LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

800 ಕೋಟಿ ತಲುಪಿದ ಜಗತ್ತಿನ ಜನಸಂಖ್ಯೆ 

ಹೊಸದಿಲ್ಲಿ : ಈ ವರ್ಷದ ವಿಶ್ವ ಜನಸಂಖ್ಯಾ ದಿನದಂದು ವಿಶ್ವಸಂಸ್ಥೆ ಬಿಡುಗಡೆ ಮಾಡಿದ ವರದಿಯಲ್ಲಿ ವಿಶ್ವದ ಜನಸಂಖ್ಯೆಯು ನವೆಂಬರ್ 15, 2022ರಂದು 8 ಶತಕೋಟಿ ತಲುಪಲಿದೆ.



ಈ ಪ್ರಕಾರ 2023ರಲ್ಲಿ ಭಾರತವು ಚೀನಾವನ್ನು ಹಿಂದಿಕ್ಕೆ ವಿಶ್ವದ ಅತಿ ಹೆಚ್ಚು ಜನ ಸಂಖ್ಯೆ ಹೊಂದಿರುವ ದೇಶವಾಗಲಿದೆ. ಇದು ಮಾನವ ಅಭಿವೃದ್ಧಿಯಲ್ಲಿ ಒಂದು ಮೈಲಿಗಲ್ಲು ಎಂದು ಪರಿಗಣಿಸುತ್ತದೆ.



ವಿಶ್ವಸಂಸ್ಥೆಯ ಪ್ರಕಾರ, ಜಾಗತಿಕ ಜನಸಂಖ್ಯೆಯು 2030 ರಲ್ಲಿ ಸುಮಾರು 8.5 ಶತಕೋಟಿ, 2050 ರಲ್ಲಿ 9.7 ಶತಕೋಟಿ ಮತ್ತು 2080 ರಲ್ಲಿ ಸುಮಾರು 10.4 ಶತಕೋಟಿ ಬೆಳೆಯಬಹುದು ಎಂದು ಅಂದಾಜಿಸಲಾಗಿದೆ.



ವಿಶ್ವ ಜನಸಂಖ್ಯಾ ದಿನದಂದು ಬಿಡುಗಡೆಯಾದ ವಾರ್ಷಿಕ ವಿಶ್ವ ಜನಸಂಖ್ಯೆಯ ಪ್ರಾಸ್ಪೆಕ್ಟ್ ವರದಿಯು ಜಾಗತಿಕ ಜನಸಂಖ್ಯೆಯು 1950 ರಲ್ಲಿ ಇದ್ದ 2.5 ಶತಕೋಟಿ ಜಾಗತಿಕ ಜನಸಂಖ್ಯೆಗಿಂತ ಮೂರು ಪಟ್ಟು ಹೆಚ್ಚು ಎಂದು ವಿಶ್ವಸಂಸ್ಥೆ ಅಂದಾಜಿಸಿದೆ.



1960 ರ ದಶಕದ ಆರಂಭದಲ್ಲಿ ಒಂದು ಉತ್ತುಂಗದ ನಂತರ, ವಿಶ್ವದ ಜನಸಂಖ್ಯೆ ಬೆಳವಣಿಗೆಯ ದರವು ದಿಢೀರ್ ಕಡಿಮೆಯಾಗಿದೆ. ವಾರ್ಷಿಕ ಜನಸಂಖ್ಯೆ ಬೆಳವಣಿಗೆ ದರ 1962 ರಿಂದ 1965ರ ವರೆಗೆ ಗರಿಷ್ಠ ಶೇ. 2.1 ಇತ್ತು. ಅದು 2020 ರಲ್ಲಿ ಶೇಕಡಾ 1 ಕ್ಕಿಂತ ಕಡಿಮೆಯಾಗಿದೆ.



2050ರ ವೇಳೆಗೆ ಆ ಅಂಕಿ ಅಂಶವು ಸುಮಾರು ಶೇ. 0.5ಕ್ಕೆ ಕುಸಿಯಬಹುದು. ಏಕೆಂದರೆ ಫಲವತ್ತತೆ ದರಗಳಲ್ಲಿನ ನಿರಂತರ ಕುಸಿತ ಜನಸಂಖ್ಯೆ ಬೆಳವಣಿಗೆ ದರ ಕಡಿಮೆಯಾಗಲು ಕಾರಣವಾಗಿದೆ.



2022 ರಲ್ಲಿ, ಎರಡು ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಪ್ರದೇಶಗಳು ಏಷ್ಯಾದಲ್ಲಿವೆ. ಅವುಗಳೆಂದರೆ ಪೂರ್ವ ಮತ್ತು ಆಗ್ನೇಯ ಏಷ್ಯಾದಲ್ಲಿ 2.3 ಶತಕೋಟಿ ಜನರಿದ್ದು ಮಧ್ಯ ಮತ್ತು ದಕ್ಷಿಣ ಏಷ್ಯಾದಲ್ಲಿ 2.1 ಶತಕೋಟಿ ಜನರಿದ್ದಾರೆ. ಚೀನಾ ಮತ್ತು ಭಾರತ, ತಲಾ 1.4 ಶತಕೋಟಿಗಿಂತ ಹೆಚ್ಚು ಜನಸಂಖ್ಯೆಯನ್ನು ಹೊಂದಿವೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ