LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸೋನಾಲಿ ಫೋಗಟ್ ಸಹಜ ಸಾವಲ್ಲ, ಕೊಲೆ ; ಸಹೋದರನಿಂದ ದೂರು ದಾಖಲು




ಪಣಜಿ: ಬಿಜೆಪಿ ನಾಯಕಿ ಮತ್ತು ನಟಿ ಸೋನಾಲಿ ಫೋಗಟ್ ಅವರದು ಸಹಜ ಸಾವಲ್ಲ, ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಸೋನಾಲಿ ಫೋಗಟ್ ಸಹೋದರ ರಿಂಕು ಧಾಕಾ ಆರೋಪಿಸಿದ್ದಾರೆ.









ಸಹೋದ್ಯೋಗಿಗಳೊಂದಿಗೆ ಗೋವಾಕ್ಕೆ ತೆರಳಿದಾಗ ಮಂಗಳವಾರ ಬೆಳಿಗ್ಗೆ ಗೋವಾದಲ್ಲಿ ನಿಧನರಾಗಿದ್ದು, ಹೃದಯಘಾತದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು.









ಆದರೆ ಇದು ಸಹಜ ಸಾವಲ್ಲ, ಕೊಲೆ ಎಂದು ಸೋನಾಲಿ ಫೋಗಟ್ ಸಹೋದರ ರಿಂಕು ಧಾಕಾ ಅವರು ಆರೋಪಿಸಿದ್ದಾರೆ.









ಸೋನಾಲಿ ಫೋಗಟ್ ಅವರ ಇಬ್ಬರು ಸಹಚರರು ತನ್ನ ಸಹೋದರಿಯನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ರಿಂಕು ಢಾಕಾ ಅವರು ಗೋವಾ ಪೊಲೀಸರಿಗೆ ದೂರು ನೀಡಿದ್ದಾರೆ.









ಸೋನಾಲಿ ಅವರು ಸಾಯುವ ಸ್ವಲ್ಪ ಸಮಯದ ಮೊದಲು, ತನ್ನ ತಾಯಿ, ಸಹೋದರಿ ಮತ್ತು ಸೋದರ ಮಾವನ ಜೊತೆ ಮಾತನಾಡಿದ್ದರು. ಈ ಸಮಯದಲ್ಲಿ ಅವರು ತೀವ್ರ ಗೊಂದಲಕ್ಕೊಳಗಾಗಿದ್ದರು ಮತ್ತು ತನ್ನ ಇಬ್ಬರು ಸಹೋದ್ಯೋಗಿಗಳ ವಿರುದ್ಧ ದೂರಿದ್ದಳು ಎಂದು ಅವರ ಸಹೋದರ ರಿಂಕು ಢಾಕಾ ಹೇಳಿದ್ದಾರೆ.









ಸೋನಾಲಿ ಸಾವಿನ ನಂತರ ಹರಿಯಾಣಾದಲ್ಲಿರುವ ಅವರ ಫಾರ್ಮ ಹೌಸ್‌ನಿಂದ ಸಿಸಿಟಿವಿ ಕ್ಯಾಮೆರಾಗಳು, ಲ್ಯಾಪ್‌ಟಾಪ್ ಮತ್ತು ಇತರ ಪ್ರಮುಖ ವಸ್ತುಗಳು ನಾಪತ್ತೆಯಾಗಿವೆ ಎಂದು ರಿಂಕು ಹೇಳಿದ್ದಾರೆ.









ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾದ ಅಂಜುನಾ ಠಾಣೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.









ಸೋನಾಲಿ ಫೋಗಟ್ ಅವರು 2016 ರಲ್ಲಿ ಧಾರಾವಾಹಿ ಏಕ್ ಮಾ ಜೋ ಲಾಖೋಂ ಕೆ ಲಿಯೇ ಬಾನಿ ಅಮ್ಮಾ ಮೂಲಕ ತಮ್ಮ ನಟನೆಯನ್ನು ಪ್ರಾರಂಭಿಸಿದ್ದರು. ನಂತರ ಅವರು ಹರ್ಯಾನ್ವಿ ಚಲನಚಿತ್ರ ಛೋರಿಯನ್ ಛೋರೋನ್ ಎಸ್ ಕಾಮ್ ನಹಿ ಹೋತಿಯಲ್ಲಿ ಕಾಣಿಸಿಕೊಂಡರು. ಅವರು ಹಲವಾರು ಪಂಜಾಬಿ ಮತ್ತು ಹರ್ಯಾನಾದ ಸಂಗೀತ ವೀಡಿಯೊಗಳ ಭಾಗವಾಗಿದ್ದಾರೆ. ಕೊನೆಯದಾಗಿ ದಿ ಸ್ಟೋರಿ ಆಫ್ ಬದ್ಮಾಶ‌ಗಡ (2019) ಎಂಬ ವೆಬ್ ಸರಣಿಯಲ್ಲಿ ಕಾಣಿಸಿಕೊಂಡಿದ್ದರು.









ಡಿಸೆಂಬರ್ 2016ರಲ್ಲಿ, ಅವರು ತಮ್ಮ ಪತಿ ಸಂಜಯ ಫೋಗಟ್ ಅವರನ್ನು ಕಳೆದುಕೊಂಡಿದ್ದರು. ಇವರಿಗೆ ಯಶೋಧರ ಫೋಗಟ್ ಎಂಬ ಮಗಳಿದ್ದಾಳೆ.



Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು