LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನಾಳೆಯೇ ಚುನಾವಣಾ ಬಾಂಡ್ ಮಾಹಿತಿ ನೀಡುವಂತೆ ಎಸ್ ಬಿಐಗೆ ಸುಪ್ರೀಮ ಕೋರ್ಟ ಆದೇಶ

ಹೊಸದಿಲ್ಲಿ, 11: ಚುನಾವಣಾ ಬಾಂಡ್ ಗಳ ವಿವರಗಳನ್ನು ಬಹಿರಂಗಪಡಿಸಲು ಜೂನ್ 30ರ ವರೆಗೆ ಅಂದರೆ ಚುನಾವಣಾ ಮುಗಿಯುವ ವರೆಗೆ ಸಮಯ ಕೋರಿ ಎಸ್​ಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಮ ಕೋರ್ಟ​ ಸೋಮವಾರ ವಜಾಗೊಳಿಸಿದ್ದು ನಾಳೆಯೇ ಮಾಹಿತಿಯನ್ನು ಬಹಿರಂಗ ಪಡಿಸುವಂತೆ ಕೋರ್ಟ​ ಆದೇಶಿಸಿದೆ.



ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ಭಾರತೀಯ ಚುನಾವಣಾ ಆಯೋಗಕ್ಕೆ ಮಾರ್ಚ್​ 15ರೊಳಗೆ ತನ್ನ ಅಧಿಕೃತ ವೆಬ್​ಸೈಟ್​ನಲ್ಲಿ ವಿವರಗಳನ್ನು ಪ್ರಕಟಿಸಬೇಕು ಎಂದು ಹೇಳಿದೆ.



ಈ ಹಿಂದೆ ವಿಚಾರಣೆ ವೇಳೆ ಎಸ್​ಬಿಐ ಪರ ವಾದ ಮಂಡಿಸಿದ ಹಿರಿಯ ವಕೀಲ ಹರೀಶ್​ ಸಾಳ್ವೆ, ಮಾಹಿತಿ ನೀಡಲು ಜೂನ್ 30ರವರೆಗೆ ಕಾಲಾವಕಾಶ ಕೋರಿದ್ದರು. ಬಾಂಡ್​ಗಳ ಖರೀದಿಯ ಬಗ್ಗೆ ಮಾಹಿತಿ ನೀಡುವಂತೆ ನ್ಯಾಯಾಲಯವು ಎಸ್​ಬಿಐಗೆ ಸೂಚಿಸಿದೆ.



ರಾಜಕೀಯ ಪಕ್ಷಗಳ ವಿವರಗಳು ಮತ್ತು ಪಕ್ಷಗಳು ಸ್ವೀಕರಿಸಿದ ಬಾಂಡ್​ಗಳ ಸಂಖ್ಯೆಯನ್ನು ಸಹ ನೀಡಬೇಕು. 5 ವರ್ಷದಲ್ಲಿ 22 ಸಾವಿರಕ್ಕೂ ಅಧಿಕ ಚುನಾವಣಾ ಬಾಂಡ್ ಗಳನ್ನು ಬಿಡುಗಡೆ ಮಾಡಲಾಗಿದ್ದು, ಚುನಾವಣಾ ಬಾಂಡ್‌ಗಳ ಕುರಿತ ಮಾಹಿತಿ ನೀಡಿಕೆಗಾಗಿ ನೀಡಿರುವ ಗಡುವನ್ನು ಮಾರ್ಚ 6 ರಿಂದ ಜೂನ್ 30 ರವರೆಗೆ ವಿಸ್ತರಿಸಿ ಎಂದು ಸುಪ್ರೀಮ ಕೋರ್ಟಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮನವಿ ಮಾಡಿತ್ತು. ಕೇವಲ 3-4 ದಿನಗಳಲ್ಲಿ ನೀಡಬಹುದಾದ ವಿವರವನ್ನು ಜೂನ್ 30ರ ವರೆಗೆ ಅಂದರೆ ಲೋಕಸಭೆ ಚುನಾವಣೆ ಮುಗಿದ ನಂತರ ನೀಡುವುದಾಗಿ ಸುಪ್ರೀಮ ಕೋರ್ಟಗೆ ತಿಳಿಸಿದ್ದ ಎಸ್ ಬಿಐ ಮನವಿ ಬಗ್ಗೆ ದೇಶಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.



ಕಳೆದ ಐದು ವರ್ಷಗಳಲ್ಲಿ 22,217 ಚುನಾವಣಾ ಬಾಂಡ್ ಗಳನ್ನು ವಿವಿಧ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವ ಸಲುವಾಗಿ ಬಳಸಲಾಗಿದೆ ಎಂಬ ಅಂಶವನ್ನು ಭಾರತೀಯ ಸ್ಟೇಟ್ ಬ್ಯಾಂಕ್ ಬಹಿರಂಗಪಡಿಸಿತ್ತು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ