LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮಹಾರಾಷ್ಟ್ರಕ್ಕೆ ಕಾಲಿಟ್ಟ ಕಾಂಗ್ರೆಸ್ ಪಾದಯಾತ್ರೆ; ಶಿವಸೇನೆ ಬೆಂಬಲ ಸಾಧ್ಯತೆ

ಮುಂಬಯಿ : ಎರಡು ತಿಂಗಳ ಕಾಲ ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ ಸಂಚರಿಸಿದ ನಂತರ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಇಂದು ಮಹಾರಾಷ್ಟ್ರ ಪ್ರವೇಶಿಸಲ್ಲಿದ್ದು ಮಂಗಳವಾರದಿಂದ 14 ದಿನಗಳ ಯಾತ್ರೆ ನಡೆಯಲಿದೆ.



ಕಾಂಗ್ರೆಸ್ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ನ ಬೆಂಬಲದಿಂದ ಮುಂಬಯಿಯ ವಿಧಾನಸಭಾ ಸ್ಥಾನ ಗೆದ್ದುಕೊಂಡಿರುವ ಉದ್ದವ್ ಠಾಕ್ರೆ ನೇತೃತ್ವದ ಶಿವಸೇನೆ ಕಾಂಗ್ರೆಸ್ ಯಾತ್ರೆಗೆ ಜೊತೆಗೂಡುವ ಸಾಧ್ಯತೆಯಿದೆ.

ತಮಿಳುನಾಡಿನಿಂದ ಪ್ರಾರಂಭವಾದ ಭಾರತ್ ಜೋಡೋ ಯಾತ್ರೆ ಕೇರಳ, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣಗಳ ಮೂಲಕಸಾಗಿ ದಕ್ಷಿಣ ಭಾರತ ಯಾತ್ರೆ ಪೂರ್ಣಗೊಳಿಸಿದೆ.



ದೇಗ್ಲೂರ್ ಪಟ್ಟಣದ ಸ್ಥಳೀಯ ಗಿರಣಿ ಮೈದಾನದಲ್ಲಿ ರಾತ್ರಿ ವಿಶ್ರಾಂತಿ ಪಡೆದ ನಂತರ, ರಾಹುಲ್ ಗಾಂಧಿ ಅವರು ಮಂಗಳವಾರ ಬೆಳಿಗ್ಗೆ 14 ದಿನಗಳ ಮಹಾರಾಷ್ಟ್ರದ ಯಾತ್ರೆಯನ್ನು ಪ್ರಾರಂಭಿಸಲಿದ್ದಾರೆ.



ಇದು ಆರು ಲೋಕಸಭೆ ಮತ್ತು 15 ವಿಧಾನಸಭಾ ಕ್ಷೇತ್ರಗಳ ಮೂಲಕ ಐದು ಮರಾಠವಾಡ-ವಿದರ್ಭ ಪ್ರದೇಶಗಳ ಜಿಲ್ಲೆಗಳ 381 ಕಿಲೋಮೀಟರ್ ಯಾತ್ರೆ ಕ್ರಮಿಸಲಿದೆ.



ನಾಂದೇಡ್, ಹಿಂಗೋಲಿ, ವಾಶಿಮ್, ಅಕೋಲಾ ಮತ್ತು ಬುಲ್ಧಾನ ಜಿಲ್ಲೆಗಳ ಮೂಲಕ ನಡೆದ ನಂತರ ಭಾರತ್ ಜೋಡೋ ಯಾತ್ರೆಯು ನವೆಂಬರ್ 20 ರಂದು ಮಧ್ಯಪ್ರದೇಶವನ್ನು ಪ್ರವೇಶಿಸಲಿದೆ.



ಆದರೂ ಸ್ಥಳೀಯ ನಾಯಕರ ಬೇಡಿಕೆ ಕಾರಣದಿಂದ ನಂತರ ವೇಳಾಪಟ್ಟಿಯನ್ನು ಬದಲಾಯಿಸಲು ಮತ್ತು ಮಹಾರಾಷ್ಟ್ರದಲ್ಲಿ ಇನ್ನೂ ಮೂರು ದಿನಗಳ ಹೆಚ್ಚಿನ ಯಾತ್ರೆ ಕೈಗೊಳ್ಳಲು ಪ್ರಯತ್ನಗಳು ನಡೆಯುತ್ತಿವೆ ಎಂದು ವರದಿಯಾಗಿದೆ. ನವೆಂಬರ್ 10 ರಂದು ನಾಂದೇಡ್ ಮತ್ತು ನವೆಂಬರ್ 18 ರಂದು ಬುಲ್ಧಾನದಲ್ಲಿ ಎರಡು ದೊಡ್ಡ ರ್ಯಾಲಿಗಳು ನಡೆಯಲಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ