LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಜಿಲ್ಲೆಯಲ್ಲಿ ಸಿಲಿಂಡರ್, ಇಂಧನ ಕೊರತೆ ಇಲ್ಲ, ವದಂತಿ ಹರಡಿದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಮೊಹಮ್ಮದ ರೋಷನ್

ಬೆಳಗಾವಿ, ಮಾ.24 : ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್ ಹಾಗೂ ಇಂಧನದ ಯಾವುದೇ ಕೊರತೆ ಇಲ್ಲ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಟ್ಟು ಆತಂಕಕ್ಕೆ ಒಳಗಾಗಬಾರದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮನವಿ ಮಾಡಿದರು.


ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ಮತ್ತು ನಗರದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಬಂಕ್‌ಗಳಲ್ಲಿ ಸಂಗ್ರಹ ತಾತ್ಕಾಲಿಕವಾಗಿ ಖಾಲಿಯಾದರೂ ಐದು ಗಂಟೆಗಳೊಳಗೆ ಮರುಪೂರೈಕೆ ಮಾಡಲಾಗುತ್ತದೆ ಎಂದು ಹೇಳಿದರು.


ಇಂಧನ ಪೂರೈಕೆ ಸಂಸ್ಥೆಗಳು ಹಾಗೂ ಬಂಕ್ ಮಾಲೀಕರೊಂದಿಗೆ ಈಗಾಗಲೇ ಚರ್ಚೆ ನಡೆಸಲಾಗಿದ್ದು, ಎಲ್ಲಿಯೂ ಕೊರತೆ ಕಂಡುಬಂದಿಲ್ಲ ಎಂದು ತಿಳಿಸಿದರು. ಜನರು ಆತಂಕದಿಂದ ಅನಗತ್ಯವಾಗಿ ಇಂಧನ ಸಂಗ್ರಹಕ್ಕೆ ಮುಂದಾಗುತ್ತಿರುವುದರಿಂದ ಈ ರೀತಿಯ ಗೊಂದಲ ಉಂಟಾಗಿದೆ ಎಂದರು.


ಬಂಕ್‌ಗಳಲ್ಲಿ ಬಾಟಲ್ ಅಥವಾ ಕ್ಯಾನ್‌ಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮಾರಾಟಕ್ಕೆ ಅವಕಾಶ ಇಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.


ನಗರ ಪೊಲೀಸ್ ಆಯುಕ್ತ ಭೂಷಣ ಗುಲಾಬ್ ರಾವ್ ಭೋರಸೆ ಮಾತನಾಡಿ, ಯಾವುದೇ ಬಂಕ್‌ಗಳಲ್ಲಿ ಬಾಟಲ್ ಅಥವಾ ಕ್ಯಾನ್‌ಗಳಲ್ಲಿ ಇಂಧನ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ. ಅಕ್ರಮ ಸಂಗ್ರಹ ಹಾಗೂ ಮಾರಾಟ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.


ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೇ ಶಾಂತವಾಗಿ ಸಹಕರಿಸಬೇಕು. ಯಾವುದೇ ಅಕ್ರಮ ಅಥವಾ ಗಲಾಟೆ ಕಂಡುಬಂದರೆ 112 ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು.


ಪತ್ರಿಕಾಗೋಷ್ಠಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಹಾಗೂ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಅಜಯ್ ಪೈ ಉಪಸ್ಥಿತರಿದ್ದರು

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
40 ದಿನದಲ್ಲೇ ತೀರ್ಪು; ಒಂದೂವರೆ ವರ್ಷದ ಮಗುವನ್ನು ಕ್ರೂರವಾಗಿ ಕೊಂದ ರಾಕ್ಷಸನಿಗೆ ಗಲ್ಲು ಶಿಕ್ಷೆಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಗೆ 16,925 ಹುದ್ದೆಗಳ ಮುಂದುವರಿಕೆಗೆ ಸರ್ಕಾರದ ಅನುಮೋದನೆಸಚಿವ ಸಂಪುಟ ವಿಸ್ತರಣೆಗೆ ಒತ್ತಡ ಇಲ್ಲ; ಪಕ್ಷದ ನಾಯಕರು ಕರೆದಾಗ ದಿಲ್ಲಿಗೆ ಹೋಗುತ್ತೇನೆ: ಡಿ.ಕೆ.ಶಿವಕುಮಾರಆಸ್ಟ್ರೇಲಿಯಾದಲ್ಲಿ ಯುವ ಕ್ರಿಕೆಟಿಗರೊಂದಿಗೆ ಮೋದಿ ಸಂವಾದಕೋರ್ಟ ಹಾಲ್‌ನಲ್ಲೇ ಕಾಗದ ಎಸೆದು ಸುಪ್ರೀಂ ಕೋರ್ಟ ಮುಖ್ಯ ನ್ಯಾಯಮೂರ್ತಿಗೆ ನಿಂದನೆದೇಶದಲ್ಲಿ ಪ್ರಶ್ನೆಗಳು ಉದ್ಭವಿಸಿದಾಗ ಪ್ರಧಾನಿ ಮೋದಿ ವಿದೇಶಕ್ಕೆ ಹೋಗುತ್ತಾರೆ: ಪ್ರಿಯಾಂಕ್ ಖರ್ಗೆಬಳ್ಳಾರಿಯಲ್ಲಿ ಎನ್‌ಐಎ ದಾಳಿ; ಉಗ್ರ ಚಟುವಟಿಕೆಗಳ ಸಂಚುಮೇವು ತರಲು ತೆರಳಿದ್ದ ವೃದ್ಧೆಯ ಮೇಲೆ ಅತ್ಯಾಚಾರ, ಬರ್ಬರ ಹತ್ಯೆಹೆಲ್ಮೆಟ್‌ನಿಂದ ಹಲ್ಲೆ ನಡೆಸಿ ಪತ್ನಿಯ ಬರ್ಬರ ಹತ್ಯೆವಾಯುದಾಳಿಗೆ ಪ್ರತಿಯಾಗಿ ಅಮೆರಿಕ ನೆಲೆಗಳ ಮೇಲೆ ಇರಾನ್ ಪ್ರತಿದಾಳಿ