LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬಾಲಕಿಯ ರುಂಡ ಕತ್ತರಿಸಿ ಬರ್ಬರವಾಗಿ ಕೊಲೆ ಮಾಡಿದ್ದ ಆರೋಪಿ ಆತ್ಮಹತ್ಯೆ

ಕೊಡಗು : ಎಸ್.ಎಸ್.ಎಲ್.ಸಿ ಪಾಸ್ ಆಗಿ ಸಂಭ್ರಮದಲ್ಲಿದ್ದ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಹತ್ಯೆಗೈದಿದ್ದ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.



ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿ ಊರಿಗೆ ಖುಷಿತಂದಿದ್ದ ವಿದ್ಯಾರ್ಥಿನಿ ಮೀನಾಳನ್ನು ಪ್ರಕಾಶ ಅಲಿಯಾಸ್ ಓಂಕಾರಪ್ಪ ಎಂಬಾತ ಕುತ್ತಿಗೆ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಸೋರ್ಲಬ್ಬಿ ಗ್ರಾಮದಲ್ಲಿ ನಿನ್ನೆ ನಡೆದಿತ್ತು.



ಪ್ರಕರಣ ಸಂಬಂಧ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಆರೋಪಿಗಾಗಿ ಹುಡುಕಾಟ ನಡೆಸಿದ್ದರು. ಇದೀಗ ಆರೋಪಿಯಾದ ಪ್ರಕಾಶ ಅಲಿಯಾಸ್ ಓಂಕಾರಪ್ಪ ಸೂರ್ಲಬ್ಬಿ ಗ್ರಾಮದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿದ್ಯಾರ್ಥಿನಿ ಮೀನಾಳ ಮನೆಯಿಂದ ಮೂರು ಕಿ.ಮೀ ದೂರದಲ್ಲಿ ಆರೋಪಿಯ ಶವ ನೇಣುಬಿಗಿದ ಸ್ಥಿತಿಯಲ್ಲಿ ಪೊಲೀಸರಿಗೆ ಪತ್ತೆಯಾಗಿದೆ.



ಎಸ್.ಎಸ್.ಎಲ್.ಸಿಯಲ್ಲಿ ಉತ್ತಮ ಅಂಕಗಳಿಸಿದ್ದ ಖುಷಿಯಲ್ಲಿದ್ದ ಮೀನಾಳ ನಿಶ್ಚಿತಾರ್ಥ ನಿನ್ನೆ ಮೇ 9ರಂದು ಪ್ರಕಾಶನ ಜೊತೆ ನಿಶ್ಚಯವಾಗಿತ್ತು. ಅಪ್ರಾಪ್ತ ಬಾಲಕಿಯ ನಿಶ್ಚಿತಾರ್ಥ ನಡೆಯುತ್ತಿರುವ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆಗ ಸ್ಥಳಕ್ಕೆ ಬಂದ ಪೊಲೀಸರು ನಿಶ್ಚಿತಾರ್ಥ ನಿಲ್ಲಿಸಿದ್ದರು. ಬಳಿಕ ಎರಡೂ ಕುಟುಂಬದವರು ತಮ್ಮ ತಮ್ಮ ಮನೆಗೆ ವಾಪಸ್ ಆಗಿದ್ದರು. ಆರೋಪಿ ಓಂಕಾರಪ್ಪ ಕೂಡ ಮನೆಗೆ ತೆರಳಿದ್ದ. ಆದರೆ ಆನಂತರ ವಿದ್ಯಾರ್ಥಿನಿ ಮೀನಾಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮಚ್ಚಿನಿಂದ ಆಕೆಯ ರುಂಡ ಕತ್ತರಿಸಿ ಕೊಲೆಗೈದು ಪರಾರಿಯಾಗಿದ್ದ.



ಕೊಲೆ ನಡೆದ ಜಾಗದಲ್ಲಿಯೇ ಕೃತ್ಯಕ್ಕೆ ಬಳಸಿದ್ದ ಮಚ್ಚು ಪತ್ತೆಯಾಗಿತ್ತು. ಪೊಲೀಸರು ಆರೋಪಿ ಬಂಧನಕ್ಕಾಗಿ ಶೋಧ ನಡೆಸಿದ್ದರು. ಆದರೆ ಈಗ ಮೀನಾಳ ಮನೆಯಿಂದ ಮೂರು ಕಿ.ಮೀ ದೂರದಲ್ಲಿ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು