LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಸಿದ್ದರಾಮಯ್ಯ ಆಪ್ತನನ್ನು ಭೇಟಿಯಾದ ಬಿಜೆಪಿ ಸಂಸದ

ಬೆಂಗಳೂರು, ೧೬- ತುಮಕೂರು ಸಂಸದ ಜಿ.ಎಸ್. ಬಸವರಾಜು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ, ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.



ಮೂಲತಃ ಕಾಂಗ್ರೆಸ್ ನಲ್ಲಿದ್ದ ಬಸವರಾಜು ಅವರು ಯಡಿಯೂರಪ್ಪನವರನ್ನು ಬೆಂಬಲಿಸಿ ಬಿಜೆಪಿ ಸೇರ್ಪಡೆಯಾಗಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕಾಂಗ್ರೆಸ್ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ತುಮಕೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದು, ಬಿಜೆಪಿಯ ಜಿ.ಎಸ್. ಬಸವರಾಜು ವಿರುದ್ಧ ಪರಾಭವಗೊಂಡಿದ್ದರು. ಈ ಚುನಾವಣೆಯಲ್ಲಿ ಕೆ.ಎನ್. ರಾಜಣ್ಣ, ಬಸವರಾಜು ಅವರನ್ನು ಬೆಂಬಲಿಸಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು.



ಇದೀಗ ಈ ಇಬ್ಬರು ನಾಯಕರು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮಗೆ ಬಿಜೆಪಿ ಟಿಕೆಟ್ ಸಿಗುವುದು ಕಷ್ಟವೆಂಬುದನ್ನು ಅರಿತಿರುವ ಬಸವರಾಜು, ತಮ್ಮ ಪುತ್ರ ತುಮಕೂರು ನಗರ ಬಿಜೆಪಿ ಶಾಸಕ ಜ್ಯೋತಿ ಗಣೇಶ ಅವರ ರಾಜಕೀಯ ಹಿತಾಸಕ್ತಿಯನ್ನು ಪರಿಗಣಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.



ವಿಧಾನಸಭಾ ಚುನಾವಣೆಯಲ್ಲಿ ಪುತ್ರನಿಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ ತಾವು ಬಿಜೆಪಿ ತೊರೆಯಲು ಸಿದ್ದ ಎಂಬ ಸಂದೇಶವನ್ನು ಬಸವರಾಜು ರವಾನಿಸಿದ್ದಾರೆ ಎನ್ನಲಾಗಿದ್ದು, ಇದಕ್ಕೆ ಕಾಂಗ್ರೆಸ್ ನಾಯಕರಿಂದಲೂ ಪೂರಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಬಸವರಾಜು ಹಾಗೂ ಕೆ.ಎನ್. ರಾಜಣ್ಣ ನಡೆಸಿರುವ ಮಾತುಕತೆ ಮಹತ್ವ ಪಡೆದುಕೊಂಡಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ