LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕಾಗವಾಡದಲ್ಲಿ ಹೆಂಡತಿಯ ಮೂಗು ಕೊಯ್ದ ಆರೋಪಿಗೆ ಕಠಿಣ ಜೈಲು ಶಿಕ್ಷೆ ಪ್ರಕಟ

ಬೆಳಗಾವಿ: ಪತ್ನಿಗೆ ಮಾನಸಿಕ ಕಿರುಕುಳ ನೀಡಿ ಮೂಗು ಕತ್ತರಿಸಿ ಹಲ್ಲೆ ಮಾಡಿ ಭಾರಿ ಗಾಯ ಮಾಡಿದ ಆರೋಪಿಗೆ ಇಲ್ಲಿಯ 5 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶನಿವಾರ ಶಿಕ್ಷೆ ಪ್ರಕಟಿಸಿದೆ.



ಮಹಾರಾಷ್ಟ್ರದ ಶೆಡಸ್ಯಾಳದ ಸುರೇಶ ಪರಶುರಾಮ ನಾಯಿಕ(38)ಶಿಕ್ಷೆಗೊಳಗಾದ ಆರೋಪಿ. ಈತ ತನ್ನ ಪತ್ನಿ ಕಾಗವಾಡದ ಸುನೀತಾ ನಾಯಿಕ ಅವರ ಮೂಗು ಕತ್ತರಿಸಿ ಹಲ್ಲೆಗೈದಿದ್ದ. ಪ್ರತಿದಿನ ಸಾರಾಯಿ ಕುಡಿದು ಬಂದು ಪತ್ನಿ ಸುನೀತಾಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದ. ಹೀಗಾಗಿ ಸುನೀತಾ ತವರು ಮನೆಯಾದ ಕಾಗವಾಡಕ್ಕೆ ಬಂದು ಮತ್ತೆ ಗಂಡನ ಮನೆಗೆ ಹೋಗಿರಲಿಲ್ಲ. ಆದರೆ, ಆರೋಪಿ ಸುರೇಶ ಆಗಾಗ ಸುನೀತಾರ ತವರು ಮನೆಗೆ ಬಂದು ಕಿರುಕುಳ ನೀಡುವುದನ್ನು ಮುಂದುವರಿಸಿದ್ದ. ಪತ್ನಿ ತವರು ಮನೆಯಲ್ಲೇ ಇದ್ದ ಕಾರಣಕ್ಕೆ ಸಿಟ್ಟಾಗಿದ್ದ ಆರೋಪಿ, 2019 ರ ಜ. 6ರಂದು ರಾತ್ರಿ ಕಾಗವಾಡದ ಪತ್ನಿ ಮನೆಗೆ ಬಂದು ಮನೆಗೆ ಬಾ ಎಂದು ಕರೆದಿದ್ದಾನೆ. ಆಗ ಪತ್ನಿ ನಿರಾಕರಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದ ಆತ ಪತ್ನಿಯನ್ನು ಕೊಲೆಗೈಯುವ ಉದ್ದೇಶದಿಂದ ಚಾಕುವಿನಿಂದ ಮೂಗು ಮತ್ತು ಬಾಯಿಯ ಮೇಲೆ ಕೊಯ್ದು ಭಾರಿ ಪ್ರಮಾಣದಲ್ಲಿ ಹಲ್ಲೆ ಮಾಡಿದ್ದಾನೆ.



ಈ ಬಗ್ಗೆ ಕಾಗವಾಡದ ಹಿಂದಿನ ಪಿಎಸ್ಐ ಹನುಮಂತ ಶಿರಹಟ್ಟಿ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಬೆಳಗಾವಿಯ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಚ್.ಎಸ್ . ಮಂಜುನಾಥ ಅವರು ಅಭಿಯೋಜನೆ ಪರವಾಗಿ ಹಾಜರುಪಡಿಸಲಾದ ಸಾಕ್ಷಿ ಮತ್ತು ವಾದ-ವಿವಾದ ಅವಲೋಕಿಸಿ ಆರೋಪಿ ಸುರೇಶ ನಾಯಿಕಗೆ ಒಂದು ವರ್ಷ ಜೈಲು ಮತ್ತು 10,000 ರೂ.ದಂಡ ಮತ್ತು ಚಾಕುವಿನಿಂದ ಮೂಗು ಮತ್ತು ಬಾಯಿಗೆ ಭಾರಿ ಪ್ರಮಾಣದಲ್ಲಿ ಗಾಯಪಡಿಸಿದ್ದ ಅಪರಾಧಕ್ಕೆ 5 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 30,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರ ಸರಕಾರಿ ಅಭಿಯೋಜಕ ಐ.ಎಂ.ಮಠಪತಿ ವಾದ ಮಂಡಿಸಿದ್ದರು
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು