LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಆರೋಗ್ಯ ಗಂಭೀರವಾದರೂ ಉಪವಾಸ ಮುಂದುವರಿಸಿದ ಸೋನಮ್ ವಾಂಗ್ಚುಕ

ಹೊಸದಿಲ್ಲಿ, ಜುಲೈ 17: ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ ಅವರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಶುಕ್ರವಾರ 20ನೇ ದಿನಕ್ಕೆ ಕಾಲಿಟ್ಟಿದ್ದು, ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿರುವ ಬಗ್ಗೆ ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ. ಕಳೆದ 20 ದಿನಗಳಿಂದ ಅನ್ನ–ನೀರು ತ್ಯಜಿಸಿ ಪ್ರತಿಭಟನೆ ನಡೆಸುತ್ತಿರುವ ವಾಂಗ್ಚುಕ್ ಅವರು 9 ಕೆ.ಜಿ.ಗೂ ಹೆಚ್ಚು ತೂಕ ಕಳೆದುಕೊಂಡಿದ್ದು, ತೀವ್ರ ದೌರ್ಬಲ್ಯದಿಂದ ಬಳಲುತ್ತಿದ್ದಾರೆ. ಆದರೂ ತಮ್ಮ ಬೇಡಿಕೆಗಳು ಈಡೇರುವವರೆಗೆ ಉಪವಾಸ ಕೈಬಿಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಗೆ ದಿನದಿಂದ ದಿನಕ್ಕೆ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಸಾಮಾಜಿಕ ಹೋರಾಟಗಾರರು ಹಾಗೂ ನಾಗರಿಕ ಸಮಾಜದ ಸದಸ್ಯರ ಬೆಂಬಲ ಹೆಚ್ಚುತ್ತಿದ್ದು, ವಾಂಗ್ಚುಕ ಅವರ ಆರೋಗ್ಯದ ಬಗ್ಗೆ ದೇಶಾದ್ಯಂತ ಆತಂಕ ವ್ಯಕ್ತವಾಗಿದೆ. ವೈದ್ಯರ ತಂಡವು ಪ್ರತಿದಿನ ಆರೋಗ್ಯ ತಪಾಸಣೆ ನಡೆಸುತ್ತಿದ್ದು, ದೇಹದ ತೂಕದಲ್ಲಿ ಗಣನೀಯ ಇಳಿಕೆ, ರಕ್ತದೊತ್ತಡ ಹಾಗೂ ದೈಹಿಕ ಶಕ್ತಿಯಲ್ಲಿ ಕುಸಿತ ಕಂಡುಬಂದಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಉಪವಾಸದ ನಡುವೆಯೇ ಬೆಂಬಲಿಗರನ್ನು ಉದ್ದೇಶಿಸಿ ವೀಡಿಯೊ ಸಂದೇಶ ಬಿಡುಗಡೆ ಮಾಡಿರುವ ವಾಂಗ್ಚುಕ, ಜುಲೈ 20ರಂದು ನಡೆಯಲಿರುವ ‘ಸಂಸತ್ ಚಲೋ’ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದ್ದಾರೆ. "ಜುಲೈ 20ರವರೆಗೆ ಹೇಗಾದರೂ ಬದುಕಿರುತ್ತೇನೆ. ನಿಮ್ಮೆಲ್ಲರೊಂದಿಗೆ ಸಂಸತ್ತಿನತ್ತ ಹೆಜ್ಜೆ ಹಾಕುತ್ತೇನೆ. ಒಂದು ವೇಳೆ ಸಾಧ್ಯವಾಗದಿದ್ದರೆ ಭೂತವಾಗಿ ಬಂದರೂ ನಿಮ್ಮೊಂದಿಗೆ ಇರುತ್ತೇನೆ" ಎಂದು ಅವರು ಹಾಸ್ಯಮಿಶ್ರಿತವಾಗಿ ಹೇಳಿದ್ದು, ಈ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ವಾಂಗ್ಚುಕ್ ಅವರ ಆರೋಗ್ಯ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ ಕೂಡ ಮಧ್ಯಪ್ರವೇಶಿಸಿದೆ. ಪ್ರತಿದಿನ ವೈದ್ಯಕೀಯ ತಪಾಸಣೆ ನಡೆಸಬೇಕು ಹಾಗೂ ಅಗತ್ಯವಿದ್ದರೆ ತಕ್ಷಣ ವೈದ್ಯಕೀಯ ನೆರವು ಒದಗಿಸಬೇಕು ಎಂದು ಕೇಂದ್ರ ಸರ್ಕಾರ, ದೆಹಲಿ ಸರ್ಕಾರ ಮತ್ತು ಸಂಬಂಧಿತ ಅಧಿಕಾರಿಗಳಿಗೆ ಕೋರ್ಟ ನಿರ್ದೇಶನ ನೀಡಿದೆ. ವಿಚಾರಣೆ ವೇಳೆ "ಪ್ರತಿಯೊಬ್ಬ ನಾಗರಿಕನ ಜೀವ ಅಮೂಲ್ಯ" ಎಂದು ಕೋರ್ಟ ಅಭಿಪ್ರಾಯಪಟ್ಟಿದೆ.

ಈ ನಡುವೆ, ಹಲವು ರಾಜಕೀಯ ನಾಯಕರು ಹಾಗೂ ಗಣ್ಯರು ವಾಂಗ್ಚುಕ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯ ಉದ್ದೇಶಕ್ಕೆ ಬೆಂಬಲ ಸೂಚಿಸಿದ ಅವರು, ಆರೋಗ್ಯದ ಹಿತದೃಷ್ಟಿಯಿಂದ ಉಪವಾಸ ಕೈಬಿಟ್ಟು ಸರ್ಕಾರದೊಂದಿಗೆ ಸಂವಾದ ನಡೆಸುವಂತೆ ಮನವಿ ಮಾಡಿದ್ದಾರೆ. ಚಿತ್ರ ನಿರ್ದೇಶಕಿ ಕಿರಣ್ ರಾವ್ ಸೇರಿದಂತೆ ಹಲವು ಗಣ್ಯರು ಸರ್ಕಾರವು ಪ್ರತಿಭಟನಾಕಾರರೊಂದಿಗೆ ತಕ್ಷಣ ಮಾತುಕತೆ ಆರಂಭಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಕಳೆದ ಹಲವು ದಿನಗಳಿಂದ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಈ ಪ್ರತಿಭಟನೆ ದೇಶದ ವಿವಿಧ ಭಾಗಗಳ ವಿದ್ಯಾರ್ಥಿಗಳು, ಸಾಮಾಜಿಕ ಸಂಘಟನೆಗಳು ಹಾಗೂ ನಾಗರಿಕ ಸಮಾಜದ ಪ್ರತಿನಿಧಿಗಳ ಗಮನ ಸೆಳೆದಿದೆ. ದಿನನಿತ್ಯ ನೂರಾರು ಮಂದಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ವಾಂಗ್ಚುಕ್ ಅವರಿಗೆ ಬೆಂಬಲ ಸೂಚಿಸುತ್ತಿದ್ದಾರೆ. ಜುಲೈ 20ರಂದು ನಡೆಯಲಿರುವ ‘ಸಂಸತ್ ಚಲೋ’ ಕಾರ್ಯಕ್ರಮದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಪ್ರತಿಭಟನಾ ಸಂಘಟಕರು ತಿಳಿಸಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆರೋಗ್ಯ ಗಂಭೀರವಾದರೂ ಉಪವಾಸ ಮುಂದುವರಿಸಿದ ಸೋನಮ್ ವಾಂಗ್ಚುಕದೇಶೀ ಪಿಸ್ತೂಲ್ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನುತಿಲಾರಿ–ರಕ್ಕಸಕೊಪ್ಪ ಜಲಾಶಯ ಸಂಪರ್ಕಕ್ಕೆ ಆಗ್ರಹಬೆಳಗಾವಿ ಚಿನ್ನಾಭರಣ ಅಂಗಡಿಯಲ್ಲಿ ಕಳ್ಳತನಕ್ಕೆ ವಿಫಲ ಯತ್ನಸಂಬಂಧಿಕರಿಂದ ಇಬ್ಬರು ಸಹೋದರರ ಬರ್ಬರ ಹತ್ಯೆಜನಬೆಂಬಲ ಸಿಕ್ಕರೆ 2028ರಲ್ಲಿ ನನ್ನ ತಂದೆ ಮುಖ್ಯಮಂತ್ರಿ : ಪ್ರಿಯಾಂಕಾ ಜಾರಕಿಹೊಳಿಭಾರತ ನಾಯಕತ್ವದ ಬೇಜವಾಬ್ದಾರಿಯಿಂದ ಬುಲೆಟ್ ರೈಲು ಯೋಜನೆ ವಿಳಂಬ: ಜಪಾನ್ ಮಾಜಿ ಸಚಿವ ಆರೋಪಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಭಾರಿ ಮಳೆ: ಆರೆಂಜ್ ಅಲರ್ಟವಾಂಗ್ಚೂಕ್ ತಂದೆಯ ಉಪವಾಸ ಅಂತ್ಯಗೊಳಿಸಿದ್ದ ಇಂದಿರಾ: ಸೋನಿಯಾ ನೆನಪುಆಂಧ್ರದಲ್ಲಿ ಮತ್ತೆ ಕೊರೊನಾ : 20 ದಿನಗಳಲ್ಲಿ ನಾಲ್ವರ ಸಾವು, ಗಡಿ ಜಿಲ್ಲೆಗಳಲ್ಲಿ ಹೈ ಅಲರ್ಟ