LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಏಡ್ಸ, ಕ್ಯಾನ್ಸರ್ ಗೆ ಸ್ವಮೂತ್ರಪಾನ ಮದ್ದು : ಪಠ್ಯಪುಸ್ತಕದಲ್ಲಿ ಮುದ್ರಣ

ಬೆಂಗಳೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪ್ರಕಟಿಸಿರುವ ಪಠ್ಯಪುಸ್ತಕದಲ್ಲಿ ಏಡ್ಸ, ಕ್ಯಾನ್ಸರ್ ಗೆ ಸ್ವಮೂತ್ರಪಾನವೇ ಮದ್ದು ಎಂಬುದಾಗಿ ಹೇಳಿರುವುದು ಈಗ ಮೈಸೂರು ವಿವಿಯ ಪಠ್ಯಪುಸ್ತಕದಲ್ಲಿ ಮುದ್ರಣವಾಗಿದೆ.



ಮೈಸೂರು ವಿಶ್ವವಿದ್ಯಾನಿಲಯದ ಪದವಿ ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕವನ್ನು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಇಡಲಾಗಿದೆ. ಹೊಸ ಪಠ್ಯದಲ್ಲಿ ಮೂತ್ರ ಚಿಕಿತ್ಸೆಯ ಬಗ್ಗೆ ವಿವರಣೆಯನ್ನು ನೀಡಲಾಗಿದೆ.



ಮೂತ್ರ ಚಿಕಿತ್ಸೆಯು ಪ್ರಕೃತಿ ಚಿಕಿತ್ಸೆಯ ಒಂದು ಭಾಗ. ಪ್ರಕೃತಿಯು ರೋಗನಿರೋಧಕ ಶಕ್ತಿಯನ್ನು ಮನುಷ್ಯನಿಗೆ ಆತನ ದೇಹದಲ್ಲಿಯೇ ಒದಗಿಸುತ್ತದೆ. ಅಂದರೇ ಮೂತ್ರ. ಸಹಸ್ತಾರು ವರ್ಷಗಳಿಂದ ಯೋಗಿಗಳು ಮೂತ್ರ ಸೇವಿಸುತ್ತಿದ್ದರು ಎಂಬ ವಿಚಾರವಿದೆ. ಸಂಸ್ಕೃತ ಸಾಹಿತ್ಯ ನಿಧಿಯಲ್ಲಿ ಶಿವಾಂಬು ಸಂಹಿತೆಯಲ್ಲಿ ಈ ಬಗ್ಗೆ ಮಾಹಿತಿ ಇದೆ ಎಂದು ಹೇಳಲಾಗಿದೆ.



ಇದಲ್ಲದೇ ಬೈಬಲ್ ಗ್ರಂಥದಲ್ಲಿ ನಿಮ್ಮ ಆರೋಗ್ಯ ರಕ್ಷಣೆಗಾಗಿ ನಿಮ್ಮ ದೇಹವನ್ನೇ ಅವಲಂಬಿಸಿ ಎಂಬ ಉಲ್ಲೇಖವಿದೆ. ಆರ್ಮ್ ಸ್ಟ್ರಾಂಗ್ ಅವರು ಬರೆದಿರುವಂತ ವಾಟರ್ ಆಫ್ ಲೈಫ್ ಎಂಬ ಪುಸ್ತಕದಲ್ಲಿ ಬಗ್ಗೆ ವಿವರಣೆ ಇದೆ ಎಂದಿದೆ.



ಈ ಬಳಿಕ ಹೇಳುವಂಥ ವಿವರಣೆಯಲ್ಲಿ ಮೂತ್ರ ಚಿಕಿತ್ಸೆಯಿಂದ ಅಂದರೇ ಸ್ವಮೂತ್ರ ಪಾನ ಮತ್ತು ಲೇಪನದಿಂದ ಸಿಹಿಮೂತ್ರ ರೋಗ, ಏಡ್ಸ, ಕ್ಯಾನ್ಸರ್, ಕಣ್ಣು, ಕಿವಿ, ಹಲ್ಲು, ಚರ್ಮರೋಗಗಳನ್ನು ನಿಯಂತ್ರಿಸ ಬಹುದಾಗಿದೆ ಎಂಬ ವಿಚಾರವಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ