LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕೋಮು ಗಲಭೆ ತಡೆಯಲು ಸಿದ್ದರಾಮಯ್ಯ ನೀಡಿದ್ದ ಸೂಚನೆ ನೆನೆದ ಸೆಂಥಿಲ್

ಬೆಂಗಳೂರು, ಮೇ 30 : ಮಾಜಿ ಐಎಎಸ್ ಅಧಿಕಾರಿ ಹಾಗೂ ಕಾಂಗ್ರೆಸ್ ಸಂಸದ ಶಶಿಕಾಂತ ಸೆಂಥಿಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ಶೈಲಿ, ಸಾಮಾಜಿಕ ನ್ಯಾಯದ ಬದ್ಧತೆ ಹಾಗೂ ಅಧಿಕಾರಿಗಳಿಗೆ ನೀಡುತ್ತಿದ್ದ ಬೆಂಬಲವನ್ನು ಸ್ಮರಿಸಿ ಭಾವನಾತ್ಮಕ ಬರಹವೊಂದನ್ನು ಹಂಚಿಕೊಂಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಪ್ರಕಟಿಸಿರುವ ಅವರು, ತಮ್ಮ ಆಡಳಿತಾತ್ಮಕ ಜೀವನದಲ್ಲಿ ಅಳಿಸಲಾಗದ ನೆನಪಾಗಿ ಉಳಿದಿರುವ ಘಟನೆಯೊಂದನ್ನು ವಿವರಿಸಿದ್ದಾರೆ.

ತಮ್ಮನ್ನು ಜಿಲ್ಲಾಧಿಕಾರಿಯಾಗಿ ಮಂಗಳೂರಿಗೆ ವರ್ಗಾಯಿಸಿದ್ದ ಸಂದರ್ಭವನ್ನು ನೆನಪಿಸಿಕೊಂಡಿರುವ ಸೆಂಥಿಲ್, ಆ ಸಮಯದಲ್ಲಿ ಕೋಮು ಸಂಘರ್ಷಗಳು ಮತ್ತು ಮರಳು ಮಾಫಿಯಾದ ಚಟುವಟಿಕೆಗಳು ಹೆಚ್ಚಾಗಿದ್ದವು. ಮಂಗಳೂರಿಗೆ ತೆರಳುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈಯಕ್ತಿಕವಾಗಿ ಭೇಟಿಗೆ ಕರೆದಿದ್ದರು ಎಂದು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಯನ್ನು ಮುಖ್ಯಮಂತ್ರಿ ವೈಯಕ್ತಿಕವಾಗಿ ಕರೆಯುವುದು ಅಪರೂಪವಾಗಿದ್ದು, ಸ್ವಲ್ಪ ಆತಂಕದೊಂದಿಗೆ ಅವರ ಕಚೇರಿಗೆ ತೆರಳಿದ್ದೆ. ಆಗ ಸಿದ್ದರಾಮಯ್ಯ ಅವರು ಎಂದಿನ ಶಾಂತ ಧೋರಣಿಯಲ್ಲಿ, ಇನ್ನು ಮುಂದೆ ಮಂಗಳೂರಿನಲ್ಲಿ ಕೋಮು ಗಲಭೆಗಳು ನಡೆಯಬಾರದು. ನಿಮ್ಮ ಪ್ರಮುಖ ಜವಾಬ್ದಾರಿ ಅದೇ ಎಂದು ಸ್ಪಷ್ಟವಾಗಿ ಹೇಳಿದ್ದರು ಎಂದು ಸೆಂಥಿಲ್ ಸ್ಮರಿಸಿದ್ದಾರೆ.

ಆ ಮಾತುಗಳಲ್ಲಿ ಯಾವುದೇ ರಾಜಕೀಯ ಉದ್ದೇಶ ಅಥವಾ ಅಲಂಕಾರಿಕ ಭಾಷಣ ಇರಲಿಲ್ಲ. ಅದು ನೇರವಾದ ಆಡಳಿತಾತ್ಮಕ ಸಂದೇಶವಾಗಿತ್ತು. ಒಬ್ಬ ಮುಖ್ಯಮಂತ್ರಿ ಯುವ ಅಧಿಕಾರಿಗೆ ನಿಜವಾಗಿಯೂ ಮುಖ್ಯವಾದ ವಿಷಯವನ್ನು ಅತ್ಯಂತ ಸ್ಪಷ್ಟವಾಗಿ ತಿಳಿಸಿದ್ದರು ಎಂದು ಅವರು ಹೇಳಿದ್ದಾರೆ.

ಆ ಒಂದು ಮಾತಿನಲ್ಲೇ ಆಡಳಿತದ ತತ್ವ, ರಾಜಕೀಯ ದೃಷ್ಟಿಕೋನ ಹಾಗೂ ಸಾಮಾನ್ಯ ಜನರನ್ನು ಕೋಮು ದ್ವೇಷದಿಂದ ರಕ್ಷಿಸುವ ಬದ್ಧತೆ ಅಡಗಿತ್ತು ಎಂದು ಸೆಂಥಿಲ್ ಅಭಿಪ್ರಾಯಪಟ್ಟಿದ್ದಾರೆ.

ಸುಮಾರು ಹದಿನೈದು ದಿನಗಳ ಬಳಿಕ ಮಂಗಳೂರಿನಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಎರಡು ಸಮುದಾಯಗಳಿಗೆ ಸೇರಿದ ಇಬ್ಬರು ಹತ್ಯೆಯಾಗಿದ್ದು, ನಗರದಲ್ಲಿ ಆತಂಕದ ವಾತಾವರಣ ಉಂಟಾಗಿತ್ತು. ಆಗ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಕರೆ ಮಾಡಿ, ಜಿಲ್ಲಾಧಿಕಾರಿಯಾಗಿ ಅಗತ್ಯ ಕ್ರಮ ಕೈಗೊಳ್ಳಿ. ಯಾರನ್ನಾದರೂ ಬಂಧಿಸಬೇಕಾದರೆ ಬಂಧಿಸಿ. ಅವರು ನಮ್ಮ ಪಕ್ಷದವರಾಗಿದ್ದರೂ ಹಿಂದೇಟು ಹಾಕಬೇಡಿ. ಆದರೆ ಒಂದು ದಿನದೊಳಗೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಬೇಕು ಎಂದು ಸೂಚಿಸಿದ್ದರು ಎಂದು ಅವರು ತಿಳಿಸಿದ್ದಾರೆ.

ಆ ಮಾತುಗಳು ಯುವ ಜಿಲ್ಲಾಧಿಕಾರಿಯಾಗಿ ನನಗೆ ಅಪಾರ ಆತ್ಮವಿಶ್ವಾಸ ನೀಡಿದ್ದವು. ಅದು ಕೇವಲ ಆದೇಶವಾಗಿರದೆ, ರಾಜಕೀಯ ಇಚ್ಛಾಶಕ್ತಿ ಮತ್ತು ಸಂಪೂರ್ಣ ಬೆಂಬಲದ ಸಂಕೇತವಾಗಿತ್ತು ಎಂದು ಸೆಂಥಿಲ್ ಹೇಳಿದ್ದಾರೆ.

ಇದಕ್ಕೆ ವಿರುದ್ಧವಾದ ಅನುಭವಗಳನ್ನೂ ತಾವು ಕಂಡಿರುವುದಾಗಿ ಉಲ್ಲೇಖಿಸಿರುವ ಅವರು, ಮತ್ತೊಂದು ಆಡಳಿತಾವಧಿಯಲ್ಲಿ ಇದೇ ರೀತಿಯ ಪರಿಸ್ಥಿತಿಯಲ್ಲಿ ಯಾವುದೇ ಕಠಿಣ ಕ್ರಮ ಕೈಗೊಳ್ಳಬೇಡಿ, ಪರಿಸ್ಥಿತಿ ಹಾಗೆಯೇ ಇರಲಿ ಎಂಬ ಸೂಚನೆ ಬಂದಿತ್ತು ಎಂದು ತಿಳಿಸಿದ್ದಾರೆ.

ಯಾರು ಯಾರಿಗಾಗಿ ಆಡಳಿತ ನಡೆಸುತ್ತಾರೆ ಎಂಬುದನ್ನು ಇಂತಹ ಸಂದರ್ಭಗಳು ಸ್ಪಷ್ಟಪಡಿಸುತ್ತವೆ. ಸಿದ್ದರಾಮಯ್ಯ ಅವರು ಎಂದಿಗೂ ಆ ರೀತಿಯ ನಾಯಕನಾಗಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ರಾಜ್ಯದ ಹಣಕಾಸಿನ ಸ್ಥಿತಿಗತಿಗಳನ್ನು ಸಂಪೂರ್ಣವಾಗಿ ತಿಳಿದಿದ್ದ ನಾಯಕರಾಗಿದ್ದರು. ಪ್ರತಿ ನಿರ್ಧಾರದಲ್ಲೂ ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡುತ್ತಿದ್ದರು. ಸಮಾಜದ ತಳಮಟ್ಟದ ಜನರ ಪರವಾಗಿ ದೃಢವಾಗಿ ನಿಲ್ಲುವ ಗುಣ ಅವರಲ್ಲಿತ್ತು ಎಂದು ಸೆಂಥಿಲ್ ಬರೆದಿದ್ದಾರೆ.

ತಾವು ನಿಜವಾಗಿಯೂ ಗೌರವಿಸುವ ರಾಜಕೀಯ ನಾಯಕರಲ್ಲಿ ಸಿದ್ದರಾಮಯ್ಯ ಪ್ರಮುಖರು. ಅವರ ಪರಂಪರೆ ಅವರು ಘೋಷಿಸಿದ ಯೋಜನೆಗಳಲ್ಲಿ ಅಥವಾ ಮಂಡಿಸಿದ ಬಜೆಟ್‌ಗಳಲ್ಲಿ ಮಾತ್ರ ಇಲ್ಲ. ಅಧಿಕಾರಿಗಳಿಗೆ ಧೈರ್ಯ ತುಂಬುವ ಅವರ ನಡೆ, ಸಂಕಷ್ಟದ ಸಂದರ್ಭಗಳಲ್ಲಿ ನೀಡಿದ ಬೆಂಬಲ ಮತ್ತು ಶಾಂತಿ ಕಾಪಾಡುವಂತೆ ಯುವ ಅಧಿಕಾರಿಗಳಿಗೆ ನೀಡಿದ ಮಾರ್ಗದರ್ಶನದಲ್ಲಿಯೇ ಅವರ ನಿಜವಾದ ನಾಯಕತ್ವ ಅಡಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸಿದ್ದರಾಮಯ್ಯ ಅವರು ಈಗ ಅದೇ ಘನತೆಯೊಂದಿಗೆ ತಮ್ಮ ಹುದ್ದೆಯಿಂದ ಕೆಳಗಿಳಿಯುತ್ತಿರುವಾಗ ಮನಸ್ಸು ಭಾವುಕವಾಗುತ್ತದೆ. ತಾವು ನಂಬಿದ ತತ್ವಗಳು ಯಾವುದೇ ಹುದ್ದೆಗಿಂತ ದೊಡ್ಡವು ಎಂಬುದನ್ನು ಅವರು ಯಾವಾಗಲೂ ಅರ್ಥಮಾಡಿಕೊಂಡಿದ್ದರು ಎಂದು ಸೆಂಥಿಲ್ ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ದೀರ್ಘಕಾಲ ಆರೋಗ್ಯದಿಂದಿರಲಿ. ತಮ್ಮ ಅನುಭವ ಮತ್ತು ಮಾರ್ಗದರ್ಶನದ ಮೂಲಕ ದೇಶ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಇನ್ನಷ್ಟು ಕೊಡುಗೆ ನೀಡಲಿ ಎಂದು ಸೆಂಥಿಲ್ ಶುಭ ಹಾರೈಸಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಈ ಬಾರಿಯ ಮುಂಗಾರು ದುರ್ಬಲ, ವಾಡಿಕೆಗಿಂತ ಕಡಿಮೆ ಮಳೆ ಸಾಧ್ಯತೆ3 ತಿಂಗಳಲ್ಲಿ ತೀರ್ಪು ಪ್ರಕಟಿಸಿ: ಎಲ್ಲ ಹೈಕೋರ್ಟಗಳಿಗೆ ಸುಪ್ರೀಮ ಕೋರ್ಟ ನಿರ್ದೇಶನನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಆಘಾತಕಾರಿ: ಸುಪ್ರೀಮ ಕೋರ್ಟ ಅಸಮಾಧಾನವಿಜಯಪುರ ಜಮೀನು ವಿವಾದ: ಗುಂಡಿನ ದಾಳಿ ನಡೆಸಿ, ಕೊಚ್ಚಿ 6 ಮಂದಿಯ ಭೀಕರ ಹತ್ಯೆಸಿದ್ದರಾಮಯ್ಯರ ರಾಜಕೀಯ ಪಯಣ ಮುಂದಿನ ಪೀಳಿಗೆಗೆ ಸ್ಫೂರ್ತಿ: ಪ್ರಿಯಾಂಕ ಖರ್ಗೆಕೋಮು ಗಲಭೆ ತಡೆಯಲು ಸಿದ್ದರಾಮಯ್ಯ ನೀಡಿದ್ದ ಸೂಚನೆ ನೆನೆದ ಸೆಂಥಿಲ್ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ ಫೋಗಟ್‌ಗೆ ಸುಪ್ರೀಮ ಕೋರ್ಟ ಅನುಮತಿನ್ಯಾಯಾಂಗದಲ್ಲಿಯೂ ಭ್ರಷ್ಟಾಚಾರ ಇದೆ ಮತ್ತು ನ್ಯಾಯಾಧೀಶರನ್ನು ಪವಿತ್ರ ಗೋವುಗಳಂತೆ ಪರಿಗಣಿಸಬೇಕಿಲ್ಲ : ಮದ್ರಾಸ ಹೈಕೋರ್ಟಎಸಿ ಸ್ಫೋಟ : ಸಿಸಿಐ ಮಾಜಿ ಅಧ್ಯಕ್ಷ ಧನೇಂದ್ರ ಕುಮಾರ ಸಾವುಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗಲಿ ಎಂದು ಗೋಕಾಕದಲ್ಲಿ ವಿಶೇಷ ಪೂಜೆ