LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಸಮರ್ಪಕವಾಗಿ ಪರಿಹಾರ ತಲುಪಿಸಿ: ಸಿದ್ದರಾಮಯ್ಯ

ಕಲ್ಬುರ್ಗಿ : ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಬೆಳೆ ಹಾನಿಗೆ ಸಮರ್ಪಕವಾಗಿ ಪರಿಹಾರ ತಲುಪಿಸಿ. ಮಾನವ- ಜಾನವಾರು ಜೀವ ಹಾನಿಗಳಿಗೆ ಶೇ100 ರಷ್ಟು ಪರಿಹಾರ ಒದಗಿಸಿರುವ ರೀತಿಯಲ್ಲೇ ಬೆಳೆ ಹಾನಿಗೂ ಒದಗಿಸಿ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.



ಕಲ್ಬುರ್ಗಿ ಪ್ರವಾಸಿ ಮಂದಿರದಲ್ಲಿ ಬುಧವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಅತಿವೃಷ್ಠಿಯಿಂದ ಸಂಭವಿಸಿದ ಬೆಳೆ ಹಾನಿ ಕುರಿತಂತೆ ಮಾಹಿತಿ ಪಡೆದು, ಜಂಟಿ ಸಮೀಕ್ಷೆ ನಡೆದಿರುವ ಪ್ರಮಾಣದ ಬಗ್ಗೆ ಮಾಹಿತಿ ಪಡೆದ ಬಳಿಕ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸಲಹೆ ಸೂಚನೆಗಳನ್ನು ನೀಡಿದರು.



ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಅಜಯ್ ಸಿಂಗ್ ಅವರು ಪರಿಸ್ಥಿತಿಯನ್ನು ವಿವರಿಸಿ, "ತಾವು ಸಿಎಂ ಆಗಿರುವಾಗ



ಕಳೆದ ಬಾರಿಗಿಂತ ಈ ಬಾರಿ ಉತ್ತಮ ಮಳೆ ಆಗಿದೆ. ವಾಡಿಕೆಗಿಂತ ಶೇ17 ರಷ್ಟು ಮಳೆ ಹೆಚ್ಚಾಗಿದೆ. 37 ಮಾನವ ಜೀವ ಹಾನಿ ಪ್ರಕರಣಗಳು ವರದಿಯಾಗಿದ್ದು ಎಲ್ಲಾ ಪರಿಹಾರ ನೀಡಲಾಗಿದೆ.

ಜಾನವಾರು ಪ್ರಾಣ ಹಾನಿ 175 ಪ್ರಕರಣ ವರದಿಯಾಗಿದ್ದು ಎಲ್ಲದಕ್ಕೂ ಪರಿಹಾರ ನೀಡಲಾಗಿದೆ. ಸಂಪೂರ್ಣ ಮನೆ ಹಾನಿ, ಭಾಗಶಃ ಹಾನಿ ಆಗಿರುವ ಎಲ್ಲಾ ಪ್ರಕರಣಹಳಲ್ಲೂ ಪರಿಹಾರ ನೀಡಲಾಗಿದೆ ಎಂದರು.



ಬೀದರ್, ಕಲ್ಬುರ್ಗಿ, ಕೊಪ್ಪಳ, ಯಾದಗೀರ್ ಜಿಲ್ಕೆಗಳಲ್ಲಿ ಮಳೆಯಿಂದ ಹೆಚ್ಚು ಹಾನಿ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.‌



ನಿರಂತರ ಜೋಳು ಮಳೆ ಇರುವುದರಿಂದ ಬೆಳೆ ಹಾನಿಯ ಸಂಪೂರ್ಣ ಜಂಟಿ ಸಮೀಕ್ಷೆಗೆ ಅಡ್ಡಿ ಆಗುತ್ತಿದೆ. ಹೀಗಾಗಿ ನಿಗದಿತ ಅವಧಿಯೊಳಗೆ ಜಂಟಿ ಸಮೀಕ್ಷೆ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಮಳೆ ನಿಂತ ಬಳಿಕ ಎಂಟತ್ತು ದಿನಗಳ ಹೆಚ್ಚುವರಿ ಅಗತ್ಯ ಬೀಳಬಹುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿಗಳಿಗೆ ವಿವರಿಸಿದರು.



ಸದ್ಯ ದ್ರೋಣ್ ಕ್ಯಾಮರಾ ಮೂಲಕ ಮಾಡಿರುವ ಬೆಳೆ ಹಾನಿ ವಿಡಿಯೊವನ್ನು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ತೋರಿಸಿ ವಿವರಿಸಿದರು.



ಸಭೆಯ ಬಳಿಕ ಮುಖ್ಯಮಂತ್ರಿಗಳು ಅಫ್ಜಲಪುರ ವಿಧಾನಸಭಾ ಕ್ಷೇತ್ರದ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ