LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸಹಪಾಠಿ ವಿದ್ಯಾರ್ಥಿನಿಯನ್ನು ಬೆತ್ತಲೆ ಮಾಡಿದ ವಿದ್ಯಾರ್ಥಿಗಳು! ಪೊಲೀಸರಿಗೆ ದೂರು

ಪುಣೆ, ೬-ತನ್ನ ರೂಮ್‌ಮೇಟ್‌ಗಳು ತನ್ನನ್ನು ಸುಲಿಗೆ ಮಾಡಿದ್ದಾರೆ,  ಬೆತ್ತಲೆಗೊಳಿಸಿದ್ದಾರೆ ಎಂದು ಆರೋಪಿಸಿ ಹರಿಯಾಣದ ವಿದ್ಯಾರ್ಥಿನಿಯೊಬ್ಬಳು ನೀಡಿದ ದೂರಿನ ಮೇರೆಗೆ ಪುಣೆಯ ಮಹಾರಾಷ್ಟ್ರ ಪೊಲೀಸರು ತನಿಖೆ ಆರಂಭಿಸಿದ್ದಾರೆ.



ಅಕ್ಟೋಬರ 17 ರಂದು ವಘೋಲಿಯ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಚಿನ್ನದ ಸರ ಮತ್ತು ಲ್ಯಾಪ್‌ಟಾಪ್ ಕಳ್ಳತನವಾಗಿದೆ ಎಂದು ಆರೋಪಿಸಿ ಹಲ್ಲೆ ಮಾಡಿದ್ದಾರೆ. ಆದರೆ ಆರೋಪವನ್ನು ಯುವತಿ ಸಾರಾಸಗಟಾಗಿ ನಿರಾಕರಿಸಿದ್ದಳು. ನಂತರ ಇಬ್ಬರು ಹುಡುಗಿಯರು ಸಂತ್ರಸ್ತೆಯನ್ನು ಎದುರಿಸಲು ಮೂವರು ವಿದ್ಯಾರ್ಥಿಗಳನ್ನು ಕರೆದಿದ್ದಾರೆ. ಅವರು ಯುವತಿಯನ್ನು ಸಂಪೂರ್ಣವಾಗಿ ವಿವಸ್ತ್ರಗೊಳಿಸಿ ಒತ್ತಾಯಿಸಿ ಹಣ ದೋಚಿದ್ದಾರೆ. ವಾಘೋಲಿಯಲ್ಲಿರುವ ಅವರ ಬಾಡಿಗೆ ಫ್ಲಾಟ್ ನಲ್ಲಿ ಈ ಘಟನೆ ನಡೆದಿದೆ.



ಇತರ ಇಬ್ಬರು ಯುವತಿಯರು ಸೇರಿದಂತೆ ಐವರು ಸ್ನೇಹಿತರು ಬೇರೆ ಬೇರೆ ರಾಜ್ಯಗಳಿಂದ ಬಂದವರು. ಘಟನೆ ವೇಳೆ ಸಂತ್ರಸ್ತೆಯನ್ನು ವೈಯಕ್ತಿಕವಾಗಿ, ಆಕೆಯ ಲಗೇಜ್ ಮತ್ತು ಇತರ ವಸ್ತುಗಳನ್ನು ಪರಿಶೀಲಿಸಿದ್ದಾರೆ. ಆಕೆಯ ಆಕ್ಷೇಪಣೆಯ ಹೊರತಾಗಿಯೂ ಅವರು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಇಡೀ ಘಟನೆಯನ್ನು ಚಿತ್ರೀಕರಿಸಿದ್ದಾರೆ.



30,000 ನಗದು ಜೊತೆಗೆ ಆನ‌ಲೈನ್ ವರ್ಗಾವಣೆಯಲ್ಲಿ 50,000 ರೂ.ಗಳನ್ನು ಪಾವತಿಸುವಂತೆ ಯುವಕರು ಒತ್ತಾಯಿಸಿದ್ದರು. ಮೊಬೈಲ್ ಮತ್ತು ಲ್ಯಾಪ್‌ಟಾಪ್‌ನಂತಹ ಇತರ ವೈಯಕ್ತಿಕ ವಸ್ತುಗಳನ್ನು ದೋಚಿದ ನಂತರ ಪೊಲೀಸರಿಗೆ ದೂರು ನೀಡದಂತೆ ಎಚ್ಚರಿಸಿದ್ದರು.



ಸಂತ್ರಸ್ತೆಯು ಹಣ ನೀಡಿದ ನಂತರ ತನ್ನ ಊರಿಗೆ ಮರಳಿ, ಅಲ್ಲಿ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಳು. ಇದೀಗ ವಿವರವಾದ ತನಿಖೆಗಾಗಿ ಪ್ರಕರಣದ ತನಿಖೆಯನ್ನು ಪುಣೆಯ ಲೋನಿಕಂಡ್ ಪೊಲೀಸ್ ಠಾಣೆಗೆ ರವಾನಿಸಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ