LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಶಾಲಾ ಮಕ್ಕಳಿಗೆ ಸಿಹಿ ವಿಶೇಷ ಭೋಜನ

ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ವಿಶೇಷ ಭೋಜನ, ಶಾಲೆಗಾಗಿ ನಾವು ನೀವು ಕಾರ್ಯಕ್ರಮ ಆಯೋಜಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.



ವಿಶೇಷ ದಿನಗಳಂದು ದಾನಿಗಳ ನೆರವಲ್ಲಿ ಹಬ್ಬದೂಟ ನೀಡಲು ಸೂಚನೆ ನೀಡಲಾಗಿದೆ. ದಾನಿಗಳು, ಟ್ರಸ್ಟ್, ಸಂಘ ಸಂಸ್ಥೆಗಳು, ಎಸ್.ಡಿ.ಎಂ.ಸಿ.ಗಳು ಸಾರ್ವಜನಿಕರು ಸೇರಿದಂತೆ ಸಮುದಾಯದವರು ತಮ್ಮದೇ ಆರ್ಥಿಕ ಅಥವಾ ಆಹಾರ ಸಹಕಾರ ನೆರವಿನೊಂದಿಗೆ ಮಕ್ಕಳಿಗೆ ಸಂಪೂರ್ಣ ವಿಶೇಷ ಭೋಜನ ವ್ಯವಸ್ಥೆ ಅಥವಾ ಬಿಸಿ ಊಟಕ್ಕಾಗಿ ಪೂರಕವಾಗಿ ವಿಶೇಷ ಪೌಷ್ಟಿಕ ಆಹಾರ ಪದಾರ್ಥಗಳನ್ನು ಮಕ್ಕಳಿಗೆ ನೀಡಬಹುದಾಗಿದೆ.



ಪ್ರಸ್ತುತ ಬಿಸಿಯೂಟದೊಂದಿಗೆ ಪೂರಕ ಪೌಷ್ಟಿಕ ಆಹಾರವಾಗಿ ವಿತರಿಸುವ ಆಹಾರ ಪದಾರ್ಥಗಳನ್ನು ಯೋಜನೆಯಡಿ ನೀಡಬಹುದು. ಮೊಟ್ಟೆ, ಶೇಂಗಾ ಚಿಕ್ಕಿ, ಹಲ್ವಾ, ಬಿಸ್ಕೆಟ್, ಹಪ್ಪಳ, ಉಪ್ಪಿನಕಾಯಿ, ವಿವಿಧ ಬಗೆಯ ಸಿಹಿತಿನಿಸು, ಸಂಜೆ ಸ್ನಾಕ್ಸ್, ಬಾಳೆಹಣ್ಣು, ಇತರೆ ಹಣ್ಣು, ಮೊಳಕೆ ಕಾಳು, ಬೆಳಗಿನ ಉಪಹಾರ ಮುಂತಾದ ಮಕ್ಕಳು ಇಷ್ಟಪಡುವ ಪೂರಕ ಆಹಾರ ಪದಾರ್ಥಗಳನ್ನು ನೀಡಬಹುದು ಎಂದು ಹೇಳಲಾಗಿದೆ.



ಊರಿನ ಹಬ್ಬ, ಜಾತ್ರೆ, ರಥೋತ್ಸವ, ರಾಷ್ಟ್ರೀಯ ಹಬ್ಬಗಳು, ಜನ್ಮದಿನ ಜಯಂತಿ, ವಿವಾಹ ವಾರ್ಷಿಕೋತ್ಸವ ಸೇರಿದಂತೆ ಸ್ಥಳೀಯವಾಗಿ ಸಮುದಾಯದಿಂದ ಸಾಮೂಹಿಕವಾಗಿ ಆಚರಿಸುವ ವಿಶೇಷ ಕಾರ್ಯಕ್ರಮಗಳ ಅಂಗವಾಗಿ ವಿಶೇಷ ಭೋಜನ, ವಿಶೇಷ ಪೌಷ್ಠಿಕ ಆಹಾರ ಪದಾರ್ಥಗಳನ್ನು ಮಕ್ಕಳಿಗೆ ನೀಡಬಹುದು ಎಂದು ಹೇಳಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು