್ದೇವೆ. ಅವರು ಹೇಳಿದ್ದು ಇದುವರೆಗೆ ಏನಾದರೂ ನಿಜ ಆಗಿದೆಯಾ ಎನ್ನುವುದನ್ನು ನೋಡುತ್ತಿದ್ದೇವೆ. ಸೂಲಿಬೆಲೆ ಹೇಳಿದ್ದ ಚಿನ್ನದ ರಸ್ತೆ ಎಲ್ಲಿದೆ ಎಂದು ಹುಡುಕುತ್ತಿದ್ದೇವೆ ಎಂದಿದ್ದಾರೆ.



ಬೆಳಿಗ್ಗೆ ಬೆಂಗಳೂರಿಂದ ಮಂಗಳೂರಿಗೆ ಹೋಗಿ ಸಂಜೆ ಮತ್ತೆ ಬೆಂಗಳೂರು ಊಟಕ್ಕೆ ಬರಬೇಕು. ಅಂಥ ರಸ್ತೆ ಇದೆ ಅನ್ನುತ್ತಾರೆ. ಆ ರಸ್ತೆ ಎಲ್ಲಿದೆ ಹುಡುಕುತ್ತಿದ್ದೇವೆ, ಸೂಲಿಬೆಲೆ ಸುಳ್ಳು ವಿಶ್ವವಿದ್ಯಾಲಯದ ಕುಲಪತಿ ಎಂದು ಕಾಲೆಳೆದಿದ್ದಾರೆ.



ಅವನು ಹೇಳಿದ್ದರಲ್ಲಿ ಒಂದಾದರೂ ಸತ್ಯವಾಗಿದ್ದರೆ ನಾವು ಅವರ ಜೊತೆ ಚರ್ಚೆ ಮಾಡುತ್ತೇವೆ. ಇಂತಹ ವ್ಯಕ್ತಿಯ ಜೊತೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎನ್ನುವುದು ನನ್ನ ಕಾರ್ಯಕರ್ತರ ಹಾಗೂ ನನ್ನ ಅಭಿಪ್ರಾಯವಾಗಿದೆ ಎಂದು ಸತೀಶ ಹೇಳಿದ್ದಾರೆ.



ಅದರಂತೆ ಶಾಸಕ ಯತ್ನಾಳ ಹೇಳಿಕೆ ಬಗ್ಗೆಯೂ ಪ್ರತಿಕ್ರಿಯೆ ನೀಡಿದ ಅವರು, ಬೇಕಾದರೆ ಒಂದು ಪ್ರತ್ಯೇಕ ವೇದಿಕೆ ಕರೆದು ಮಾತನಾಡುತ್ತೇನೆ ಎಂದಿದ್ದಾರೆ. ಗೋಕಾಕ ​ಅನ್ನು ಬಿಹಾರ ಅಂತ ಮೊದಲಿನಿಂದ ಹೇಳುತ್ತಿದ್ದಾರೆ. ಅದಕ್ಕೆ ಗೋಕಾಕ ಜನರೇ ಉತ್ತರ ನೀಡುತ್ತಾರೆ. ಯತ್ನಾಳಗೆ ವಿಜಯಪುರಕ್ಕೆ ಹೋಗಿ ಬೈಯಬೇಕಿಲ್ಲ, ಎಲ್ಲಿ ಬೈದರೂ ಹೋಗಿ ಮುಟ್ಟುತ್ತದೆ. ಮುಟ್ಟಿಸುವ ಕೆಲಸ ನಾವು ಮಾಡುತ್ತೇವೆ ಎಂದು ಸತೀಶ​ ಜಾರಕಿಹೊಳಿ ಹೇಳಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ