LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

15 ದಿನದ ಹಿಂದಷ್ಟೇ ಮದುವೆಯಾದ ನವದಂಪತಿಗಳ ದುರ್ಮರಣ

ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನವದಂಪತಿ ಸಾವನ್ನಪ್ಪಿರುವ ಮನಕಲಕುವ ಘಟನೆ  ಜಿಲ್ಲೆಯ ಶಿಗ್ಗಾಂವ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಬೆಳಗಿನ ಜಾವ ನಡೆದಿದೆ .



ಕಾರ್ತಿಕ್ ಹೂಗಾರ (34) ಮತ್ತು ಐಶ್ವರ್ಯ ಹೂಗಾರ (30) ಮೃತ ದಂಪತಿ. 15 ದಿನಗಳ ಹಿಂದೆಯಷ್ಟೇ ಇವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.



ದೇವರ ದರ್ಶನ ಪಡೆದು ಬರುವಾಗ ದುರಂತ: ಕಾರ್ತಿಕ್ ಅವರು ಪತ್ನಿ ಮತ್ತು ಸಂಬಂಧಿಕರ ಜೊತೆ  ಧಾರವಾಡ ಜಿಲ್ಲೆಯ ನವಲಗುಂದ ಕಾಮಣ್ಣನ ದರ್ಶನಕ್ಕೆ ಹೋಗಿದ್ದರು. ಕಾಮಣ್ಣನ ದರ್ಶನ ಪಡೆದು ಹಾವೇರಿಗೆ ಆಗಮಿಸುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ವಿಚಿತ್ರ ಅಂದರೆ ಐಶ್ವರ್ಯ ಅವರ ಗ್ರಾಮ ನೀರಲಗಿ ಕ್ರಾಸ್ ಬಳಿಯೇ ಅಪಘಾತ ಸಂಭವಿಸಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಶಿಗ್ಗಾಂವ್ ತಾಲೂಕಾಸ್ಪತ್ರೆಗೆ ತರಲಾಗಿದೆ. ಮೃತರ ಸಂಬಂಧಿಕರ ಅಕ್ರಂದನ ಮುಗಿಲುಮುಟ್ಟಿತ್ತು. ಹಾವೇರಿಯಲ್ಲಿ ಸಂಜೆ‌ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.



ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಕಾರಿನಿಂದ ಮೃತದೇಹಗಳನ್ನು ಹೊರತೆಗೆದರು. ಡಿಕ್ಕಿಯ ರಭಸಕ್ಕೆ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿತ್ತು. ಸ್ಥಳಕ್ಕೆ ತಡಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ತಡಸ ಪೊಲೀಸ್ ಠಾಣೆಯ ಪ್ರಕರಣ ದಾಖಲಾಗಿದೆ.



ವರದಿಗಾರ ದಿವಂಗತ ಗಂಗಾಧರ ಹೂಗಾರ ಅವರ ಇಬ್ಬರು ಪುತ್ರರಾದ ಕಾರ್ತಿಕ್ ಮತ್ತು ಕರ್ಣ ಅವರಿಗೆ ಫೆ.14ರಂದು ಮದುವೆಯಾಗಿತ್ತು. ವಿವಾಹದ ಬಳಿಕ ಕರ್ಣ ಮತ್ತು ಅವರ ಪತ್ನಿ ಪ್ರವಾಸಕ್ಕೆ ತೆರಳಿದ್ದರು. ಕಾರ್ತಿಕ್ ತಮ್ಮ ಪತ್ನಿ ಮತ್ತು ಸಂಬಂಧಿಕರೊಂದಿಗೆ ದೇವರ ದರ್ಶನಕ್ಕೆ ಹೋಗಿದ್ದರು ಎಂದು ತಿಳಿದುಬಂದಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ