LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪತ್ನಿಯ ಉಸಿರುಗಟ್ಟಿಸಿ ಕೊಲೆಗೈದ ಪತಿಗೆ ಶಿಕ್ಷೆ ಜಾರಿ

ಬೆಳಗಾವಿ :



ಪತ್ನಿಯನ್ನು ಕೊಲೆಗೈದ ಪತಿಗೆ ಬೆಳಗಾವಿಯ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೋಮವಾರ ಕಠಿಣ ಜೀವಾವಧಿ ಶಿಕ್ಷೆ ಮತ್ತು ರೂ.50 ಸಾವಿರ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.



ಮೂಲತಃ ವಿಜಯಪುರ ಜಿಲ್ಲೆ ತಾಳಿಕೋಟಿಯ

ಪರಶುರಾಮ ಗಣಪತಿ ಪೀಸೆ(40)ಶಿಕ್ಷೆಗೊಳಗಾದ ಆರೋಪಿ.



2020 ರ ಫೆಬ್ರವರಿ 13 ರಂದು ಮಧ್ಯಾಹ್ನ 1 ರಿಂದ 1.30 ರ ಸುಮಾರಿಗೆ ಈತ ತನ್ನ ಪತ್ನಿ ಕವಿತಾ ಅವರೊಂದಿಗೆ ತನ್ನ ಸಣ್ಣ ಮಕ್ಕಳನ್ನು ಎತ್ತಿಕೊಳ್ಳುವ ವಿಚಾರದಲ್ಲಿ ತಂಟೆ ತೆಗೆದು ಅದೇ ಸಿಟ್ಟಿನಿಂದ ಅವರ ಕುತ್ತಿಗೆ ಹಿಚುಕಿ ಉಸಿರುಗಟ್ಟಿಸಿ ಕೊಲೆಗೈದಿದ್ದ. ಈ ಬಗ್ಗೆ ಕವಿತಾ ಅವರ ತಂದೆ ಕಲಬುರ್ಗಿಯ ಸುನಿಲ್ ಕುಮಾರ್ ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಈ ಪ್ರಕರಣದ ತನಿಖೆ ನಡೆಸಿದ ಅಂದಿನ ಕ್ಯಾಂಪ್ ಪೊಲೀಸ್ ಠಾಣೆಯ ಪಿ ಐ ಡಿ.ಸಂತೋಷ ಕುಮಾರ್ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರಕಾರದ ಪರ ಸರ್ಕಾರಿ ಅಭಿಯೋಜಕ ಐ.ಎಂ.ಮಠಪತಿ ವಾದ ಮಂಡಿಸಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST