LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹಣ ಸಹಾಯ ಮಾಡಿದ ಅಜ್ಜಿಯನ್ನು ಕೊಂದ ಕಿರಾತಕರು! 

ಹುಕ್ಕೇರಿ : ಕೊಟ್ಟ ಹಣ ವಾಪಸ್ ಕೊಡದೇ ತಪ್ಪಿಸಿಕೊಳ್ಳಲು ಅಜ್ಜಿಯ ಪ್ರಾಣವನ್ನೇ ತೆಗೆದ ಘಟನೆ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ನಡೆದಿದೆ.



ಅಕ್ಟೋಬರ‌ 6 ರಂದು ನಡೆದಿದ್ದ ಈ ಕೊಲೆಯ ಹಿಂದಿನ ರಹಸ್ಯ ಈಗ ಬಯಲಾಗಿದೆ. ಮಲ್ಲವ್ವ ಕಮತೆ ಕೊಲೆಯಾದ ವೃದ್ಧೆ. ಶಂಕರ‌ ರಾಮಪ್ಪ ಪಾಟೀಲ‌ ಮತ್ತು ಆತನ ಗೆಳೆಯ ಮಹೇಶ ಸದಾಶಿವ ಕಬಾಡಗೆ ಬಂಧಿತ ಆರೋಪಿಗಳು.



ಶಂಕರ ಪಾಟೀಲ‌ನಿಗೆ ವೃದ್ಧೆ ಮಲ್ಲವ್ವ ಅವರ ಬಳಿ 50 ಸಾವಿರ ರೂ. ಸಾಲ ಪಡದಿದ್ದ. ಆದರೆ, ಅದನ್ನು ಹಿಂದಿರುಗಿಸಲೇ ಇಲ್ಲ. ವೃದ್ಧೆ ಆಗಾಗ ಕೇಳಲು ಶುರು ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಹಣ ಹೊಂದಿಸುವ ಬದಲು ಅಜ್ಜಿಯನ್ನೇ ಮುಗಿಸಲು ಸಂಚು ರೂಪಿಸಿದ್ದರು. ತನ್ನ ಗೆಳೆಯನಾಗಿರುವ ಮಹೇಶ ಸದಾಶಿವ ಕಬಾಡಗೆಯನ್ನು ಸೇರಿಸಿಕೊಂಡು ಅಜ್ಜಿಯ ಕುತ್ತಿಗೆಗೆ ಸೀರೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ. ಜೊತೆಗೆ ಮಲ್ಲವ್ವ ಅವರ ಮೈಮೇಲಿದ್ದ ಚಿನ್ನಾಭರಣಗಳನ್ನು ಕೂಡಾ ದೋಚಿದ್ದರು. ಸುಮಾರು 1 ಲಕ್ಷ ಮೌಲ್ಯದ ಬಂಗಾರದ ಸರವನ್ನು ಅವರು ಕಿತ್ತುಕೊಂಡು ಪರಾರಿಯಾಗಿದ್ದಾರೆ.



ಕೊಲೆ ಮಾಡಿದವರು ಯಾರು ಎನ್ನುವ ಪ್ರಶ್ನೆ ಪೊಲೀಸರನ್ನು ಬಹುವಾಗಿ ಕಾಡಿತ್ತು. ಹುಕ್ಕೇರಿ ಪೊಲೀಸರು ತಂಡ ರೂಪಿಸಿ ಈಗ ದುಷ್ಟರನ್ನು ಬಂಧಿಸಿದ್ದಾರೆ. ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ