LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕೊಲೆಯಾಗಿದ್ದವಳು 7 ವರ್ಷಗಳ ಬಳಿಕ ಪ್ರಿಯಕರನೊಂದಿಗೆ ಪತ್ತೆ; ಕೊಲೆ ಆರೋಪಿ 7 ವರ್ಷಗಳಿಂದ ಜೈಲಿನಲ್ಲಿ

ಲಖನೌ, ೮- 7 ವರ್ಷದ ಹಿಂದೆ ಹುಡುಗಿ ಸತ್ತಿದ್ದಾಳೆ ಎಂದು ಆಕೆಯ ಸಾವಿಗೆ ಕಾರಣನಾಗಿದ್ದಾನೆಂದು 7 ವರ್ಷದ ಹಿಂದೆ ವ್ಯಕ್ತಿಯೊಬ್ಬನನ್ನು ಜೈಲಿಗೆ ನೂಕಲಾಯಿತು. ಆದರೆ ಏಳು ವರ್ಷಗಳ ಹಿಂದೆ ಸಾವನ್ನಪ್ಪಿದ್ದಾಳೆ ಎಂದು ನಂಬಲಾಗಿದ್ದ ಮಹಿಳೆ ಜೀವಂತವಿದ್ದಾಳೆ. ಅವಳ ಕೊಲೆ ಆರೋಪದ ಮೇಲೆ ವ್ಯಕ್ತಿ ಮಾತ್ರ ಜೈಲಲ್ಲಿದ್ದಾನೆ. ಉತ್ತರಪ್ರದೇಶದಲ್ಲಿ ಈ ಘಟನೆ ನಡೆದಿದೆ.



ವಿಷ್ಣು ಎಂಬಾತನಿಗೆ ನ್ಯಾಯಾಲಯವು ಏಳು ವರ್ಷಗಳ ಹಿಂದೆ ಕೊಲೆ ಆರೋಪದಡಿ ಜೈಲು ಶಿಕ್ಷೆಯನ್ನು ವಿಧಿಸಿತು. ಯುವತಿಯ ತಂದೆ ಆಗ್ರಾದಲ್ಲಿ ಅಪರಿಚಿತ ಶವವನ್ನು ತಮ್ಮ ಮಗಳು ಎಂದು ಗುರುತಿಸಿದ್ದರು. ಅಪ್ರಾಪ್ತೆಯನ್ನು ಅಪಹರಿಸಿ ಕೊಂದ ಎಂಬ ಪ್ರಕರಣದಲ್ಲಿ ವಿಷ್ಣು ಜೈಲು ಪಾಲಾಗಿದ್ದ. ಈ ಮಧ್ಯೆ, ವಿಷ್ಣು ಅವರ ತಾಯಿ ತಮ್ಮ ಮಗನಿಗೆ ನ್ಯಾಯ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು.



ಹದಿಹರೆಯದವನಾಗಿದ್ದಾಗ ಮಹಿಳೆಯನ್ನು ಅಪಹರಿಸಿ ಕೊಂದ ಆರೋಪ ಹೊತ್ತಿದ್ದ ಮಗನಿಗೆ ನ್ಯಾಯ ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಮಹಿಳೆ ಸತ್ತಿಲ್ಲ. ಆಕೆ ಬದುಕಿದ್ದಾಳೆ. ಬೇರೊಬ್ಬನೊಂದಿಗೆ ಮದುವೆಯಾಗಿದ್ದಾಳೆ , ನನ್ನ ಮಗ ನಿರಪರಾಧಿ ಎಂದಿದ್ದರು.



ವಿಷ್ಣು ತಾಯಿಯ ಅರ್ಜಿಯಂತೆ ಘಟನೆಯ ಕುರಿತು ತನಿಖೆಗೆ ಆದೇಶಿಸಿದಾಗ ಪೊಲೀಸರು ಮಹಿಳೆಯನ್ನು ಅಲಿಗಡ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಆಕೆಯ ಗುರುತು ಪತ್ತೆಹಚ್ಚಲು ಡಿಎನ್‌ಎ ಪರೀಕ್ಷೆ ಮಾಡಿಸಿದರು. ಮಹಿಳೆಯ ತಂದೆ ಆಕೆಯನ್ನು ತನ್ನ ಮಗಳು ಎಂದು ಗುರುತಿಸಿದ್ದಾರೆ.



ಆ ತರುಣಿ ಅಪ್ರಾಪ್ತೆಯಾಗಿದ್ದಾಗ 7 ವರ್ಷದ ಹಿಂದೆ ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿ ಮದುವೆಯಾಗಿ ಬೇರೆಡೆ ನೆಲೆಸಿದ್ದಳು. ಇದೀಗ ಪೊಲೀಸರ ಸಮಗ್ರ ತನಿಖೆಯಿಂದ ನಿಜ ವಿಚಾರ ಹೊರಗೆ ಬಂದಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು