LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ತವರಿಗೆ ಹೋದ ಪತ್ನಿ ಸೇರಿ ಕುಟುಂಬದ ಆರು ಸದಸ್ಯರಿಗೆ ಬೆಂಕಿ ಹಚ್ಚಿದ ಪತಿ

ಬೆಳಗಾವಿ : ತನ್ನ ಅನುಮತಿಯಿಲ್ಲದೆ ತವರು ಮನೆಗೆ ಹೋಗಿದ್ದ ಪತ್ನಿ ಮತ್ತು ಅವಳ ಮನೆಯಲ್ಲಿದ್ದ ಇತರ ಐವರನ್ನು ಪತಿ ಕ್ರೂರವಾಗಿ ಹಿಂಸಿಸಿದ ಘಟನೆ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ಜರುಗಿದೆ.



ಗಂಡನ ಮನೆಯಲ್ಲಿ ಜಗಳಕ್ಕೆ ಬೇಸತ್ತು ತವರು ಮನೆಗೆ ಹೋದ ಹೆಂಡತಿ ಹಾಗೂ ಆಕೆಯ ಕುಟುಂಬಸ್ಥರನ್ನು ಗಂಡ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಯ ಯತ್ನಿಸಿದ ಘಟನೆ ಕಳೆದ ಡಿಸೆಂಬರ್ 10 ರಂದು ನಡೆದಿದೆ.



ಗಂಡ ಭೀಮಾ ಭೋಸಲೆ ಹೆಂಡತಿ ಹಾಗೂ ಅವರ ಕುಟುಂಬಸ್ಥರನ್ನು ಕೊಲೆಗೆ ಯತ್ನಿಸಿದ ಆರೋಪಿ.ಭೀಮಾ ಅಥಣಿ ತಾಲೂಕಿನ ಯಲಿಹಡಲಗಿ ಗ್ರಾಮದ ನಿವಾಸಿಯಾಗಿದ್ದಾನೆ. ಗಂಡನ ಕಾಟ ತಾಳಲಾರದೇ ತವರು ಮನೆಗೆ ಹೋಗಿದ್ದ ಹೆಂಡತಿ ಹಾಗೂ ಅವರ ಮನೆಯವರನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದಾನೆ.



ಬೇಡವೆಂದರೂ ನೀವು ಹೇಗೆ ನನ್ನ ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಿರಿ ಎಂದು ಸಿಟ್ಟಾಗಿದ್ದ ಗಂಡ ಹೆಂಡತಿಯ ತವರು ಮನೆಗೆ ಹೋಗಿ ಮನೆಯಲ್ಲಿದ್ದ ಪತ್ನಿ ರಾಣಿ ಸೇರಿ 6 ಜನರ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ್ದಾನೆ. ಅವರೆಲ್ಲ ಅಥಣಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯನ್ನು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ಭೀಮಾಶಂಕರ್ ಗುಳೇದ ಕನ್ಫರ್ಮ್ ಮಾಡಿದ್ದಾರೆ.



ಸಂಜು ಸಾಳುಂಕೆ, ಶಂಕರ್ ಸಾಳುಂಕೆ, ಕ್ರಿಷ್ಣಾ ಸಾಳುಂಕೆ, ಅಂಕುಶ ಪಡತಾರೆ, ಮನೋಹರ ಪಡತಾರೆಯವರಿಗೆ ಗಂಭೀರ ಗಾಯವಾಗಿವೆ. ಸದ್ಯಕ್ಕೆ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಐಗಳಿ ಪೊಲೀಸರು ಆರೋಪಿ ಭೀಮಾ ಮೇಲೆ ಕೊಲೆಯತ್ನ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ