LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಯಡಿಯೂರಪ್ಪ ವಿರುದ್ಧದ ತನಿಖೆಗೆ ಸುಪ್ರೀಮ ಕೋರ್ಟ ತಡೆ 

ಬೆಂಗಳೂರು : ಭ್ರಷ್ಟಾಚಾರ ತಡೆ ಕಾಯ್ದೆಯಡಿ ಯಡಿಯೂರಪ್ಪ ಮತ್ತು ಇತರರ ವಿರುದ್ಧ ದಾಖಲಾಗಿದ್ದ ಲಂಚ ಪ್ರಕರಣದ ದೂರನ್ನು ಮರುಸ್ಥಾಪಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮಾಜಿ ಸಿಎಂ ಯಡಿಯೂರಪ್ಪ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.



ಅರ್ಜಿದಾರರಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮುಂದಿನ ಪ್ರಕ್ರಿಯೆಗಳಿಗೆ ತಡೆ ನೀಡಿದೆ. ಯಡಿಯೂರಪ್ಪನವರು ತಮ್ಮ ವಿರುದ್ದ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ಸುಪ್ರಿಂಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆಯನ್ನು ಮತ್ತೆ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿತು. ಇದೇ ವೇಳೆ ನ್ಯಾಯಾಪೀಠವು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಕುಟುಂಬದವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧ ಪಟ್ಟಂತೆ ಮಧ್ಯಂತರ ತಡೆ ನೀಡಿದೆ.



ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು ಯಡಿಯೂರಪ್ಪ ಹಾಗೂ ಅವರ ಕುಟುಂಬದವರ ಮೇಲೆ 12 ಕೋಟಿ ಲಂಚ ತೆಗೆದುಕೊಂಡಿದ್ದರು ಅಂತ ಆರೋಪಿಸಿ ಜನಪ್ರತಿನಿಧಿಗಳ ಕೋರ್ಟ್ ಗೆ ದೂರು ನೀಡಿದ್ದರು, ಇದೇ ವೇಳೆ ​ ಜನಪ್ರತಿನಿಧಿಗಳ ಕೋರ್ಟ್ ನವೆಂಬರ್ 2, 2022 ರೊಳಗೆ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿತ್ತು.



ಇದರಲ್ಲಿ ನ್ಯಾಯಾಲಯದ ಆದೇಶದಂತೆ ಲೋಕಾಯುಕ್ತ ಪೊಲೀಸರು ಆರೋಪಿಗಳ ವಿರುದ್ಧ ಎಫ್‌ಐಆರ್ ಮಾಡಿದ್ದರು. ಇದರ ವಿರುದ್ದ ಯಡಿಯೂರಪ್ಪ ಹೈಕೋರ್ಟ್​ ಹಾಗೂ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾದ್ದರು.



 



 



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ