LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನಾಳೆಯಿಂದ ಪೇ-ಸಿಎಂ ಪೋಸ್ಟರ್ ನಾವೇ ಅಂಟಿಸುತ್ತೇವೆ : ಸಿದ್ದರಾಮಯ್ಯ 

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿರುವ ಕಾಂಗ್ರೆಸ್, ಬೆಂಗಳೂರಿನಲ್ಲಿ ಗೋಡೆಗಳ ಮೇಲೆ ಪೇ-ಸಿಎಂ ಪೋಸ್ಟರ್ ಆಂದೋಲನ ಆರಂಭಿಸಿದ್ದು ನಾಳೆಯಿಂದ ಕಾಂಗ್ರೆಸ್  ಶಾಸಕರೆಲ್ಲರೂ ಈ ಆಂದೋಲನದಲ್ಲಿ ಭಾಗಿಯಾಗಲಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಹೇಳಿದ್ದಾರೆ.



ಪೇಸಿಎಂ ಪೋಸ್ಟರ್ ಅಂಟಿಸಿದ್ದ ಕಾಂಗ್ರೆಸ್ ಕಚೇರಿ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಬಿಜೆಪಿಯವರೂ ನಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ನಮ್ಮ ವಿರುದ್ಧ ಅವರೂ ಕೂಡ ಏನೇನೋ ಪೋಸ್ಟರ್ ಅಂಟಿಸಿದ್ದಾರೆ. ಪೊಲೀಸರಿಗೆ ಬಿಜೆಪಿಯವರುನ್ನು ಅವರನ್ಯಾಕೆ ಬಂಧಿಸಿಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.



ಪೇ-ಸಿಎಂ ಆಂದೋಲನ ಯಾರೋ ಇಬ್ಬರು ಮಾಡಿದ್ದಲ್ಲ ಇಡೀ ಪಕ್ಷದ ವತಿಯಿಂದ ಮಾಡಿದ್ದೇವೆ. ತಕ್ಷಣ ನಮ್ಮ ಸಿಬ್ಬಂದಿ ಮತ್ತು ಕಾರ್ಯಕರ್ತರನ್ನು ಬಿಡುಗಡೆಗೊಳಿಸಬೇಕು. ಇಲ್ಲವಾದಲ್ಲಿ ನಾಳೆ ಕಾಂಗ್ರೆಸ್ ನ ಎಲ್ಲಾ ಶಾಸಕರು ಪೇ-ಸಿಎಂ ಪೋಸ್ಟರ್ ಅಂಟಿಸಲಿದ್ದೇವೆ ಎಂದು ಎಚ್ಚರಿಸಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ