LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಪತ್ನಿಯ ಉಸಿರುಗಟ್ಟಿಸಿ ಕೊಲೆಗೈದ ಪತಿಗೆ ಶಿಕ್ಷೆ ಜಾರಿ

ಬೆಳಗಾವಿ :



ಪತ್ನಿಯನ್ನು ಕೊಲೆಗೈದ ಪತಿಗೆ ಬೆಳಗಾವಿಯ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೋಮವಾರ ಕಠಿಣ ಜೀವಾವಧಿ ಶಿಕ್ಷೆ ಮತ್ತು ರೂ.50 ಸಾವಿರ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.



ಮೂಲತಃ ವಿಜಯಪುರ ಜಿಲ್ಲೆ ತಾಳಿಕೋಟಿಯ

ಪರಶುರಾಮ ಗಣಪತಿ ಪೀಸೆ(40)ಶಿಕ್ಷೆಗೊಳಗಾದ ಆರೋಪಿ.



2020 ರ ಫೆಬ್ರವರಿ 13 ರಂದು ಮಧ್ಯಾಹ್ನ 1 ರಿಂದ 1.30 ರ ಸುಮಾರಿಗೆ ಈತ ತನ್ನ ಪತ್ನಿ ಕವಿತಾ ಅವರೊಂದಿಗೆ ತನ್ನ ಸಣ್ಣ ಮಕ್ಕಳನ್ನು ಎತ್ತಿಕೊಳ್ಳುವ ವಿಚಾರದಲ್ಲಿ ತಂಟೆ ತೆಗೆದು ಅದೇ ಸಿಟ್ಟಿನಿಂದ ಅವರ ಕುತ್ತಿಗೆ ಹಿಚುಕಿ ಉಸಿರುಗಟ್ಟಿಸಿ ಕೊಲೆಗೈದಿದ್ದ. ಈ ಬಗ್ಗೆ ಕವಿತಾ ಅವರ ತಂದೆ ಕಲಬುರ್ಗಿಯ ಸುನಿಲ್ ಕುಮಾರ್ ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಈ ಪ್ರಕರಣದ ತನಿಖೆ ನಡೆಸಿದ ಅಂದಿನ ಕ್ಯಾಂಪ್ ಪೊಲೀಸ್ ಠಾಣೆಯ ಪಿ ಐ ಡಿ.ಸಂತೋಷ ಕುಮಾರ್ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರಕಾರದ ಪರ ಸರ್ಕಾರಿ ಅಭಿಯೋಜಕ ಐ.ಎಂ.ಮಠಪತಿ ವಾದ ಮಂಡಿಸಿದ್ದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ