LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸಾಲ ಪಡೆದುಕೊಳ್ಳಲು ಹೋದ ವ್ಯಕ್ತಿ ದಾಖಲೆ ಪಡೆದು 11 ಲಕ್ಷ ರೂ. ಸಾಲ ಪಡೆದು ಪಂಗನಾಮ

ವಿಜಯಪುರ: ಸಾಲ ತೆಗೆದುಕೊಳ್ಳಲು ಹೋದ ವ್ಯಕ್ತಿಯ ದಾಖಲೆ ಪಡೆದು ಆತನಿಗೆ ಗೊತ್ತಿಲ್ಲದಂತೆ 11 ಲಕ್ಷ ರೂಪಾಯಿ ಸಾಲ ಪಡೆದು ಮೋಸ ಮಾಡಿರುವ ಘಟನೆ ವಿಜಯಪುರದಲ್ಲಿ ಬೆಳಕಿಗೆ ಬಂದಿದೆ.



ಬಸವೇಶ್ವರ ವೃತ್ತದಲ್ಲಿರುವ ವಿಡಿಸಿಸಿ ಬ್ಯಾಂಕ್ನಲ್ಲಿ ಮಠಪತಿ ಗಲ್ಲಿಯ ನಿವಾಸಿ ಅರವಿಂದ ಕೃಷ್ಣ ಕಾಳೆ ಎಂಬುವವರು ವಂಚನೆಗೆ ಒಳಗಾಗಿದ್ದಾರೆ.



ಅರವಿಂದ ಅವರ ಹೆಸರಿನ ಖಾತೆಯ ಮೂಲಕ 11 ಲಕ್ಷ ರೂ ಸಾಲ ತೆಗೆದಿದ್ದು, ಬ್ಯಾಂಕ್ನಿಂದ ನೋಟಿಸ್ ಬಂದಾಗಲೇ ವಂಚನೆಯ ಅರಿವಾಗಿದೆ.



ನಗರದ ದಿವಟೇರಿ ಗಲ್ಲಿಯ ನಿವಾಸಿ ಶಿವಕುಮಾರ ನಿಂಗೊಂಡ ಚಿಕ್ಕೋಡಿ ಎಂಬಾತ ಕಳೆದ ವರ್ಷ 2021 ಫೆಬ್ರವರಿ 15ರಂದು ಅರವಿಂದ ಅವರಿಗೆ ಪರಿಚಯವಾಗಿದ್ದರು.



ಸಾಲ ಕೊಡಿಸುವುದಾಗಿ ಹೇಳಿ ಆಧಾರ್ ಕಾರ್ಡ್, ಫೋಟೊ ಹಾಗೂ ಮನೆ ಉತಾರ್​ಪಡೆದುಕೊಂಡು ಮೋಸ ಮಾಡಿದ್ದಾರೆ. ಈ ಕುರಿತು ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು 2022 ಅಕ್ಟೋಬರ್​ನಲ್ಲಿ ವಿಡಿಸಿಸಿ ಬ್ಯಾಂಕಿನಿಂದ ಮೋಸಕ್ಕೊಳಗಾದ ಅರವಿಂದ ಕಾಳೆಗೆ ಸಾಲ ಕುರಿತು ನೋಟಿಸ್ ಬಂದಿದೆ.

ಆ ನಂತರ ತಾನು ಶಿವಕುಮಾರ ಚಿಕ್ಕೋಡಿ ಎಂಬವನಿಂದ ಮೋಸ ಹೋಗಿರುವುದಾಗಿ ಅರವಿಂದ ಕಾಳೆಗೆ ಅರಿವಿಗೆ ಬಂದಿದೆ. ಸದ್ಯ ಸಾಲ ಪಡೆದ ಮಾಹಿತಿಯನ್ನು ಬ್ಯಾಂಕ್, ಮನೆ ಜಪ್ತಿ ಮಾಡುವುದಾಗಿ ನೋಟಿಸ್​ ನೀಡಿದೆ.

ಖೊಟ್ಟಿ ದಾಖಲೆ ಸೃಷ್ಟಿ ಮಾಡಿ, ನಕಲಿ ಸಹಿ ಮಾಡಿ ವಿಡಿಸಿಸಿ ಬ್ಯಾಂಕ್ ನಿಂದ 11ಲಕ್ಷ ರೂ. ಹಣ ಮೋಸ ಮಾಡಿ ತಲೆಮರೆಸಿಕೊಂಡಿರುವ ಶಿವಕುಮಾರ ಚಿಕ್ಕೋಡಿ ವಿರುದ್ಧ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು