LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ರಸ್ತೆಗೆ ಬಂದು ಕಾರ್ ಹಿಂಬಾಲಿಸಿದ ಹುಲಿ

ಕಾರವಾರ, ೧- ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಲ್ಲಾಪುರ-ಕೈಗಾ-ಬಾರೆ-ಯಲ್ಲಾಪುರ ರಸ್ತೆಯಲ್ಲಿ ಹುಲಿಯೊಂದು ಕಾರಿನ ಪಕ್ಕದಲ್ಲಿಯೇ ಕಾಣಿಸಿಕೊಂಡಿದ್ದು, ಇದರ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.



ಕಾರಿನಲ್ಲಿದ್ದ ಕೈಗಾ ಎನ್‌ಪಿಸಿಐಎಲ್‌ ಉದ್ಯೋಗಿ ಚೇತನ ತೇಲ್ಕರ ಎಂಬವರು ಹುಲಿ ಕಾಣಿಸಿಕೊಂಡಿದ್ದನ್ನು ವೀಡಿಯೊ ಚಿತ್ರೀಕರಣ ಮಾಡಿದ್ದಾರೆ. ಬೃಹತ್‌ ಗಾತ್ರದ ಹುಲಿ ರಸ್ತೆ ಬದಿಯಲ್ಲೇ ನಿಂತು ಕಾರಿನಲ್ಲಿದ್ದವರನ್ನು ನೋಡಿ ಘರ್ಜಿಸಿ, ಕಾರನ್ನು ಹಿಂಬಾಲಿಸಿದಂತೆ ಮಾಡಿದ ಹುಲಿ ನಂತರ ಕೆಲವೇ ಕ್ಷಣದಲ್ಲಿ ಕಾಡಿನಲ್ಲಿ ಮರೆಯಾಗಿದೆ.



"ಕಾಳಿ ಹುಲಿ ಸಂರಕ್ಷಿತ ಅಭಯಾರಣ್ಯ" ದ ಬಫರ್‌ ವಲಯ ಇದಾಗಿದೆ. ಇಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಹುಲಿಗಳಿವೆ. ಈ ಹಿಂದೆಯೂ ಆಗಾಗ ರಸ್ತೆಯಲ್ಲಿ ಹುಲಿಗಳು ಕಾಣಿಸಿಕೊಂಡಿದ ವರದಿಗಳು ಬಂದಿದ್ದವು. ಈ ಮಾರ್ಗವು ಕೈಗಾ ಅಣು ವಿದ್ಯುತ್‌ ಸ್ಥಾವರದಿಂದ ಯಲ್ಲಾಪುರಕ್ಕೆ ತಲುಪಬಹುದಾದ ದಟ್ಟ ಕಾಡಿನ ಮಧ್ಯದ ರಸ್ತೆಯಾಗಿದೆ.



ಕೊಡಸಳ್ಳಿ ಅಣೆಕಟ್ಟಿನ ಹಿನ್ನೀರಿನ ಪ್ರದೇಶದಲ್ಲಿ ಓಡಾಡುವ ಹುಲಿಗಳು ವರ್ಷಕ್ಕೆ ಒಂದೆರಡು ಸಲ ಈ ಭಾಗದಲ್ಲಿ ಕಾಣಿಸಿಕೊಳ್ಳುತ್ತವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಕೈಗಾ ಅಣು ವಿದ್ಯುತ್‌ ಸ್ಥಾವರಕ್ಕೆ ತೆರಳುವ ಉದ್ಯೋಗಿಗಳು ಹಾಗೂ ಈ ಭಾಗದಿಂದ ಯಲ್ಲಾಪುರಕ್ಕೆ ಹೋಗುವವರು ಇದೇ ಮಾರ್ಗದಲ್ಲಿ ಸಾಗುತ್ತಾರೆ. ಅವರಿಗೆ ಆಗಾಗ್ಗೆ ಹುಲಿ- ಚಿರತೆಗಳು ವಾಹನ ಸವಾರರಿಗೆ ಕಾಣಿಸಿಕೊಳ್ಳುತ್ತವೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು