LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ರಾಜ್ಯ ಪ್ರವೇಶಿಸಲು ಶಿವಸೇನೆ ವಿಫಲ ಯತ್ನ

ಬೆಳಗಾವಿ, ೧: ತಮ್ಮ ಪ್ರವೇಶಕ್ಕೆ ನಿಷೇಧವಿದ್ದರೂ ಬೆಳಗಾವಿಗೆ ಆಗಮಿಸಲು ಯತ್ನಿಸಿದ್ದ ಮಹಾರಾಷ್ಟ್ರದ ಸುಮಾರು 50 ಶಿವಸೇನೆಯ ಕಾರ್ಯಕರ್ತರನ್ನು ಕರ್ನಾಟಕ ಪೊಲೀಸರು ರಾಜ್ಯದ ನಿಪ್ಪಾಣಿ ಗಡಿಯಲ್ಲಿ ತಡೆದು ಮಹಾರಾಷ್ಟ್ರದ ಪೊಲೀಸರಿಗೆ ಹಸ್ತಾಂತರಿಸಿದರು.



ರಾಜ್ಯೋತ್ಸವದ ಹಿನ್ನಲೆಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ 'ಕರಾಳ ದಿನ' ಆಚರಣೆಗೆ ನೀಡಿದ್ದ ಕರೆಗೆ ಸ್ಪಂದಿಸಿ ಕೊಲ್ಹಾಪುರ ಉದ್ದವ ಠಾಕ್ರೆ ಬಣದ ಶಿವಸೇನೆಯ ಸುಮಾರು 50 ಕಾರ್ಯಕರ್ತರು ಕಾಗಲ್ ತಾಲೂಕಿನವರೆಗೂ ವಾಹನಗಳಲ್ಲಿ ಬಂದು ಅಲ್ಲಿಂದ ನಿಪ್ಪಾಣಿಯ ಬಳಿಯ ಕೊಗನೊಳ್ಳಿ ಗಡಿಯವರೆಗೂ ಪಾದಯಾತ್ರೆಯಲ್ಲಿ ಬಂದು ಕರ್ನಾಟಕ ಪ್ರವೇಶಿಸಲು ಯತ್ನಿಸಿದರು. ಆದರೆ ಕೊಗನೋಳ್ಳಿ ಚೆಕ್ ಪೋಸ್ಟನಲ್ಲಿದ್ದ ನಿಪ್ಪಾಣಿ ಪೊಲೀಸರು ಅವರನ್ನು ತಡೆದರು. ಇದನ್ನು ಪ್ರತಿಭಟಿಸಿ ಪುಣೆ-ಬೆಂಗಳೂರು ರಾಷ್ಟೀಯ ಹೆದ್ದಾರಿಯ ಮೇಲೆಯೇ ಕುಳಿತು ಎಂಇಎಸ್ ಸಾಂಪ್ರದಾಯಿಕ ಘೋಷಣೆಯಾದ ಬೆಳಗಾವಿ, ನಿಪ್ಪಾಣಿ, ಖಾನಾಪುರ, ಕಾರವಾರ, ಬೀದರ, ಭಾಲ್ಕಿ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಲೇಬೇಕೆಂದು ಘೋಷಣೆ ಮಾಡಿದರು.



ಅಷ್ಟರಲ್ಲಿ ಸ್ಥಳಕ್ಕೆ ಆಗಮಿಸಿದ ಕೊಲ್ಹಾಪುರ ಪೊಲೀಸರು ಅವರನ್ನು ವಶಕ್ಕೆ ಪಡೆದು ಹಿಂದಕ್ಕೆ ಕರೆದುಕೊಂಡು ಹೋದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ