LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಹಿರಿಯ ಪತ್ರಕರ್ತ ಶಾಹೀದ ಧಾರವಾಡಕರ ನಿಧನ: ಸಚಿವ, ಶಾಸಕರು, ಸಂಪಾದಕರ ಸಂಘದ ಸಂತಾಪ

ಗೋಕಾಕ, 11: ಹಿರಿಯ ಪತ್ರಕರ್ತ ಶಾಹೀದ ಬಾಬಾಸಾಹೇಬ ಧಾರವಾಡಕರ ಅವರು ಶುಕ್ರವಾರ ಬೆಳಿಗ್ಗೆ ಗೋಕಾಕದ ಬಣಗಾರ ಓಣಿಯ ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 72 ವರ್ಷ ವಯಸ್ಸಾಗಿತ್ತು.



ಕೆಲ ದಿನಗಳಿಂದ ಅನಾರೋಗ್ಯದಿಂದಿದ್ದ ಅವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ನಾಲ್ವರು ಸಹೋದರರು, ಮೂವರು ಸಹೋದರಿಯರು ಮತ್ತು ಅಪಾರ ಬಂಧು ಬಳಗ ಬಿಟ್ಟು ಅಗಲಿದ್ದಾರೆ.



ತಂದೆ ದಿವಂಗತ ಬಿ.ಎನ್. ಧಾರವಾಡಕರ ಅವರು ನಡೆದ ಸಮತಾವಾದಿ ಸಿದ್ಧಾಂತದ ದಾರಿಯಲ್ಲಿಯೇ ಸಾಗಿದ ಅವರು,   70ರ ದಶಕದ ಆರಂಭದಲ್ಲಿ ಕಾರವಾರ ಮತ್ತು ಬಿಜಾಪುರದಿಂದ ಪ್ರಕಾಶಿತಗೊಳ್ಳುತ್ತಿದ್ದ ಯುಗದೀಪ ದಿನಪತ್ರಿಕೆಯ ಸಂಪಾದಕರಾಗಿ ಕೆಲ ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದಾರೆ. ನಂತರ 1975ರಿಂದ ಸುಮಾರು ಒಂದು ದಶಕ ಕಾಲ ಸಮದರ್ಶಿ ದಿನಪತ್ರಿಕೆಯ ಸಂಪಾದಕರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದಾರೆ. ಕಂಪೋಜಿಟರ್, ಪ್ರುಫ್ ರೀಡರ್, ವರದಿಗಾರ ಮತ್ತು ಸಂಪಾದಕರಾಗಿ  ಐದು ದಶಕಗಳಿಗೂ ಹೆಚ್ಚಿನ ಕಾಲ ಅವರು ಪತ್ರಿಕಾರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.



ಕುಂಟುತ್ತ ನಡೆದಿದ್ದ ಗೋಕಾಕದ ತಂಜೀಮ ಎಜುಕೇಶನ್ ಸೊಸಾಯಟಿಯ ಪ್ರಧಾನ ಕಾರ್ಯದರ್ಶಿಯಾಗಿ ಶಾಹೀದ ಧಾರವಾಡಕರ ಅವರು ಅದನ್ನು ಉತ್ತುಂಗ ಸ್ಥಿತಿಗೆ ತಲುಪಿಸಿದ್ದರು. ಅಲ್ಲದೇ ಗೋಕಾಕದಲ್ಲಿ ಪ್ರೆಸ್ ಕ್ಲಬ್ ಆರಂಭಕ್ಕೆ ಶಾಹೀದ ಅವರೇ ಮುಖ್ಯ ಕಾರಣಕರ್ತರಾಗಿದ್ದರು.



ದಿವಂಗತರ ಅಂತ್ಯಕ್ರಿಯೆ ಶುಕ್ರವಾರ ಸಂಜೆ 5.30 ಕ್ಕೆ ಗೋಕಾಕದಲ್ಲಿ ನೆರವೇರಿತು. ಸಾವಿರಾರು ಹಿಂದೂ-ಮುಸ್ಲಿಮ ಬಾಂಧವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.



ಸಂತಾಪ :



ಪತ್ರಕರ್ತ ಶಾಹೀದ ಧಾರವಾಡಕರ ಅವರ ನಿಧನಕ್ಕೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಶಾಸಕರಾದ ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಲಖನ್ ಜಾರಕಿಹೊಳಿ ಮತ್ತು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಗೌರವಾಧ್ಯಕ್ಷರಾದ ಭೀಮಶಿ ಜಾರಕಿಹೊಳಿ, ಬೆಳಗಾವಿ ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರ ಸಂಘದ ಸರ್ವ ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.



 

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ