LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕಳಸಾ ಬಂಡೂರಿ ಯೋಜನೆ ಕುರಿತ ಕೇಂದ್ರದ ಆದೇಶದಲ್ಲಿ ದಿನಾಂಕೇ ಇಲ್ಲ: ಜನರ ದಾರಿ ತಪ್ಪಿಸುವ ಕ್ರಮ

ಹುಬ್ಬಳ್ಳಿ: ರಾಜ್ಯ ಸರ್ಕಾರ ಸಲ್ಲಿಸಿದ್ದ ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬಿಡುಗಡೆ ಮಾಡಿದ ಆದೇಶದಲ್ಲಿ ದಿನಾಂಕವೇ ಇಲ್ಲ. ಜನರ ದಾರಿ ತಪ್ಪಿಸುವ ಕೆಲಸ ನಡೆದಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಚ್ ಕೆ ಪಾಟೀಲ ಆರೋಪಿಸಿದ್ದಾರೆ.



ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,

ಸರ್ಕಾರದಿಂದ ಹೊರಡಿಸುವ ಯಾವುದೇ ಆದೇಶದ ಪ್ರತಿಗೆ ದಿನಾಂಕ ಇದ್ದೇ ಇರುತ್ತದೆ. ಆದರೆ ಈ ಆದೇಶದಲ್ಲಿ ಯಾವುದೇ ದಿನಾಂಕ ಇಲ್ಲ. ಇದು ಸರ್ಕಾರಿ ದಾಖಲೆ ಎನ್ನಲು ಸಾಧ್ಯವೇ ಎಂದು ಪ್ರಶ್ನಿಸಿದರು.



2002ರಲ್ಲಿ ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಅಲ್ಲಿ ಈಗಾಗಲೇ ಕಾಮಗಾರಿ ಸಹ ಆರಂಭವಾಗಿದೆ. ಈ ಎಲ್ಲಾ ಕಾಮಗಾರಿಗಳು ಡಿಪಿಆರ್ ಇಲ್ಲದೇ ನಡೆದಿವೆಯೇ? ಕೆಲಸ ಮಾಡುವ ಹಂತದಲ್ಲಿ ಯೋಜನೆ ಇರುವಾಗ ಡಿಪಿಆರ್ ಎನ್ನುವ ಒಂದನೇ ತರಗತಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಪಾಟೀಲ ವ್ಯಂಗ್ಯವಾಡಿದರು.



ದಿನಾಂಕ ಇಲ್ಲದ ಆದೇಶದ ಪ್ರತಿಯನ್ನು ಕೇಂದ್ರ ಸಚಿವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅದನ್ನೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸದನದಲ್ಲಿ ಪ್ರದರ್ಶಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿರುವುದರಿಂದ ಜನರ ದಾರಿ ತಪ್ಪಿಸುವುದು ಬಿಜೆಪಿಯ ತಂತ್ರವಾಗಿದೆ ಎಂದು ಎಚ್ ಕೆ ಪಾಟೀಲ ಹೇಳಿದರು.



ಕೆಲಸ ಆರಂಭ ಮಾಡಬೇಕಾದ ಸಂದರ್ಭದಲ್ಲಿ ಡಿಪಿಆರ್ ಅನುಮತಿ ಬಗ್ಗೆ ಮಾತನಾಡುತ್ತಿರುವುದು ಪುನಃ ಜನರನ್ನು ಮೋಸ ಮಾಡುವುದಾಗಿದೆ. ಅವರಿಗೆ ಯೋಜನೆ ಬಗ್ಗೆ ನಿಜವಾದ ಕಾಳಜಿ ಇದ್ದಿದ್ದರೆ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯಬೇಕಿತ್ತು ಎಂದು ಅವರು ನುಡಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು