LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹಿಂದುಳಿದ ವರ್ಗ, ಎಸ್ ಸಿ-ಎಸ್ ಟಿ ವಿದ್ಯಾರ್ಥಿಗಳ ಸ್ಕಾಲರಶಿಪ್ ರದ್ದು : ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ 

ಬೆಂಗಳೂರು: ಎಸ್‍ಸಿ/ಎಸ್‍ಟಿ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಮೆಟ್ರಿಕ್‍ಪೂರ್ವ ವಿದ್ಯಾರ್ಥಿಗಳ ಸ್ಕಾಲರ್​ಶಿಪ್​ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.



ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ದಲಿತರು, ಆದಿವಾಸಿಗಳು, ಹಿಂದುಳಿದ ವರ್ಗಗಳು, ಮತ್ತು ಅಲ್ಪಸಂಖ್ಯಾತರನ್ನು ತುಳಿದು ಆಳಬೇಕು ಎಂಬ ಬಿಜೆಪಿಯ ಅಜೆಂಡಾ ನಿಧಾನಕ್ಕೆ ಕಾರ್ಯಗತವಾಗುತ್ತಿದೆ. ನಾನು ಕಳೆದ ಕೆಲವು ವರ್ಷಗಳಿಂದ ಗಮನಿಸಿದಂತೆ ಮೋದಿಯವರ ಬಾಯಲ್ಲಿ ಹೇಳಿಸಿದ ಘೋಷಣೆಗಳಿಗೆ ವಿರುದ್ಧ ದಿಕ್ಕಿನಲ್ಲಿ ಸತ್ಯ ಹುದುಗಿರುತ್ತದೆ ಎಂದರು.



ಬಿಜೆಪಿಯವರು ಸಬ್ ಕಾ ವಿಕಾಸ ಎಂದರೆ ಅದು ದಲಿತ, ಹಿಂದುಳಿದವರು, ಮಹಿಳೆಯರು, ಅಲ್ಪಸಂಖ್ಯಾತರ ದಮನ ಎಂದು ಅರ್ಥ. ಬಹುಸಂಖ್ಯಾತರ ವಿನಾಶದ ಯೋಜನೆಗಳನ್ನು ರೂಪಿಸುವಾಗ ಎಲ್ಲ ಜನರ ವಿಕಾಸ ಎಂದು ಸುಳ್ಳು ಹೇಳುತ್ತಾರೆ ಎಂದು ಅವರು ಹೇಳಿದ್ದಾರೆ.



ನಮ್ಮ ಸರ್ಕಾರದಲ್ಲಿ ಮಕ್ಕಳಿಗೆ ಬಿಸಿಯೂಟ, ಸಮವಸ್ತ್ರ, ಶೂ, ಕೆನೆ ಭರಿತ ಹಾಲು, ಸೈಕಲ್ ಹೀಗೆ ವಿವಿಧ ಸೌಲಭ್ಯ ನೀಡಿ ಶಾಲೆಗೆ ಕರೆತಂದು ವಿದ್ಯಾಭ್ಯಾಸ ನೀಡಿ ದಮನಿತರ ಮಕ್ಕಳು ಉದ್ಧಾರವಾಗಲಿ ಎಂಬ ಉದ್ದೇಶದಿಂದ ಈ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲಾಗಿತ್ತು. ಜೊತೆಯಲ್ಲಿ ಮಕ್ಕಳಿಗೆ ವಿದ್ಯಾರ್ಥಿ ವೇತನದ ವ್ಯವಸ್ಥೆಯೂ ಇತ್ತು. ಈ ವಿದ್ಯಾರ್ಥಿ ವೇತನವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನಕ್ಕೆ ತಗುಲುವ ವೆಚ್ಚವನ್ನು ಶೇ. 75-25 ಪ್ರಮಾಣದಲ್ಲಿ ಹಂಚಿಕೊಳ್ಳುವುದು ಇಲ್ಲಿಯವರೆಗೂ ನಡೆದುಕೊಂಡು ಬಂದಿತ್ತು. ಆದರೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಈಗ ಏಕಾಏಕಿ ಒಂದರಿಂದ ಎಂಟನೇ ತರಗತಿವರೆಗಿನ ಬಡ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ರದ್ದುಗೊಳಿಸಿ ಆದೇಶ ಹೊರಡಿಸಿರುವುದು ದಲಿತ- ಆದಿವಾಸಿ- ಹಿಂದುಳಿದ- ಅಲ್ಪಸಂಖ್ಯಾತ ವಿರೋಧಿ ಸಂವಿಧಾನ ದ್ರೋಹಿ ಕೃತ್ಯವಾಗಿದೆ ಎಂದು ಹೇಳಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ