LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹಲವು ಸೇತುವೆಗಳ ಮುಳುಗಡೆ: ಹಿಡಕಲ್ ಜಲಾಶಯದ ನೀರಿನ ಮಟ್ಟ 5 ಅಡಿ ಹೆಚ್ಚಳ

ಬೆಳಗಾವಿ : ಪಶ್ಚಿಮ ಘಟ್ಟ, ಮಹಾರಾಷ್ಟ್ರ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಬೆಳಗಾವಿ ಜಿಲ್ಲೆಯಲ್ಲಿ ನದಿಗಳು ಮೈದುಂಬಿ ಹರಿಯುತ್ತಿವೆ.



ಕೃಷ್ಣಾ, ಘಟಪ್ರಭಾ, ಮಲಪ್ರಭಾ, ವೇದಗಂಗಾ, ದೂದಗಂಗಾ, ಹಿರಣ್ಯಕೇಶಿ, ಮಾರ್ಕಂಡೇಯ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಜಿಲ್ಲೆಯಲ್ಲಿ 18 ಸೇತುವೆಗಳು ಮುಳುಗಡೆಯಾಗಿವೆ. ಬುಧವಾರ ರಾತ್ರಿಯಿಂದ ಗುರುವಾರ ಮುಂಜಾನೆಯವರೆಗೆ 8 ಸೇತುವೆಗಳು ಮುಳುಗಡೆಯಾಗಿದ್ದು, ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿವೆ. ಜನ ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ.



ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ 12 ಸೇತುವೆಗಳು ಮುಳುಗಡೆಯಾಗಿದ್ದರೆ, ಮೂಡಲಗಿ ಭಾಗದಲ್ಲಿ ನಾಲ್ಕು ಸೇತಿವೆಗಳು ಮುಳುಗಡೆಯಾಗಿವೆ. ಖಾನಾಪುರ ಭಾಗದಲ್ಲಿ ಎರಡು ಸೇತುವೆಗಳು ಮುಳುಗಡೆಯಾಗಿವೆ. ಗ್ರಾಮಗಳು, ಹೊಲ, ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಜನರು ಕ್ಷಣ ಕ್ಷಣಕ್ಕೂ ಪ್ರವಾಹದ ಭೀತಿಯಲ್ಲಿ ಕಾಲಕಳೆಯುತ್ತಿದ್ದಾರೆ.



ಮಹಾರಾಷ್ಟ್ರದ ಪ್ರವಾಸಿ ತಾಣ ಅಂಬೋಲಿ ಅರಣ್ಯ ಪ್ರದೇಶದಲ್ಲಿ ಸತತ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿರುವ ಹಿಡ್ಕಲ್ ಜಲಾಶಯದ ಪ್ರಮಾಣದಲ್ಲಿ ಗುರುವಾರ ಮುಂಜಾನೆ 8 ಗಂಟೆಗೆ ಅಳತೆ ಮಾಡಿದಂತೆ 5 ಅಡಿ ಹೆಚ್ಚಳವಾಗಿದೆ. ಆ ಭಾಗದಿಂದ ಹಿಡ್ಕಲ್ ಜಲಾಶಯಕ್ಕೆ 30,000 ಸ್ಕ್ಯೂಸೆಕ್ಸ್ ನೀರು ಹರಿದು ಬಂದಿದೆ. 2175 ಅಡಿ ಸಾಮರ್ಥ್ಯದ ಜಲಾಶಯದಲ್ಲಿ 2135 ಅಡಿ ನೀರು ಸಂಗ್ರಹವಾಗಿದೆ.



ಖಾನಾಪುರ ತಾಲೂಕಿನ ಖನಕುಂಬಿ ಮತ್ತು ಜಾ0ಬೋಟಿ ಅರಣ್ಯ ಪ್ರದೇಶದಲ್ಲಿನ ಮಳೆಯಿಂದಾಗಿ ಸವದತ್ತಿಯಲ್ಲಿರುವ ಮಲಪ್ರಭಾ ಜಲಾಶಯದ ನೀರಿನ ಮಟ್ಟ ಒಂದೇ ರಾತ್ರಿ 2 ಅಡಿ ಏರಿಕೆಯಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ